ನರೇಂದ್ರ ಮೋದಿ ರಣತಂತ್ರ: ಸಮಾಜವಾದಿ ಮೇಲೆ “ಉಗ್ರ’ಸ್ತ್ರ


Team Udayavani, Feb 22, 2022, 6:45 AM IST

ನರೇಂದ್ರ ಮೋದಿ ರಣತಂತ್ರ: ಸಮಾಜವಾದಿ ಮೇಲೆ “ಉಗ್ರ’ಸ್ತ್ರ

ಉತ್ತರ ಪ್ರದೇಶದಲ್ಲಿ ಎರಡು ಹಂತಗಳ ಚುನಾವಣೆ ಈಗಾಗಲೇ ಮುಗಿದಿದೆ. ರವಿವಾರ ನಡೆಯಬೇಕಿದ್ದ ಮೂರನೇ ಹಂತದ ಚುನಾವಣೆಗೆ ಬಿರುಸಿನ ಪ್ರಚಾರ ಶುಕ್ರವಾರ ಮುಕ್ತಾಯವಾಗಿತ್ತು. ಅದೇ ದಿನ ಅಹ್ಮದಾಬಾದ್‌ನಲ್ಲಿರುವ ವಿಶೇಷ ನ್ಯಾಯಾಲಯ, 2008ರಲ್ಲಿ ನಡೆದಿದ್ದ ಅಹ್ಮದಾಬಾದ್‌ ಬಾಂಬ್‌ ಸರಣಿ ಸ್ಫೋಟ ಪ್ರಕರಣದ 38 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

ಇದು, ನಾಲ್ಕನೇ ಹಂತದ ಮತದಾನದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಹರ್ದೋಯಿಯಲ್ಲಿ ನಡೆದ ಬಿಜೆಪಿ ಚುನಾವಣ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಮಾಜವಾದಿ ಪಕ್ಷದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

“2008ರ ಅಹ್ಮದಾಬಾದ್‌ ಸ್ಫೋಟದ ರೂವಾರಿಗಳ ಪರವಾಗಿ ಸಮಾಜವಾದಿ ಪಕ್ಷಗಳ ನಾಯಕರು ಅನುಕಂಪ ವ್ಯಕ್ತಪಡಿಸುತ್ತಿರುವುದು ನೋಡಿದರೆ ಆ ಪಕ್ಷ ಉಗ್ರರ ಬೆಂಬಲಕ್ಕೆ ಸದಾ ನಿಂತಿರುವುದು ಕಂಡುಬರುತ್ತದೆ ಎಂದರು. ಅವರ ಟೀಕೆ ಅಷ್ಟಕ್ಕೆ ನಿಲ್ಲಲಿಲ್ಲ. 2007ರಲ್ಲಿ ಅಯೋಧ್ಯೆ ಹಾಗೂ ಲಕ್ನೋದಲ್ಲಿ ಸ್ಫೋಟಗಳಾದವು. ಈ ಪ್ರಕರಣ ಗಳಲ್ಲಿ ಸಿಕ್ಕಿ ಹಾಕಿಕೊಂಡಿದ್ದ 14 ಉಗ್ರರ ವಿರುದ್ಧದ ಪ್ರಕರಣಗಳನ್ನು ಉತ್ತರ ಪ್ರದೇಶದಲ್ಲಿ ಆಡಳಿತದಲ್ಲಿದ್ದ ಸಮಾಜ ವಾದಿ ಪಕ್ಷದ ಸರಕಾರ ಹಿಂದಕ್ಕೆ ಪಡೆದಿತ್ತು ಎಂದರು. ಆ ಮೂಲಕ ಉಗ್ರರಿಗೆ ರಿಟರ್ನ್ ಗಿಫ್ಟ್ ನೀಡಿದೆ’ ಎಂದಿದ್ದಾರೆ.

ಮೋದಿಯವರ ಈ ವಾಗ್ಧಾಳಿ, ಉತ್ತರ ಪ್ರದೇಶದ ಮತದಾರರ ಮೇಲೆ ದೊಡ್ಡ ಪರಿಣಾಮ ಬೀರುವುದರಲ್ಲಿ ಎರಡು ಮಾತಿಲ್ಲ. ಈ ಹೇಳಿಕೆ ಬಂದಿರುವ ಟೈಮಿಂಗ್‌ ಅನ್ನು ನಾವು ಗಮನಿಸಬೇಕು. ಅವತ್ತು ರವಿವಾರ… ಉತ್ತರ ಪ್ರದೇಶದಲ್ಲಿ ಮೂರನೇ ಹಂತದ ಮತದಾನ ನಡೆಯು ತ್ತಿರುವ ವೇಳೆ. ಇಡೀ ಉತ್ತರ ಪ್ರದೇಶದಲ್ಲಿ ಯಾದವ ಸಮು ದಾಯದವರ ಪ್ರಾಬಲ್ಯ ಹೆಚ್ಚಾಗಿರುವ ಪ್ರಾಂತ್ಯಗಳಲ್ಲಿ ಮತದಾನ ಜಾರಿಯಲ್ಲಿದ್ದ ಸಂದರ್ಭವದು. ಸರಿಯಾಗಿ ಅದೇ ಸಮಯಕ್ಕೆ ಮೋದಿಯವರಿಂದ ಬಂದಿರುವ ಈ ಹೇಳಿಕೆ ಯಾದವರ ಸಮುದಾಯದ ಮೇಲೆ ಪ್ರಭಾವ ಬೀರಲು ಬಳಸಿದ ಅಸ್ತ್ರವೇ ಹೊರತು, ಮತ್ತೇನಲ್ಲ ಎಂಬ ಅನಿಸಿಕೆಗಳು ಕೇಳಿಬರುತ್ತಿವೆ.

ಯಾದವರನ್ನು ಸೆಳೆಯಲು ತಂತ್ರಗಾರಿಕೆ?
ಯಾದವರು ಆರಂಭದಿಂದಲೂ ಸಮಾಜವಾದಿ ಪಕ್ಷದ ಮೇಲೆ ಭಾವನಾತ್ಮಕವಾಗಿ ಬೆಸುಗೆ ಹೊಂದಿರುವವರು. ಅದರಲ್ಲೂ ಮುಜಫ‌ರ್‌ ನಗರ ಜಿಲ್ಲೆಯಿಂದ ಬರೇಲಿ ಜಿಲ್ಲೆಯವರೆಗಿನ ಪ್ರಾಂತ್ಯದಲ್ಲಿ ಅವರದ್ದೇ ಪ್ರಾಬಲ್ಯ. ಆದರೆ ಇದೇ ಯಾದವರು 2017ರ ಚುನಾವಣೆಯಲ್ಲಿ ಬಿಜೆಪಿ ಕೈ ಹಿಡಿದಿದ್ದರು. ಈ ಪ್ರಾಂತ್ಯದ 29 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 23ರಲ್ಲಿ ಜಯ ಸಾಧಿಸಿತ್ತು. ಸಮಾಜವಾದಿಗೆ ಕೇವಲ ಆರು ಸ್ಥಾನ ಮಾತ್ರ ಸಿಕ್ಕಿದ್ದವು. ಈಗ ಕಾಲ ಬದಲಾಗಿದೆ. ಯಾದವರು ಪುನಃ ಒಗ್ಗಟ್ಟಾಗಿ ಸಮಾಜವಾದಿ ಕೈ ಹಿಡಿಯುವ ಸಾಧ್ಯತೆ ದಟ್ಟವಾಗಿದೆ.

ದೇಶಭಕ್ತಿಯ ಜಪ
ಏನಾದರೊಂದು ಕಾರಣಕ್ಕೆ ನಿರ್ದಿಷ್ಟ ಸಮುದಾಯಗಳ ಮತಗಳು ಒಡೆದು ಹೋಗುವ ಭೀತಿ ಆವರಿಸಿದಾಗಲೆಲ್ಲ ಬಿಜೆಪಿ ದೇಶಭಕ್ತಿ, ರಾಷ್ಟ್ರೀಯತೆ, ಉಗ್ರವಾದ, ಹಿಂದುತ್ವ ಎಂಬ ನಾಲ್ಕು ಮಂತ್ರಗಳನ್ನು ಜಪಿಸುತ್ತದೆ. ಏಕೆಂದರೆ, ದೇಶ- ಧರ್ಮ ಎಂಬ ಎರಡು ಪದಗಳು ಜಾತಿ, ಪಂಗಡಗಳನ್ನು ಬದಿಗಿಟ್ಟು ಸಮುದಾಯಗಳನ್ನು ಒಗ್ಗೂಡಿಸುತ್ತವೆ ಎಂಬುದು ಬಿಜೆಪಿಗೆ ಚೆನ್ನಾಗಿ ಗೊತ್ತಿದೆ. ಅದು ಸತ್ಯವೂ ಹೌದು. ನಾವು, ನೀವೇ ಆಗಲಿ ದೇಶದ ವಿಚಾರ ಬಂದರೆ ಒಗ್ಗೂಡುವುದಿಲ್ಲವೇ? ಎಲ್ಲ ಕಡೆಯೂ ಹಾಗೇ ಆಗುತ್ತದೆ. ಅದಕ್ಕಾಗಿ ಮೂರನೇ ಹಂತದ ಮತದಾನದ ಹೊತ್ತಿಗೆ ಕಾಕತಾಳೀಯವೆಂಬಂತೆ ಅಹ್ಮದಾಬಾದ್‌ ಸ್ಫೋಟದ ತೀರ್ಪು ಬಂದಿದ್ದನ್ನು ಮೋದಿ ಚೆನ್ನಾಗಿಯೇ ಬಳಸಿಕೊಂಡಿದ್ದಾರೆ. ಇದರ ಪರಿಣಾಮ ಏನಾಗಿರಬಹುದು ಎಂಬುದಕ್ಕೆ ಮಾ. 10ರಂದು ಹೊರಬೀಳುವ ಫ‌ಲಿತಾಂಶ ಹೇಳುತ್ತದೆ.

ಟಾಪ್ ನ್ಯೂಸ್

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.