ಕೆಪಿಎಸ್ಸಿ ನೇಮಕದಲ್ಲೂ ಭ್ರಷ್ಟಾಚಾರ :ತಮ್ಮದೇ ಸರ್ಕಾರದ ವಿರುದ್ಧ ಯತ್ನಾಳ್ ಕಿಡಿ

ಜಮೀರ್ ಗೆ  ನಮ್ಮದೇ ಪಕ್ಷದ ಓರ್ವ ಮಹಾನ್ ನಾಯಕನ ಬೆಂಬಲವಿದೆ

Team Udayavani, Apr 30, 2022, 1:52 PM IST

yatnal

ವಿಜಯಪುರ : ಪಿಎಸ್‍ಐ ಹುದ್ದೆಗೆ ಮಾತ್ರವಲ್ಲ ಕೆಪಿಎಸ್ಸಿ ನೇಮಕದಲ್ಲೂ ವ್ಯಾಪಕ ಭ್ರಷ್ಟಾಚಾರ ನಡೆಯುತ್ತದೆ. ಕೆಪಿಎಸ್ಸಿ ಅಧ್ಯಕ್ಷ-ಸದಸ್ಯರಾಗಲು ಹತ್ತಾರು ಕೋಟಿ ರೂ. ಕೊಟ್ಟು ಅಧಿಕಾರ ನಡೆಸುವವರು ಸುಮ್ಮನೇ ಕೆಲಸ ಮಾಡುತ್ತಾರೆಯೇ. ಕೆಪಿಎಸ್ಸಿ ಅಧ್ಯಕ್ಷನಾಗಿದ್ದ ಶಾಂ ಭಟ್ ಮನೆಯಲ್ಲಿ ಭ್ರಷ್ಟಾಚಾರ ವಿರೋಧಿ ದಳಗಳು ದಾಳಿ ಮಾಡಿದಾಗ ಏನೆಲ್ಲ ಸಿಕ್ಕಿದೆ ಎಂಬುದನ್ನು ನಾಡಿನ ಜನತೆ ನೋಡಿಲ್ಲವೇ ಎಂದು ಶಾಸಕ ಬಸನಗೌಡ ಪಾಟೀಲ್  ಯತ್ನಾಳ್ ತಮ್ಮದೇ ಸರ್ಕಾರದ ವಿರುದ್ಧ,  ಸರ್ಕಾರಿ ಹುದ್ದೆಗಳ ಭರ್ತಿ ನೇಮಕದ ಭ್ರಷ್ಟಾಚಾರದ ವಿರುದ್ದ ಹರಿಹಾಯ್ದರು.

ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾನಾಡಿದ ಅವರು, ಕೆಪಿಎಸ್ಸಿ ಭ್ರಷ್ಟಾಚಾರದಲ್ಲಿ ತೊಡಗಿದವರು ಯಾವ ಪಕ್ಷದವರು ಎಂಬುದು ಮುಖ್ಯವಲ್ಲ ಎಲ್ಲ ಪಕ್ಷಗಳ ಸರ್ಕಾರದ ಅವಧಿಯಲ್ಲೂ ಭ್ರಷ್ಟಾಚಾರ ನಡೆಯುತ್ತಲೇ ಇದೆ. ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ, ಕುಮಾರಸ್ವಾಮಿ, ಯಡಿಯೂರಪ್ಪ ಅವರನ್ನು ಕೇಳಿ, ತಮ್ಮ ಅಧಿಕಾರದ ಅವಧಿಯಲ್ಲಿ ಕೆಪಿಎಸ್ಸಿ ಸಂಸ್ಥೆಗೆ ಯಾವ ಸದಸ್ಯರನ್ನು ಹಣ ಇಲ್ಲದೇ ಪ್ರಮಾಣಿಕವಾಗಿ ನೇಮಕ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

545 ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮವಾಗಿದೆ ಎಂಬುದು ಸರಿಯಲ್ಲ. ಈ ಹಿಂದೆಯೂ ಪೊಲೀಸ್ ನೇಮಕಾತಿಯಲ್ಲಿ ಅವ್ಯವಹಾರ ನಡೆಯುತ್ತಲೇ ಇದೆ. ಯಾವ ಹುದ್ದೆಯೂ ಉಚಿತವಾಗಿ ಸಿಗುವುದಿಲ್ಲ. ಭ್ರಷ್ಟಾಚಾರ ಇಲ್ಲದೇ ಯಾವ ಹುದ್ದೆಯ ನೇಮಕವೂ ಆಗುವುದಿಲ್ಲ ಎಂಬುದು ಜಗಜ್ಜಾಹಿರಾಗಿದೆ ಎಂದರು.

ಸರ್ಕಾರದ ನೇಮಕ ಎಂಬುದು ದಂಧೆಯಾಗಿ ಪರಿಣಮಿಸಿದ್ದು, ಪ್ರತಿಭಾವಂತ ಅಭ್ಯರ್ಥಿಗಳಿಗೆ ಅನ್ಯಾಯ ಮಾಡುವ ಮೋಸದ ಜಾಲ ಸಕ್ರೀಯವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಹೀಗಾಗಿ ಸರ್ಕಾರದ ನೇಮಕಾತಿ ಪಾರದರ್ಶಕವಾಗಬೇಕು. ಇದಕ್ಕಾಗಿ ಅಮೂಲಾಗ್ರ ಬದಲಾವಣೆ ತರಬೇಕು. ಅಕ್ರಮ, ಅವ್ಯವಹಾರ ಯಾವ ಪಕ್ಷ ಹಾಗೂ ಯಾರು ಮಾಡಿದರು ಎಂದು ಆರೋಪ-ಪ್ರತ್ಯಾರೋಪ ಮಾಡುವುದಕ್ಕಿಂತ ಎಲ್ಲರೂ ಪ್ರಾಮಾಣಿಕ ನೇಮಕಾತಿಗೆ ಮುಂದಾಗಬೇಕು. ಪರಿಶ್ರಮಪಟ್ಟು ಓದುವ ಪ್ರತಿಭಾವಂತರಿಗೆ ಅನ್ಯಾಯ ಆಗದಂತೆ ನೇಮಕ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು ಎಂದು ಆಗ್ರಹಿಸಿದರು.

ಜಮೀರ್ ಬಂಧನಕ್ಕೆ ಆಗ್ರಹ

ಹುಬ್ಬಳ್ಳಿ ಗಲಭೆಕೋರರ ಕುಟುಂಬಕ್ಕೆ ಆರ್ಥಿಕ ನೆರವು, ಆಹಾರದ ಕಿಟ್ ವಿತರಿಸಿರುವ ಕಾಂಗ್ರೆಸ್ ಶಾಸಕ ಜಮೀರ ಅಹ್ಮದ್ ವಿರುದ್ಧ ಸರ್ಕಾರ ಕಾನೂನು ಕ್ರಮಕ್ಕೆ ಮುಂದಾಗಬೇಕು. ಉತ್ತರ ಪ್ರದೇಶ ಸರ್ಕಾರ ಆಜಂ ಖಾನ್‍ನನ್ನು ಬಂಧಿಸಿದಂತೆ ಜಮೀರ್ ಅಹ್ಮದ್ ಬಂಧನದ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ದೇಶದ್ರೋಹಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಜಮೀರ್ ಅಹ್ಮದ್ ಇಸ್ಲಾಂ ಮತೀಯವಾದಿಯಾಗಿದ್ದು, ಸರ್ಕಾರದ ವಿರುದ್ಧವೇ ಚಟುವಟಿಕೆ ಮಾಡುತ್ತಾ ಬಂದಿದ್ದಾರೆ. ಹೀಗಾಗಿ ಕೂಡಲೇ ಜಮೀರ್ ಅವರನ್ನು ಬಂಧಿಸಿ ಸಮಗ್ರ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಪೊಲೀಸ್ ಠಾಣೆ ಮೇಲೆ ಕಲ್ಲು ಎಸೆದವರು, ದೇವಸ್ಥಾನಗಳ ಮೇಲೆ ದಾಳಿ ಮಾಡಿದವರನ್ನು ಬೆಂಬಲಿಸುತ್ತಲೇ ಬಂದಿದ್ದಾರೆ. ಸಮಾಜ ಘಾತುಕ ಶಕ್ತಿಗಳು ಜೈಲಿಗೆ ಹೋದಾಗ ಭೇಟಿ ಮಾಡುವುದು, ಸನ್ಮಾನಿಸಿ ಅವರ ಸಮಾಜ ವಿರೋಧಿ ಕೃತ್ಯಗಳಿಗೆ ಬೆಂಬಲಿಸುವಂಥ ನಡೆಗಳನ್ನೇ ಅನುಸರಿಸುತ್ತಾ ಬಂದಿದ್ದಾರೆ ಎಂದು ಕಿಡಿ ಕಾರಿದರು.

ನಮ್ಮ ಪಕ್ಷದಲ್ಲೇ ಇರುವ ಹೊಂದಾಣಿಕೆ ರಾಜಕೀಯ

ಜಮೀರ್ ಅವರು ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಿದ್ದರೂ ಗೃಹ ಸಚಿವರು ಏನು ಮಾಡುತ್ತಿದ್ದಾರೆ ಎಂದು ಸ್ವಪಕ್ಷದ ಸಚಿವ ಆರಗ ಅವರ ವಿರುದ್ಧವೂ ಹರಿಹಾಯ್ದ ಯತ್ನಾಳ್, ದೇಶದ್ರೋಹಿಗಳಿಗೆ ಬೆಂಬಲಿಸುವ ವ್ಯಕ್ತಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಬಂಧಿಸಿ ಜೈಲಿಗೆ ಹಾಕುವ ಧೈರ್ಯ ಮಾಡಬೇಕು. ಆದರೆ ಜಮೀರ್ ಗೆ  ನಮ್ಮದೇ ಪಕ್ಷದ ಓರ್ವ ಮಹಾನ್ ನಾಯಕನ ಬೆಂಬಲವಿದೆ ಎಂದು ಸ್ಪೋಟಕ ಮಾಹಿತಿ ಹೊರ ಹಾಕಿದರು. ಆದರೆ ಬಿಜೆಪಿ ಮಹಾ ನಾಯಕ ಯಾರು ಎಂಬುದನ್ನು ಮಾತ್ರ ಬಹಿರಂಗ ಮಾಡಲಿಲ್ಲ.ನಮ್ಮ ಪಕ್ಷದಲ್ಲೇ ಇರುವ ಹೊಂದಾಣಿಕೆ ರಾಜಕೀಯ, ಸಲುಗೆ ಶಾಸಕ ಜಮೀರ್ ದೇಶದ್ರೋಹಿಗಳಿಗೆ ಬೆಂಬಲ ನೀಡುವ ವರ್ತನೆಗೆ ಕಾರಣ. ವಯಕ್ತಿಯ ವ್ಯವಹಾರಗಳ ಒಡನಾಟವೂ ಅವರಿಗೆ ರಕ್ಷಣೆಗೆ ಸಹಕಾರಿ ಆಗಿದೆ. ಮತ್ತೊಂದೆಡೆ ಜಮೀರ್ ನಡೆಗೆ ಅವರ ಪಕ್ಷದ ನಾಯಕ ಸಿದ್ಧರಾಮಯ್ಯ ಕೂಡ ಮಾಧ್ಯಮಗಳಿಗೆ ಹೇಳಿಕೆ ಕೊಡದೇ ಹೋಗಿರುವುದು ಜಮೀರ್ ನಡೆಗೆ ಬೇಸರ ಮಾಡಿಕೊಂಡಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂದು ಕೆಣಕಿದರು.

ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಯೋ, ಸಂಪೂರ್ಣ ಪುಣಾರಚನೆಯೋ ನನಗೆ ತಿಳಿಯದು. ಆದರೆ ಪಕ್ಷದ ವರಿಷ್ಠರು ಸಂಪುಟದಲ್ಲಿ ಬದಲಾವಣೆಗೆ ನಿರ್ಧರಿಸಿರುವುದು ಸತ್ಯ. ನಾನಂತೂ ಸಚಿವ ಸ್ಥಾನಕ್ಕೆ ಲಾಬಿ ಮಾಡುವುದಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧವಾಗಿರಬೇಕು ಎಂದರು.

ದೇಶಧ ಮುಖ್ಯಮಂತ್ರಿಗಳ ಸಭೆ ಹಾಗೂ ನ್ಯಾಯಾಧೀಶರ ಸಮ್ಮೇಳಕ್ಕಾಗಿ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ, ಸಂಪುಟ ವಿಷಯವಾಗಿ ಯಾರನ್ಣೂ ಭೇಟಿ ಆಗುವುದಿಲ್ಲ ಎಂದಿದ್ದಾರೆ. ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರು ಬಸವ ಜಯಂತಿ ವೇಳೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಆಗ ಸಂಪುಟ ವಿಸ್ತರಣೆ-ಪುನಾರಚನೆ ಬಗ್ಗೆ ಚರ್ಚಿಸುವುದಾಗಿಯೂ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಹೈಕಮಾಂಡ್ ಒಂದೊಳ್ಳೆಯ ಸಂಪುಟ ರಚಿಸುವ ವಿಶ್ವಾಸವಿದೆ ಎಂದರು.

ಟಾಪ್ ನ್ಯೂಸ್

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Delhi Liquor Scam: ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Delhi Liquor Scam:ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.