Watch: ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ; ಜಪಾನ್ ಮಕ್ಕಳ ಹಿಂದಿ ಸಂಭಾಷಣೆಯ ವಿಡಿಯೋ ವೈರಲ್
ಕ್ವಾಡ್ ಶೃಂಗದಲ್ಲಿಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾಲ್ವರು ನಾಯಕರು ಚರ್ಚೆ ನಡೆಸಲಿದ್ದಾರೆ.
Team Udayavani, May 23, 2022, 10:36 AM IST
ಟೋಕಿಯೋ: ದ್ವಿಪಕ್ಷೀಯ ಮಾತುಕತೆ ಸೇರಿದಂತೆ ಕ್ವಾಡ್ ಶೃಂಗದಲ್ಲಿ ಭಾಗವಹಿಸಲು ಎರಡು ದಿನಗಳ ಜಪಾನ್ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಮೇ 23) ಟೋಕಿಯೋಗೆ ಆಗಮಿಸಿದ್ದು, ಟೋಕಿಯೋ ಹೋಟೆಲ್ ನಲ್ಲಿ ಭಾರತೀಯ ಸಮುದಾಯ ಹಾಗೂ ಜಪಾನ್ ನಾಗರಿಕರು ಹೂಗುಚ್ಛ ನೀಡಿ ಭರ್ಜರಿಯಾಗಿ ಸ್ವಾಗತಿಸಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?
ಟೋಕಿಯೋ ಹೋಟೆಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಸಮುದಾಯದ ಮಕ್ಕಳ ಜತೆ ಸಂವಾದ ನಡೆಸಿದರು. ಟೋಕಿಯೋ ಹೋಟೆಲ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದ ವೇಳೆ ಭಾರತೀಯ ಸಮುದಾಯದ ಮಕ್ಕಳ ಜತೆ ಜಪಾನ್ ನ ಮಕ್ಕಳು ಆಟೋಗ್ರಾಫ್ ಪಡೆಯಲು ನಿಂತಿದ್ದರು. ಆಗ ಜಪಾನ್ ನ ಪುಟಾಣಿ ಹಿಂದಿಯಲ್ಲಿ ಮಾತನಾಡಿದ್ದನ್ನು ಗಮನಿಸಿದ ಪ್ರಧಾನಿ ಮೋದಿ, ವಾಹ್…ನೀನು ಹಿಂದಿ ಭಾಷೆಯನ್ನು ಎಲ್ಲಿ ಕಲಿತೆ ಎಂದು ವಿಚಾರಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
#WATCH | “Waah! Where did you learn Hindi from?… You know it pretty well?,” PM Modi to Japanese kids who were awaiting his autograph with Indian kids on his arrival at a hotel in Tokyo, Japan pic.twitter.com/xbNRlSUjik
— ANI (@ANI) May 22, 2022
ಪ್ರಧಾನಿ ಮೋದಿ ಟೋಕಿಯೋ ಹೋಟೆಲ್ ಗೆ ಆಗಮಿಸುತ್ತಿದ್ದಂತೆಯೇ ಭಾರತೀಯ ಸಮುದಾಯ, ಭಾರತದ ಸಿಂಹ ಎಂಬ ಘೋಷಣೆಯೊಂದಿಗೆ ಸ್ವಾಗತಿಸಿರುವುದಾಗಿ ವರದಿ ತಿಳಿಸಿದೆ.
ಜಪಾನ್ ರಾಜಧಾನಿ ಟೋಕಿಯೋದಲ್ಲಿ ನಡೆಯಲಿರುವ ಕ್ವಾಡ್ ಶೃಂಗದಲ್ಲಿಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾಲ್ವರು ನಾಯಕರು ಚರ್ಚೆ ನಡೆಸಲಿದ್ದಾರೆ. ಕ್ವಾಡ್ ಜನ್ಮತಾಳಿದ ನಂತರ ಈವರೆಗೆ ಮುಖಾಮುಖಿಯಾಗಿ ಸಭೆ ನಡೆದಿರುವುದು ಕೇವಲ ಒಂದು ಬಾರಿ ಮಾತ್ರ. ಇದಕ್ಕೆ ಅಮೆರಿಕ ಆತಿಥ್ಯ ವಹಿಸಿತ್ತು. ಈ ಬಾರಿ ಜಪಾನ್ ಆತಿಥ್ಯ ವಹಿಸಿದೆ.
#WATCH | Amid chants, Prime Minister Narendra Modi receives a warm welcome from the Indian diaspora in Tokyo, Japan
He will be participating in Quad Leaders’ Summit as part of his 2-day tour starting today, May 23. pic.twitter.com/Owqx1GXksm
— ANI (@ANI) May 22, 2022
ಕ್ವಾಡ್ ಶೃಂಗದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಜಪಾನ್ ಪ್ರಧಾನಿ ಫ್ಯೂಮಿಯೋ ಕಿಶಿರಾ ಮತ್ತು ಆಸ್ಟ್ರೇಲಿಯಾದ ನಿಯೋಜಿತ ಪ್ರಧಾನಿ ಆ್ಯಂಟನಿ ಆಲ್ಬನೀಸ್ ಅವರು ಭಾಗಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ
Delhi Liquor Scam:ತಿಹಾರ್ ಜೈಲಿನೊಳಗೆ ಬಿಆರ್ ಎಸ್ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ
Liquor Policy Case: ಅರವಿಂದ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ
Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್ ಕದತಟ್ಟಿದ ಕೇಜ್ರಿವಾಲ್
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ