ಸಹಜ ಪ್ರವಾಸ: ಚೆನ್ನೈಗೆ ತೆರಳಿದ್ದ ಕಾಂಗ್ರೆಸ್ ಶಾಸಕರು ಗೋವಾಕ್ಕೆ ವಾಪಸ್!
Team Udayavani, Jul 18, 2022, 4:46 PM IST
ಪಣಜಿ: ಜುಲೈ 17ರಂದು ರಾತ್ರಿ ಗೋವಾದಿಂದ ಚೆನ್ನೈಗೆ ತೆರಳಿದ್ದ ಕಾಂಗ್ರೆಸ್ ಶಾಸಕರು ಗೋವಾಕ್ಕೆ ವಾಪಸ್ಸಾಗಿದ್ದಾರೆ. ಈ ವೇಳೆ ಪ್ರವಾಸದ ಕಾರಣ ಕೇಳಿದಾಗ, ನಾವು ಸಹಜ ಪ್ರವಾಸ ಮಾಡಬಹುದಲ್ಲವೇ? ಎಂದು ಉತ್ತರಿಸುವ ಮೂಲಕ ಅವರು ಮುಖ್ಯ ವಿಷಯದ ಬಗ್ಗೆ ಮಾತನಾಡುವುದನ್ನು ತಪ್ಪಿಸಿದ್ದಾರೆ.
ಚೆನ್ನೈಗೆ ತೆರಳಿದ್ದ ಐವರು ಕಾಂಗ್ರೆಸ್ ಶಾಸಕರಲ್ಲಿ ಸಂಕಲ್ಪ್ ಅಮೋನ್ಕರ್, ಯೂರಿ ಅಲೆಮಾವ್, ರುಡಾಲ್ಫ್ ಫೆನಾರ್ಂಡಿಸ್, ಎಲ್ಟನ್ ಡಿಕೋಸ್ಟಾ ಮತ್ತು ಕಾರ್ಲೋಸ್ ಫೆರೇರಾ ಒಳಗೊಂಡಿದ್ದಾರೆ. ಚೆನ್ನೈಗೆ ತೆರಳಿದ್ದ ಐವರು ಶಾಸಕರು ವಾಸ್ಕೋ ತಲುಪಿದ ತಕ್ಷಣ, ಯಾವ ಕಾರಣಕ್ಕಾಗಿ ಪ್ರವಾಸ ಮಾಡಿದ್ದೀರಿ? ಈ ಬಗ್ಗೆ ಏನು ಹೇಳುತ್ತೀರಿ ಎಂದು ಪ್ರಶ್ನಿಸಿದಾಗ, ”ನಾವು ಯಾವುದೇ ರಾಜಕೀಯ ಕಾರಣಕ್ಕಾಗಿ ಈ ಪ್ರವಾಸ ಮಾಡಿಲ್ಲ. ಅಂದಹಾಗೆ, ನಾವು ಸುಲಭವಾಗಿ, ಸಹಜ ಪ್ರವಾಸ ಮಾಡಬಹುದಲ್ಲವೇ?” ಎಂದು ಪ್ರಶ್ನಿಸಿದ್ದಾರೆ.
ಗೋವಾ ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನಮತ ಇನ್ನೂ ಶಮನವಾಗಿಲ್ಲ ಎಂದು ಹೇಳಲಾಗುತ್ತಿದ್ದು, ಈಗಲೂ ಕೂಡ ಕೆಲ ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಯಾವುದೇ ಕ್ಷಣದಲ್ಲಿ ಕೆಲ ಶಾಸಕರು ಪಕ್ಷಾಂತರ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ