ಮೈಸೂರು ಪಾಲಿಕೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮೇಯರ್ ಪಟ್ಟ ಅಲಂಕರಿಸಿದ ಬಿಜೆಪಿ
ಮೈಸೂರು ಮಹಾ ನಗರ ಪಾಲಿಕೆಯ ಮೇಯರ್ ಆಗಿ ಸುನಂದ ಪಾಲನೇತ್ರ ಆಯ್ಕೆ
Team Udayavani, Aug 25, 2021, 2:08 PM IST
ಮೈಸೂರು : ಮೈಸೂರು ಮಹಾ ನಗರ ಪಾಲಿಕೆಯ ಮೇಯರ್ ಸ್ಥಾನ ಇದೇ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಪಾಲಿಗೆ ಒಲಿದಿದೆ. ಮೈಸೂರು ಮಹಾ ನಗರ ಪಾಲಿಕೆಯ ಮೇಯರ್ ಆಗಿ ಸುನಂದ ಪಾಲನೇತ್ರ ಆಯ್ಕೆಯಾಗಿದ್ದಾರೆ.
ಮಹಾನಗರ ಪಾಲಿಕೆಯಲ್ಲಿದ್ದ ಕಾಂಗ್ರೆಸ್- ಜೆಡಿಎಸ್ ಹೊಂದಾಣಿಕೆ ಅಂತ್ಯಗೊಂಡಿದ್ದು, ಚುನಾವಣೆ ಕಣದ ಅಂತಿಮ ಹಂತದಲ್ಲಿ ಕಾಂಗ್ರೆಸ್ ಗೆ ಜೆಡಿಎಸ್ ಕೈಕೊಟ್ಟ ಕಾರಣ ಕಾಂಗ್ರೆಸ್ ಹಾಗೂ ಮೈತ್ರಿ ಪಾಲಿಕೆ ಮೇಯರ್ ಆಗಿ ಆಯ್ಕೆಯಾಗಿದ್ದ ರುಕ್ಮಿಣಿ ಮಾದೇ ಗೌಡ ಸದಸ್ಯತ್ವ ರದ್ದಾದ ಹಿನ್ನೆಲೆಯಲ್ಲಿ ಈ ಮೇಯರ್ ಚುನಾವಣೆ ನಡೆದಿದೆ.
ಇದನ್ನೂ ಓದಿ : ಮುಂಬಯಿ ಕನ್ನಡ ಸಂಘ: ಆ. 28ರಂದು ನಿಧಿ ಸಂಗ್ರಹ ಸಮಿತಿ ವಿಶೇಷ ಸಭೆ
ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಅವರಿಗೆ 26 ಮತಗಳು ಹೊಂದಿದರೇ, ಕಾಂಗ್ರೆಸ್ ಅಭ್ಯರ್ಥಿ ಶಾಂತಕುಮಾರಿ ಅವರಿಗೆ 22 ಹಾಗೂ ಜೆಡಿಎಸ್ ಅಭ್ಯರ್ಥಿ ಅಶ್ವಿನಿ ಅನಂತು ಅವರಿಗೆ 19 ಸದಸ್ಯರ ಬಲ ಸಿಕ್ಕಿದೆ.
ಇನ್ನು, ಪಕ್ಷೇತರರು ನಾಲ್ಕು, ಬಿಎಸ್ ಪಿ ಯ ಒಬ್ಬರು ಇದ್ದಿದ್ದರು. ಈ ವೇಳೆ ಜೆಡಿಎಸ್ ಗೆ ಪಕ್ಷೇತರರು ಇಬ್ಬರು, ಬಿ ಎಸ್ ಪಿ ಒಬ್ಬರು ಬೆಂಬಲ ಸೂಚಿಸಿದ ಹಿನ್ನೆಲೆ ಜೆಡಿಎಸ್ ಬಲ 23ಕ್ಕೆ ಏರಿದೆ.
ಸಮ್ಮಿಶ್ರ ಆಡಳಿತದಿಂದ ಮೇಯರ್ ಪಟ್ಟದಿಂದ ವಂಚಿತವಾಗಿದ್ದ ಬಿಜೆಪಿ, ಮೈಸೂರು ಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿ ಬಿಜೆಪಿ ಒಲಿದ ಮೇಯರ್ ಪಟ್ಟ ಲಭಿಸಿದೆ.
ಅತೀ ಹೆಚ್ಚು ಸದಸ್ಯರು ಗೆದ್ದರೂ ಮೇಯರ್ ಸ್ಥಾನ ಸಿಕ್ಕಿರಲಿಲ್ಲ. ಆದರೇ, ಈ ಚುನಾವಣೆಯಲ್ಲಿ ಗೆದ್ದು ನಾಲ್ಕೂವರೆ ತಿಂಗಳ ಅವಧಿಗೆ ಬಿಜೆಪಿ ಮೇಯರ್ ಸ್ಥಾನ ಪಡೆದಿದೆ.
ಇನ್ನು, ಮುಂದಿನ ಎರಡು ಅವಧಿಗೂ ಜೆಡಿಎಸ್ ಗೆ ಮೇಯರ್ ಸ್ಥಾನ ಬಿಟ್ಟು ಕೊಡಲು ಬಿಜೆಪಿ ಒಪ್ಪಂದ ಮಾಡಿಕೊಂಡಿದ್ದು, ಪಾಲಿಕೆಯ 23 ನೇ ಅವಧಿಗೆ 35ನೇ ಮೇಯರ್ ಆಗಿ ಬಿಜೆಪಿಯ ಸುನಂದಾ ಪಾಲನೇತ್ರ ಆಯ್ಕೆಯಾಗಿದ್ದಾರೆ.
ಆಯ್ಕೆ ಪ್ರಕ್ರಿಯೆ ವೇಳೆ ಜೆಡಿಎಸ್ ನಡೆ ಖಂಡಿಸಿ ಕಾಂಗ್ರೆಸ್ ಸದಸ್ಯರು ಆಕ್ರೋಶ ವ್ಯಕ್ತ ಪಡಿಸಿ ಅರ್ಧಕ್ಕೆ ಹೊರ ನಡೆದಿದ್ದಾರೆ.
ಇದನ್ನೂ ಓದಿ : ಡಬಲ್ ಡೋಸ್ ವ್ಯಾಕ್ಸಿನ್ ಪಡೆದಿದ್ದರೂ ಮಾಜಾಳಿ ಚೆಕ್ ಪೋಸ್ಟ್ ನಲ್ಲಿ ತಡೆ : ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!