ವಿಧಾನ ಪರಿಷತ್ ಅವಶ್ಯಕತೆ ಇದೆಯೇ? :ಆತ್ಮಾವಲೋಕನವಾಗಬೇಕು ಎಂದ ಸಿಎಂ

ಪರಿಷತ್ ಅಸ್ತಿತ್ವದ ಬಗ್ಗೆ ಮತ್ತೆ ಹುಟ್ಟಿದ ಚರ್ಚೆ

Team Udayavani, Jan 5, 2022, 1:32 PM IST

1-adsadds-r3r

ಬೆಂಗಳೂರು : ರಾಜ್ಯದಲ್ಲಿ ವಿಧಾನ ಪರಿಷತ್ ಅವಶ್ಯಕತೆ ಇದೆಯೇ ? ಎಂಬ ಪ್ರಶ್ನೆ ಆಗಾಗ ಉದ್ಭವವಾಗುತ್ತಿದ್ದು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಬುಧವಾರ  ಅಭಿಪ್ರಾಯ ಪಟ್ಟಿದ್ದಾರೆ.

ಸದಸ್ಯತ್ವ ಅವಧಿ ಮುಕ್ತಾಯಗೊಂಡ ಪರಿಷತ್ ಸದಸ್ಯರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಬೊಮ್ಮಾಯಿ ಎತ್ತಿರುವ ಈ ಪ್ರಶ್ನೆ ಮಹತ್ವ ಪಡೆದುಕೊಂಡಿದೆ.

ನಾನೂ ಕೂಡಾ ಪರಿಷತ್ ಸದಸ್ಯನಾಗುವ ಮೂಲಕವೇ ರಾಜಕೀಯ ಬದುಕು ಆರಂಭಿಸಿದ್ದು. ಇದಕ್ಕೆ ಘನವಾದ ಇತಿಹಾಸ, ಪರಂಪರೆ ಇದೆ ಎಂಬುದನ್ನು ಯಾರೂ ಮರೆಯುವಂತಿಲ್ಲ ಎಂದು ಹೇಳಿದರು.

ವಿಧಾನ ಪರಿಷತ್ತಿನ ಇತಿಹಾಸ, ಪರಂಪರೆಯನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬ ಪ್ರಶ್ನೆಯ ಜತೆಗೆ ವಿಧಾನ ಪರಿಷತ್ತಿನ ಅಗತ್ಯವಿದೆಯೇ ? ಎಂಬ ಚರ್ಚೆ ಈಗ ಹುಟ್ಟಿಕೊಂಡಿದೆ. ಪರಿಸ್ಥಿತಿ, ಸಂದರ್ಭ ಆಧರಿಸಿ ಪ್ರಶ್ನೆ ಹುಟ್ಟಿಕೊಂಡಿದೆ. ಹೀಗಾಗಿ ಪರಿಷತ್ತಿನ ಮೌಲ್ಯ ಹೆಚ್ಚಿಸುವ ಜವಾಬ್ದಾರಿ ನಮ್ಮ ಮೇಲಿದೆ. ಹೀಗಾಗಿ ನಾವುಗಳು ಆತ್ಮಾವಲೋಕನ, ಸಿಂಹಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.

ನಿವೃತ್ತಿ ಪ್ರಶ್ನೆ ಇಲ್ಲ
ರಾಜಕಾರಣದಲ್ಲಿ ಇರುವವರಿಗೆ ನಿವೃತ್ತಿ ಪ್ರಶ್ನೆ ಇಲ್ಲ. ಅರ್ಹತೆ ಮತ್ತು ನಿವೃತ್ತಿ ಇಲ್ಲದ ಕ್ಷೇತ್ರ ರಾಜಕೀಯ. ಆದರೆ ಇಲ್ಲಿ ಸಮಾಜ ನಿರ್ಮಿತವಾದ ಅರ್ಹತೆಗಳಿವೆ. ಅದನ್ನು ಅನುಸರಿಸಬೇಕು ಎಂದು ಅಭಿಪ್ರಾಯಪಟ್ಟರು.

ರಾಜಕಾರಣದಲ್ಲಿ ಪ್ರಸ್ತುತತೆ ಮುಖ್ಯ. ರಾಜಕಾರಣದಲ್ಲಿ ಕ್ರಿಯಾಶೀಲತೆ ಕಳೆದುಕೊಂಡರೆ ಸ್ಪರ್ಧೆಯಲ್ಲಿ ಉಳಿಯುವುದಕ್ಕೆ ಸಾಧ್ಯವಿಲ್ಲ. ಜನರ ಹೃದಯದಲ್ಲಿ ಸ್ಥಾನ ಪಡೆಯಬೇಕು ಎಂದರು.

ಮುಖ್ಯಮಂತ್ರಿಯವರು ಕಾರ್ಯ ಕ್ರಮದಿಂದ ತೆರಳಿದ ಮೇಲೆ ಮಾತನಾಡಿದ ಸಮಾಜಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ವ್ಯವಸ್ಥೆಯನ್ನು ವಿಮರ್ಶೆ ಮಾಡುವ ಸಂದರ್ಭ ಬಂದಾಗ ವಿಧಾನ ಪರಿಷತ್ ಇಂದಿಗೂ ಬಹಳ ಎತ್ತರದಲ್ಲಿದೆ. ಕೆಲವು ಸಂದರ್ಭದಲ್ಲಿ ವಿಧಾನ ಪರಿಷತ್ ಕೆಟ್ಟಿದೆ ಎಂಬ ಭಾವನೆ ಬಂದರೂ ಶಕ್ತಿ ಕಳೆದುಕೊಂಡಿಲ್ಲ. ರಾಮಕೃಷ್ಣ ಹೆಗಡೆ, ದೇವೇಗೌಡರು, ಡಾ.ಆಚಾರ್ಯ ಮೊದಲಾದವರು ಇದನ್ನು ಪ್ರತಿನಿಧಿಸಿದ್ದಾರೆ. ಅವರು ಬಿಟ್ಟು ಹೋದ ಮೌಲ್ಯ ಇದೆ. ಆದರೆ ಈ ಬಾರಿಯ ಚುನಾವಣೆಗೆ ನಡೆದ ಖರ್ಚುಗಳ ವಿಚಾರ ಬಂದಾಗ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಮಾಜಿ ಸಭಾಪತಿ ಬಿ.ಎಲ್.ಶಂಕರ್ ಮಾತನಾಡಿ, ವಿಧಾನ ಪರಿಷತ್ ಅಗತ್ಯವಿದೆಯೇ ಎಂಬ ಪ್ರಶ್ನೆಯನ್ನು ವಿಧಾನಸಭೆಗೆ ಬಿಟ್ಟಿರುವ ವಿಚಾರ ಮಾತ್ರ ನನಗೆ ಒಪ್ಪಿತವಾಗಿಲ್ಲ. ಆದರೆ ಮೇಲ್ಮನೆ ಬೇಡ ಎಂದು ಹೇಳುವವರು ಉತ್ತರ ಪ್ರದೇಶ, ಬಿಹಾರ್, ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಮೇಲ್ಮನೆ ಸದಸ್ಯರು ಎಂಬುದನ್ನು ಯಾರು ಮರೆಯಬಾರದು. ಪರಿಷತ್ ಅವಶ್ಯಕತೆ ಇದೆಯೇ ಎಂಬ ಪ್ರಶ್ನೆಗೆ ಇದಕ್ಕಿಂತ ಬೇರೆ ಉತ್ತರ ಬೇಡ ಎಂದು ಅಭಿಪ್ರಾಯಪಟ್ಟರು. ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.