ಸುರ್ಜೇವಾಲಾ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಮಹತ್ವದ ಸಭೆ
Team Udayavani, Aug 16, 2022, 12:32 PM IST
ಬೆಂಗಳೂರು: ಪಕ್ಷದ ವತಿಯಿಂದ ಇತ್ತೀಚೆಗೆ ನಡೆಸಿದ ಸಮೀಕ್ಷೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಇಂದು ಮಹತ್ವದ ಸಭೆ ನಡೆಸಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು, ಪ್ರಚಾರ, ಪ್ರಣಾಳಿಕೆ ಸಮಿತಿಗಳ ಜೊತೆ ಸಭೆ ನಡೆಯುತ್ತದೆ.
ಇದನ್ನೂ ಓದಿ:ಹರ್ ಘರ್ ತಿರಂಗಾ- ಈ ವರ್ಷ 30 ಕೋಟಿಗೂ ಅಧಿಕ ರಾಷ್ಟ್ರಧ್ವಜ ಮಾರಾಟ, 500 ಕೋಟಿ ಆದಾಯ: ಸಿಎಐಟಿ
ಚುನಾವಣಾ ರಣತಂತ್ರ ಸಂಬಂಧ ಸಭೆಯಲ್ಲಿ ಚರ್ಚೆ ನಡೆದಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್, ರಾಮಲಿಂಗಾ ರೆಡ್ಡಿ, ಹೆಚ್.ಕೆ ಪಾಟೀಲ್, ಸಲೀಂ ಅಹಮ್ಮದ್, ಧೃವ ನಾರಾಯಣ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.ಚುನಾವಣಾ ಚಾಣಾಕ್ಷ ಪ್ರಶಾಂತ್ ಕಿಶೋರ್ ಜೊತೆ ಕೆಲಸ ಮಾಡಿದ್ದ ಸುನಿಲ್ ಕನುಗೊಳ್ ಈ ಸಭೆಯಲ್ಲಿ ಭಾಗಿಯಾಗಿದ್ದಾರೆ.