ಕೋವಿಡ್ ಹೆಚ್ಚಳವಾಗುತ್ತಿದೆ, ಕೇಂದ್ರ ಸರ್ಕಾರ ಆಸ್ತಿ ಮಾರಾಟದಲ್ಲಿ ನಿರತವಾಗಿದೆ : ರಾಹುಲ್
Team Udayavani, Aug 26, 2021, 1:43 PM IST
ನವ ದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ.
ಕೋವಿಡ್ ಸೋಂಕು ದೇಶದಲ್ಲಿ ಮತ್ತೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದ ವಯನಾಡಿನ ಕಾಂಗ್ರೆಸ್ ಸಂಸದ ಗಾಂಧಿ, ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆ ವಿರುದ್ಧ ಪರೋಕ್ಷವಾಗಿ ಟ್ವೀಟ್ದಾಳಿ ಮಾಡಿದ್ದಾರೆ.
ಇದನ್ನೂ ಓದಿ : ಸೂರ್ಯನಿಗೆ ಒಂದೊಂದು ರಾಶಿ ಕ್ರಮಿಸಲು ಒಂದು ತಿಂಗಳು ಬೇಕು…ಸಂಕ್ರಮಣ ಕಾಲ ಎಂದರೇನು?
ತಮ್ಮ ಟ್ವೀಟರ್ ಖಾತೆಯ ಮೂಲಕ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ದೇಶದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿರುವುದು ಆತಂಕಕಾರಿಯಾಗಿದೆ. ಸೋಂಕಿನ ಮುಂದಿನ ಅಲೆಯನ್ನು ತಪ್ಪಿಸಲು ಲಸಿಕಾ ಅಭಿಯಾನಕ್ಕೆ ವೇಗ ನೀಡಬೇಕು ಎಂದು ಹೇಳಿದ್ದಲ್ಲದೇ, ಸೋಂಕಿನಿಂದ ನಿಮ್ಮ ಬಗ್ಗೆ ನೀವೆ ಜಾಗೃತೆ ವಹಿಸಿಕೊಳ್ಳಿ, ಯಾಕೆಂದರೇ ಕೇಂದ್ರ ಸರ್ಕಾರ ಆಸ್ತಿ ಮಾರಾಟದಲ್ಲಿ ನಿರತವಾಗಿದೆ ಎಂದು ಕಿಡಿ ಕಾರಿದ್ದಾರೆ.
Rising #COVID numbers are worrying. Vaccination must pick up pace to avoid serious outcomes in the next wave.
Please take care of yourselves because GOI is busy with sales.
— Rahul Gandhi (@RahulGandhi) August 26, 2021
ನಿನ್ನೆ (ಬುಧವಾರ, ಆಗಸ್ಟ್ 25) ಕೂಡ ರಾಹುಲ್ ಗಾಂಧಿ ಈ ಕುರಿತು ಅವರು ಕೇಂದ್ರವನ್ನು ಆರೋಪಿಸಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಸ್ತಾಪಿತ “ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆ”ಯ ಮೂಲಕ ಭಾರತದಲ್ಲಿರುವ ಸರ್ಕಾರದ ಆಸ್ತಿಗಳನ್ನು ಮಾರಾಟ ಮಾಡಲು ಹೊರಟಿದೆ ಎಂದಿದ್ದರು.
ಇನ್ನು, ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 46,164 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದು ಬುಧವಾರಕ್ಕಿಂತ ಶೇ.22ರಷ್ಟು ಪ್ರಕರಣಗಳ ಸಂಖ್ಯೆ ಹೆಚ್ಚಳವಾದಂತಾಗಿದೆ. ಮಾತ್ರವಲ್ಲದೇ ಸೋಂಕಿನಿಂದ ಕಳೆದೊಂದು ದಿನದಲ್ಲಿ 607 ಮಂದಿ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಇಂದು (ಗುರುವಾರ, ಆಗಸ್ಟ್ 26) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ : ವಾಯ್ಸ್ ಮೆಸೇಜ್ ಮಾಡಿ, ಕಾರು ಸಮೇತ ನಾಲೆಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ