Ramakrishna Hegde: ಮೌಲ್ಯಾಧಾರಿತ ರಾಜಕಾರಣದ ರೂವಾರಿ ರಾಮಕೃಷ್ಣ ಹೆಗಡೆ

ಪಂಚಾಯತ್‌ ರಾಜ್‌ ವ್ಯವಸ್ಥೆ ಇಡೀ ದೇಶಕ್ಕೇ ಮಾದರಿಯಾಯಿತು.

Team Udayavani, Aug 29, 2023, 10:15 AM IST

Ramakrishna Hegde: ಮೌಲ್ಯಾಧಾರಿತ ರಾಜಕಾರಣದ ರೂವಾರಿ ರಾಮಕೃಷ್ಣ ಹೆಗಡೆ

ದಿಕ್ಕು-ದೆಸೆಯಿಲ್ಲದ ಇಂದಿನ ರಾಜಕಾರಣವನ್ನು ಕಂಡಾಗ ಮೌಲ್ಯಾಧಾರಿತ ರಾಜಕಾರಣ ನಡೆಸಿದ ಮಾಜಿ ಮುಖ್ಯಮಂತ್ರಿ ದಿ|ರಾಮಕೃಷ್ಣ ಹೆಗಡೆ ಸದಾ ನೆನಪಾಗುತ್ತಾರೆ.  ಸಿಎಂ ಆಗಿದ್ದಾಗ ಇಡೀ ದೇಶವೇ ಕರ್ನಾಟಕದ ಕಡೆ ನಿಬ್ಬೆರಗಾಗಿ ನೋಡುವಂತೆ ಸೊಗಸಾದ ಆಡಳಿತ ನಡೆಸಿದ ಮಹಾನ್‌ ನಾಯಕ.

ರಾಜಕೀಯ ಜೀವನದುದ್ದಕ್ಕೂ ನಂಬಿದ ಹಾಗೂ ತಾವೇ ಪ್ರತಿಪಾದಿಸಿದ ರಾಜಕೀಯ ಮೌಲ್ಯಗಳ ಉಳಿವಿಗಾಗಿ ಅಹರ್ನಿಶಿ ಶ್ರಮಿಸಿದವರು. ಮಾತ್ರವಲ್ಲ, ಆ ಮೌಲ್ಯಗಳಿಗಾಗಿ ಸಾಕಷ್ಟು ಬಾರಿ ಬೆಲೆಯನ್ನೂ ತೆತ್ತ ಆದರ್ಶ ನಾಯಕರೂ ಹೌದು.

1983ರಲ್ಲಿ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ಸೇತರ ಜನತಾ ಪಕ್ಷ (ನೇಗಿಲು ಹೊತ್ತ ರೈತ ಚಿಹ್ನೆ) ಸರಕಾರದ ಮುಖ್ಯಮಂತ್ರಿಯಾಗಿದ್ದ ಹೆಗಡೆ ಅವರು ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಮಾಡಿದ ಕೆಲಸ ಅಷ್ಟಿಷ್ಟಲ್ಲ. ಇವರ ಆಡಳಿತಕ್ಕೆ ಅಗ್ನಿಪರೀಕ್ಷೆ ಎಂಬಂತೆ ಎದುರಾದ ಭೀಕರ ಬರಗಾಲದ ಸಂದರ್ಭ ಅಂದಿನ ಗ್ರಾಮೀಣಾಭಿವೃದ್ಧಿ ಸಚಿವ ಅಬ್ದುಲ್‌ ನಜೀರ್‌ ಸಾಬ್‌ ಅವರ ಮೂಲಕ ನಾಡಿನಾದ್ಯಂತ ಕೊಳವೆ ಬಾವಿಗಳನ್ನು ಕೊರೆಸಿ ನೀರಿನ ಬವಣೆ ನೀಗಿಸುವಲ್ಲಿ ಯಶಸ್ವಿಯಾದರು. ಮಾತ್ರವಲ್ಲ, ರಾಜ್ಯಾದ್ಯಂತ ಗೋಶಾಲೆಗಳನ್ನು ತೆರೆದು ಜಾನುವಾರುಗಳ ಸಂರಕ್ಷಣೆ ಮಾಡಿ, ರೈತರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದ್ದರು.

ಶಾಲಾ ಮಕ್ಕಳಿಗೆ ಉಚಿತ ಬಸ್‌ ಪಾಸ್‌, ವಿಧವಾ ಮಾಸಾಶನ ಹೀಗೆ ಹತ್ತು ಹಲವು ಯೋಜನೆಗಳನ್ನು ಅಮೂಲಾಗ್ರವಾಗಿ ಜಾರಿಗೆ ತರುವ ಮೂಲಕ ನಾಡಿನ ಜನಮನದಲ್ಲಿ ಭದ್ರವಾಗಿ ನೆಲೆಯೂರಿದ್ದರು. ಅವರು ಜಾರಿಗೆ ತಂದ ಪಂಚಾಯತ್‌ ರಾಜ್‌ ವ್ಯವಸ್ಥೆ ಇಡೀ ದೇಶಕ್ಕೇ ಮಾದರಿಯಾಯಿತು.

ಹೆಗಡೆ ಅವರು ಪ್ರತಿಷ್ಠಾಪಿಸಿದ ಲೋಕಾಯುಕ್ತ ಸಂಸ್ಥೆ ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿದೆ ಎಂಬುದು ನಿರ್ವಿವಾದದ ಸಂಗತಿ. “ಆಡಿದರೆ ಮುತ್ತಿನ ಹಾರದಂತಿರಬೇಕು, ಲಿಂಗ ಮೆಚ್ಚಿ ಅಹುದಹುದೆನ್ನುವಂತಿರಬೇಕು’ ಎಂಬ ಜಗಜ್ಯೋತಿ ಬಸವಣ್ಣವರ ವಚನದ ಸಾಲಿನಂತೆ ಹೆಗಡೆ ಅವರು ತಮ್ಮ ರಾಜಕೀಯ ಜೀವನದುದ್ದಕ್ಕೂ ಹಿತ-ಮಿತ ನಡೆ-ನುಡಿಯೊಂದಿಗೆ ನಾಡಿನ ಜನರ
ಹೃದಯ ಗೆದ್ದಿದ್ದರು. ಅವರು ಭಾಗವಹಿಸುತ್ತಿದ್ದ ಸಭೆ-ಸಮಾರಂಭಗಳಲ್ಲಿ ಜನಸಾಗರವೇ ಸೇರುತ್ತಿತ್ತು. ಅಂಥ ಧೀಮಂತ ವ್ಯಕ್ತಿತ್ವ ಅವರಲ್ಲಿತ್ತು.

ಇನ್ನು ಎಂತಹ ಸಂದರ್ಭದಲ್ಲೂ ಹೆಗಡೆ ಅವರು ಅಸಾಂವಿಧಾನಿಕ ಭಾಷೆ ಪ್ರಯೋಗಿಸಿದ ಉದಾಹರಣೆಗಳು ತೀರಾ ವಿರಳ ಎನ್ನಬಹುದು. ಅವರನ್ನು ಜನತಾದಳದಿಂದ ಹೊರ ಹಾಕಿದಾಗಲೂ ತಮ್ಮ ಗರಡಿಯಲ್ಲೇ ಬೆಳೆದ, ಜತೆಗಿದ್ದ ಕೆಲ ನಾಯಕರು
ತಮ್ಮಿಂದ ದೂರವಾಗುತ್ತಿದ್ದಾರೆ ಎಂಬ ಸುಳಿವು ದೊರೆತಾಗ ತೀರಾ ನೊಂದುಕೊಂಡಿದ್ದರು.  ಆಗ ಮನನೊಂದು ತೀರಾ ಭಾವುಕರಾಗಿ ಸಾತ್ವಿಕ ಆಕ್ರೋಶ ಹೊರಹಾಕಿದ್ದರು. ಆದರೆ, ತಮ್ಮ ರಾಜಕೀಯ ಕಡುವೈರಿಯನ್ನೂ ಕೂಡ ಎಂದೂ ನಿಂದಿಸಿ ಮಾತನಾಡಿದವರಲ್ಲ. ಅಂಥ ರಾಜಕೀಯ ಸಂಸ್ಕಾರ ಅವರಲ್ಲಿತ್ತು. ಇಂತಹ ಆದರ್ಶ ರಾಜಕಾರಣಿಯಾಗಿದ್ದ ಹೆಗಡೆ ಅವರ
ರಾಜಕೀಯ ಮೌಲ್ಯಗಳು ಹಾಗೂ ಚಿಂತನೆಗಳನ್ನು ಯುವಜನತೆಗೆ ತಿಳಿಸಲು ರಾಜ್ಯದ ವಿವಿಯೊಂದರಲ್ಲಿ ಅಧ್ಯಯನ ಪೀಠ
ಸ್ಥಾಪಿಸುವ ಭರವಸೆ ಸಾಕಾರವಾಗಿಲ್ಲ. ಹೆಗಡೆಯವರ ರಾಜಕೀಯ ಗರಡಿಯಲ್ಲೇ ಬೆಳೆದ ಸಿದ್ದರಾಮಯ್ಯ ಈಗ ಮುಖ್ಯಮಂತ್ರಿ ಆಗಿದ್ದಾರೆ. ಅವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ, ಅಧ್ಯಯನ ಪೀಠ ಸ್ಥಾಪಿಸಿದ್ದೇ ಆದಲ್ಲಿ, ಭವಿಷ್ಯದ ಪೀಳಿಗೆಗೆ ಹೆಗಡೆ ಅವರ ರಾಜಕೀಯ ವಿಚಾರಧಾರೆಗಳ ಪರಿಚಯವಾಗಿ, ರಾಜಕಾರಣದಲ್ಲಿ ಮೌಲ್ಯಗಳ ಸಂರಕ್ಷಣೆಗೆ ಸಹಕಾರಿಯಾಗಬಲ್ಲದು.

*ಅಶೋಕ ಸ. ಬೆಳಗಲಿ (ಕುದರಿ), ಹುಬ್ಬಳ್ಳಿ

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.