ಪಂಜಾಬ್; ಗೋ ಬ್ಯಾಕ್ ಮೋದಿ ಭಿತ್ತಿಪತ್ರ ಪ್ರದರ್ಶನಕ್ಕೆ ಮುಂದಾದ ರೈತ ಸಂಘಟನೆ
ಮೋದಿ ರ್ಯಾಲಿ ಗೆ ಪ್ರತಿಭಟನೆ ಬಿಸಿ
Team Udayavani, Jan 4, 2022, 4:40 PM IST
ಅಮೃತಸರ:ಪ್ರಧಾನಿ ನರೇಂದ್ರ ಮೋದಿ ಯವರಿಗೆ ರೈತ ಪ್ರತಿಭಟನೆಯ ಬಿಸಿ ಸದ್ಯಕ್ಕೆ ತಪ್ಪುವ ಲಕ್ಷಣ ಕಾಣುತ್ತಿಲ್ಲ. ದಿಲ್ಲಿಯಲ್ಲಿ ವರ್ಷ ಪರ್ಯಂತ ಪ್ರತಿಭಟನೆ ಎದುರಿಸಿದ್ದ ಮೋದಿಯವರಿಗೆ ಪಂಜಾಬ್ ಚುನಾವಣೆ ಸಂದರ್ಭದಲ್ಲೂ ರೈತರೊಂದಿಗೆ ವಿರೋಧದ ಮುಖಾಮುಖಿ ಅನಿವಾರ್ಯವಾಗಿದೆ.
ಹೌದು. ಪಂಜಾಬ್ ಚುನಾವಣೆ ಹಿನ್ನಲೆಯಲ್ಲಿ ಫಿರೋಜ್ ಪುರದಲ್ಲಿ ಪ್ರಧಾನಿ ಮೋದಿ ಭಾಗವಹಿಸುವ ರ್ಯಾಲಿ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು 9 ರೈತಪರ ಸಂಘಟನೆಗಳು ನಿರ್ಧರಿಸಿವೆ. ಜ 5ರಂದು ಮಜ್ದೂರ್ ಸಂಘರ್ಷ ಸಮಿತಿ, ಕ್ರಾಂತಿಕಾರಿ ಕಿಸಾನ್ ಯೂನಿಯನ್ ಸೇರಿದಂತೆ 9 ಸಂಘಟನೆಗಳು ಪ್ರತಿಭಟನೆ ನಡೆಸುವುದಾಗಿ ಘೋಷಿಸಿವೆ.
ಕೇಂದ್ರ ಸರಕಾರ ತಮ್ಮ ಮೂರು ಪ್ರಧಾನ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ” ಗೋ ಬ್ಯಾಕ್ ಮೋದಿ” ಭಿತ್ತಿಪತ್ರ ಪ್ರದರ್ಶಿಸಲು ನಿರ್ಧರಿಸಲಾಗಿದೆ. ದಿಲ್ಲಿ ಪ್ರತಿಭಟನೆ ವೇಳೆ ಮೃತಪಟ್ಟ ರೈತ ಕುಟುಂಬಕ್ಕೆ 1 ಕೋಟಿ ರೂ. ಎಕ್ಸ್ ಗ್ರೇಷಿಯಾ ನೀಡುವುದು, ಕೇಂದ್ರ ಕೃಷಿ ಇಲಾಖೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ಕೈ ಬಿಡುವುದು ಹಾಗೂ ಬಂಧನಕ್ಕೆ ಒಳಗಾದ ರೈತರ ಮೇಲಿನ ಪ್ರಕರಣ ಕೈ ಬಿಡಬೇಕೆಂಬುದು ಪ್ರಧಾನ ಬೇಡಿಕೆಯಾಗಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪಂಜಾಬ್ ಬಿಜೆಪಿ ಘಟಕ, ಇದು ರಾಜಕೀಯ ಪ್ರೇರಿತ ಪ್ರತಿಭಟನೆ. ಕಾಂಗ್ರೆಸ್ ಒಳಗೊಂಡಂತೆ ಎಲ್ಲ ಪ್ರತಿಪಕ್ಷಗಳು ಈ ಪ್ರತಿಭಟನೆಗೆ ರಹಸ್ಯ ಬೆಂಬಲ ನೀಡಿವೆ ಎಂದು ಸಂಸದ ದುಷ್ಯಂತ ಕುಮಾರ್ ಗೌತಮ್ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ