ಗೋವಾದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ: ತಾನವಾಡೆ
ಅಭಿವೃದ್ಧಿಯ ವೇಗವೂ ಡಬಲ್ ಇಂಜಿನ್ನಲ್ಲಿ ಸಾಗುತ್ತಿರುವಾಗ...
Team Udayavani, Oct 10, 2022, 4:05 PM IST
ಪಣಜಿ: ಗೋವಾದಲ್ಲಿ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ನೇತೃತ್ವದಲ್ಲಿ ಸರ್ಕಾರ ಸ್ಥಿರವಾಗಿದೆ. ಅಭಿವೃದ್ಧಿಯ ವೇಗವೂ ಡಬಲ್ ಇಂಜಿನ್ನಲ್ಲಿ ಸಾಗುತ್ತಿರುವಾಗ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಶೇಟ್ ತಾನವಾಡೆ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾಡುತ್ತಾರೆ ಎಂಬ ವದಂತಿ ಹಬ್ಬುತ್ತಿದ್ದು, ಅದನ್ನು ಪ್ರತಿಪಕ್ಷಗಳು ಹಬ್ಬಿಸುತ್ತಿವೆ ಎಂದರು.
ಪೆಡ್ನೆಯ ಪ್ರಸಿದ್ಧ ಪನವೇಲ್ಗೆ ಆಗಮಿಸಿದ ತಾನವಾಡೆ ಅವರು ದೇವರ ದರ್ಶನ ಪಡೆದು ಸುದ್ಧಿಗಾರರೊಂದಿಗೆ ಮಾತನಾಡುತ್ತಿದ್ದರು. ರಾಜ್ಯ ರಾಜಕೀಯದ ಬಗ್ಗೆ ಪತ್ರಕರ್ತರು ಪ್ರಶ್ನೆ ಕೇಳಿದಾಗ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದರು. ಕಾಂಗ್ರೆಸ್ನಿಂದ ಬಿಜೆಪಿ ಸೇರಿದ ಶಾಸಕರಿಗೆ ಪಕ್ಷ ಯಾವುದೇ ಭರವಸೆ ನೀಡಿಲ್ಲ. ಹಾಲಿ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆಯನ್ನೂ ಅವರು ತಳ್ಳಿ ಹಾಕಿದ್ದಾರೆ.
ಭವಿಷ್ಯದಲ್ಲಿ ಪೆಡ್ನೆ ಕ್ಷೇತ್ರದ ಶಾಸಕ ಪ್ರವೀಣ್ ಅರ್ಲೇಕರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ತಾನಾವಡೆ, ಅರ್ಲೇಕರ್ ರವರಿಗೆ ಪ್ರಸ್ತುತ ಕರಕುಶಲ ನಿಗಮ ನೀಡಲಾಗಿದೆ ಎಂದರು.
ಮಾಂದ್ರೆ ಶಾಸಕ ಜೀತ್ ಅರೋಲ್ಕರ್ ಬಿಜೆಪಿಗೆ ಸೇರಲು ಅವಕಾಶ ನೀಡುತ್ತೀರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಅವರು ಎಂಜಿಪಿ ಶಾಸಕ ಮತ್ತು ಹಿರಿಯ ನಾಯಕ ಸುದಿನ್ ಧವಲಿಕರ್ ಮತ್ತು ಮಾಂದ್ರೇ ಶಾಸಕ ಜೀತ್ ಅರೋಲ್ಕರ್ ಅವರು ಬಿಜೆಪಿ ಸರ್ಕಾರವನ್ನು ಬೆಂಬಲಿಸಿದ್ದಾರೆ ಎಂದು ಹೇಳಿದರು.
ಜೀತ್ ಅರೋಲ್ಕರ್ ಪಕ್ಷಕ್ಕೆ ಸೇರಲು ಬಯಸಿದರೆ, ಅವರನ್ನು ನೇರವಾಗಿ ತೆಗೆದುಕೊಳ್ಳಲಾಗುವುದಿಲ್ಲ. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿದ್ದು, ಸದ್ಯ ಅಂತಹ ಯಾವುದೇ ಪ್ರಸ್ತಾವನೆ ನಮ್ಮ ಬಳಿ ಬಂದಿಲ್ಲ. ಅಂತಹ ಪ್ರಸ್ತಾಪದ ಕುರಿತು ನಾವು ನಂತರ ಕಾಮೆಂಟ್ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ