ಪೆಗಾಸಸ್ ನನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಂಡಿದೆ,ಇದು ನಿಜವಾದ ದೇಶದ್ರೋಹ : ರಾಹುಲ್ ಗುಡುಗು
Team Udayavani, Jul 23, 2021, 1:46 PM IST
ನವ ದೆಹಲಿ : ಪೆಗಾಸ್ ವಿವಾರವಾಗಿ ಕಾಂಗ್ರೆಸ್ ಹಾಗೂ ಇತರೆ ಪ್ರತಿಪಕ್ಷಗಳು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿವೆ.
ಇಂದು(ಶುಕ್ರವಾರ, ಜುಲೈ 23) ಸಂಸತ್ತಿನ ಆವರಣದೊಳಗಿನ ಮಹಾತ್ಮ ಗಾಂಧಿ ಪ್ರತಿಮೆಯ ಎದುರು ಪೆಗಾಸಸ್ ವಿವಾದದ ವಿರುದ್ಧ ಕಾಂಗ್ರೆಸ್, ಡಿಎಂಕೆ ಮತ್ತು ಶಿವಸೇನೆ ಸಂಸದರು ಜಂಟಿಯಾಗಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ರಾಹುಲ್, ಪೆಗಾಸಸ್ ಸ್ಲೈವೇರ್ ಎನ್ನುವುದು ಇಸ್ರೇಲಿ ಅಸ್ತ್ರ. ಬಿಜೆಪಿ ಭಾರತದ ಸಂಸ್ಥೆಗಳ ವಿರುದ್ಧವಾಗಿ ಪ್ರಯೋಗ ಮಾಡುವುದರ ಮೂಲಕ ಕೆಳ ಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ : ಪೆಗಾಸಸ್ ಪ್ರಕರಣದ ಬಗ್ಗೆ ಕೋರ್ಟ್ ತನಿಖೆ ನಡೆಸಲಿ; ರಾಹುಲ್ ಬೇಡಿಕೆ ತಿರಸ್ಕರಿಸಿದ ಕೇಂದ್ರ
ಇಸ್ರೇಲ್ ಪೆಗಾಸಸ್ ನನ್ನು ಶಸ್ತ್ರಾಸ್ತ್ರವೆಂದು ಪರಿಗಣಿಸಿದೆ. ಭಯೋತ್ಪಾದಕರ ವಿರುದ್ಧ ಪೆಗಾಸಸ್ ನನ್ನು ಬಳಸಲಾಗುತ್ತದೆ ಎಂದು ಹೇಳಿದೆ. ಆದರೇ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಮಂತ್ರಿ ಅಮಿತ್ ಶಾ ಈ ಅಸ್ತ್ರವನ್ನು ದೇಶದ ರಾಜ್ಯಗಳ ಮೇಲೆ, ದೇಶದ ಸಂಸ್ಥೆಗಳ ಮೇಲೆ, ಮೋದಿ ಹಾಗೂ ಶಾ ಅವರ ನಿಜ ಬಣ್ಣವನ್ನು ಬಯಲು ಮಾಡಿದವರ ಮೇಲೆ ಪ್ರಯೋಗಿಸಿದ್ದಾರೆ ಎಂದು ಗುಡುಗಿದ್ದಾರೆ.
ಪೆಗಾಸಸ್ ನನ್ನು ಕೇಂದ್ರ ಬಿಜೆಪಿ ರಾಜಕೀಯವಾಗಿ ಬಳಸಿದೆ. ಕರ್ನಾಟಕದ ರಾಜಕಾರಣದಲ್ಲಿಯೂ ಅವರು ಈ ಅಸ್ತ್ರವನ್ನು ಬಳಸಿದ್ದಾರೆ. ದೇಶದ ಸರ್ವೋಚ್ಛ ನ್ಯಾಯಾಲಯದ ಮೇಲೂ ಕೂಡ ಈ ಅಸ್ತ್ರವನ್ನು ಪ್ರಯೋಗಿಸಿರುವುದು ಅವರ ಕ್ರಿಮಿನಲ್ ಮನಸ್ಥಿತಿಯನ್ನು ಪ್ರದರ್ಶಿಸುತ್ತದೆ. ಇದು ನಿಜವಾದ ದೇಶದ್ರೋಹದ ಕೆಲಸ. ಎಂದು ಸಿಡಿದಿದ್ದಾರೆ.
ದಿ ವೈರ್ನಲ್ಲಿ ಪ್ರಕಟವಾದ ಪೆಗಾಸಸ್ ಕುರಿತಾದ ಸುದ್ದಿ ಸಂಚಲನ ಸೃಷ್ಟಿಸಿದ ನಂತರ, ಪೆಗಾಸಸ್ ಸ್ಪೈವೇರ್ ಬಳಸುವ ಅಪರಿಚಿತ ಏಜೆನ್ಸಿಯ ಕಣ್ಗಾವಲುಗಾಗಿ ಸಂಭವನೀಯ ಗುರಿಗಳ ಸೋರಿಕೆಯಾದ ಪಟ್ಟಿಯಲ್ಲಿ ಹಲವಾರು ಭಾರತೀಯ ರಾಜಕಾರಣಿಗಳು, ಪತ್ರಕರ್ತರು, ವಕೀಲರು ಮತ್ತು ಕಾರ್ಯಕರ್ತರ ಹೆಸರುಗಳು ಕಾಣಿಸಿಕೊಂಡಿವೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.
ಇನ್ನು, ಕೇಂದ್ರ ಮತ್ತು ಪ್ರತಿಪಕ್ಷಗಳ ನಡುವಿನ ಪೆಗಾಸಸ್ ವಿಷಯದ ಬಗ್ಗೆ ನಿರಂತರ ವಿವಾದದ ನಡುವೆ. ಟಿಎಂಸಿ ಸಂಸದ ಸಂತನು ಸೇನ್ ಅವರು ರಾಜ್ಯಸಭೆಯಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರಿಂದ ಪೆಗಾಸಸ್ ವಿಷಯದ ಬಗ್ಗೆ ಭಾಷಣ ಪ್ರತಿಯನ್ನು ಕಸಿದುಕೊಂಡು ಹರಿದು ಹಾಕಿದ್ದರು. ಸಂಸದ ಸಂತನು ಸೇನ್ ಅವರನ್ನು ರಾಜ್ಯ ಸಭೆಯಿಂದ ಅಮಾನತುಗೊಳಿಸಲಾಗಿದೆ.
ಇದನ್ನೂ ಓದಿ : ಧುಮ್ಮಿಕ್ಕಿ ಹರಿದ ದೂಧಸಾಗರ ಜಲಪಾತ : ಬೆಳಗಾವಿ-ಗೋವಾ ರೈಲು ಸಂಚಾರ ಸ್ಥಗಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ
Delhi Liquor Scam:ತಿಹಾರ್ ಜೈಲಿನೊಳಗೆ ಬಿಆರ್ ಎಸ್ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ
Liquor Policy Case: ಅರವಿಂದ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ
Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್ ಕದತಟ್ಟಿದ ಕೇಜ್ರಿವಾಲ್
MUST WATCH
ಹೊಸ ಸೇರ್ಪಡೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?