ಸಂಸದರ ಅಮಾನತು ಆದೇಶ ಹಿಂಪಡೆಯಲ್ಲ, ನನಗೆ ಪಾಠ ಹೇಳೋದು ಬೇಡ; ಖರ್ಗೆಗೆ ನಾಯ್ದು
ಕಾಂಗ್ರೆಸ್ ಸಂಸದರು ಸಭಾತ್ಯಾಗ ನಡೆಸಿದ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಸದಸ್ಯರು ಕಲಾಪದಿಂದ ಹೊರನಡೆದಿದ್ದರು.
Team Udayavani, Nov 30, 2021, 2:55 PM IST
ನವದೆಹಲಿ: ಮುಂಗಾರು ಅಧಿವೇಶನದ ಸಂದರ್ಭದಲ್ಲಿ ಅಶಿಸ್ತು, ಉದ್ಧಟತನ ತೋರಿಸಿದ್ದ 12 ಮಂದಿ ರಾಜ್ಯಸಭಾ ಸದಸ್ಯರನ್ನು ಸಂಸತ್ ನ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸದಂತೆ ಅಮಾನತು ಮಾಡಿರುವ ಆದೇಶವನ್ನು ಹಿಂಪಡೆಯಲ್ಲ ಎಂದು ರಾಜ್ಯ ಸಭಾಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರ ನಡೆಯನ್ನು ಖಂಡಿಸಿ ವಿಪಕ್ಷಗಳು ಮಂಗಳವಾರ (ನವೆಂಬರ್ 30) ಸಭಾತ್ಯಾಗ ನಡೆಸಿವೆ.
ಇದನ್ನೂ ಓದಿ:ಒಮಿಕ್ರಾನ್: “ಬಲಿಷ್ಠರಾಗಿದ್ದೇವೆ, ಲಾಕ್ ಡೌನ್ ಬೇಡ” ಎನ್ನುತ್ತಿರುವ ನೆಟ್ಟಿಗರು
ಅಮಾನತುಗೊಂಡಿರುವ ಸಂಸದರು ಯಾವುದೇ ವಿಷಾದ ವ್ಯಕ್ತಪಡಿಸಿಲ್ಲ. ಹೀಗಾಗಿ ನಾನು ಅಮಾನತು ಆದೇಶವನ್ನು ವಾಪಸ್ ಪಡೆಯಬೇಕೆಂಬ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮನವಿಯನ್ನು ಪರಿಗಣಿಸುವುದಿಲ್ಲ ಎಂದು ವೆಂಕಯ್ಯ ನಾಯ್ಡು ಹೇಳಿದರು.
ಆಯ್ದ (ಕಾಂಗ್ರೆಸ್ ನ ಆರು ಸಂಸದರು ಸೇರಿ) ಸಂಸದರನ್ನು ಅಮಾನತುಗೊಳಿಸಿರುವುದು ಕಾಯ್ದೆಗೆ ವಿರುದ್ಧವಾಗಿದೆ. ಈ ನಿಟ್ಟಿನಲ್ಲಿ 12 ಮಂದಿ ಸಂಸದರ ಅಮಾನತು ಆದೇಶವನ್ನು ವಾಪಸ್ ಪಡೆಯಬೇಕೆಂದು ನಾನು ಮನವಿ ಮಾಡುವುದಾಗಿ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ತಿಳಿಸಿದ್ದರು.
ಖರ್ಗೆ ಅವರ ಆರೋಪಕ್ಕೆ ತಿರುಗೇಟು ನೀಡಿದ ಸಭಾಧ್ಯಕ್ಷ ನಾಯ್ಡು ಅವರು, ಇದೊಂದು ಸರಿಯಾದ ಕ್ರಮವಲ್ಲ. ನೀವು ಸದನದ ಕಲಾಪದಲ್ಲಿ ಕೋಲಾಹಲ ಎಬ್ಬಿಸಿ, ಈಗ ನೀವು ನನಗೆ ಪಾಠ ಹೇಳುತ್ತೀರಾ? ನಾನು ಯಾವುದೇ ಕಾರಣಕ್ಕೂ ಅಮಾನತು ಆದೇಶ ವಾಪಸ್ ಪಡೆಯಲ್ಲ ಎಂದು ತಿಳಿಸಿದಾಗ, ಆಕ್ರೋಶಗೊಂಡ ವಿಪಕ್ಷ ಸದಸ್ಯರು ಸಭಾತ್ಯಾಗ ಮಾಡಿದರು.
ಕಾಂಗ್ರೆಸ್ ಸಂಸದರು ಸಭಾತ್ಯಾಗ ನಡೆಸಿದ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಸದಸ್ಯರು ಕಲಾಪದಿಂದ ಹೊರನಡೆದಿದ್ದರು. ಈ ಗದ್ದಲದ ಪರಿಣಾಮ ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 2ಗಂಟೆವರೆಗೆ ಮುಂದೂಡಲಾಗಿತ್ತು. ಮತ್ತೆ ಕಲಾಪ ಆರಂಭವಾದಾಗಲೂ ಗದ್ದಲ ಮುಂದುವರಿದ ಪರಿಣಾಮ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್