ಗುಜರಾತ್: ಸ್ಪಷ್ಟ ರಣತಂತ್ರದೊಂದಿಗೆ ಅಖಾಡಕ್ಕಿಳಿದ ಬಿಜೆಪಿ
ಗುಜರಾತ್ನ ಮೇಲಣ ತನ್ನ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸಲು ರಣತಂತ್ರ ರೂಪಿಸಿ, ಕಾರ್ಯೋನ್ಮುಖವಾಗಿದೆ
Team Udayavani
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದಿಯಾಗಿ ಪಕ್ಷದ ಕೇಂದ್ರ ನಾಯಕರು ಪದೇಪದೆ ರಾಜ್ಯಕ್ಕೆ ಭೇಟಿ ನೀಡಿ ರಾಜ್ಯದಲ್ಲಿನ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸುವುದರ ಜತೆಯಲ್ಲಿ ರಾಜ್ಯ ನಾಯಕರಿಗೆ ತಿಳಿ ಹೇಳುವ ಮತ್ತು ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸುವ ಕಾರ್ಯ ನಡೆಸುತ್ತಲೇ ಬಂದಿದ್ದಾರೆ. ಕಳೆದ 2-3 ವಾರಗಳ ಅವಧಿಯಲ್ಲಿ ಕೇಂದ್ರ ಸಚಿವರಾದ ಭೂಪೇಂದರ್ ಯಾದವ್, ಮನ್ಸುಖ್ ಮಾಂಡವಿಯಾ, ಅನುರಾಗ್ ಠಾಕೂರ್ ರಾಜ್ಯಕ್ಕೆ ಭೇಟಿ ನೀಡಿ ಬಿಜೆಪಿಯ ಹಾಲಿ ಸ್ಥಿತಿಗತಿಗಳನ್ನು ಪರಿಶೀಲಿಸಿ ತೆರಳಿದ್ದಾರೆ. ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಆದಿಯಾಗಿ ಕೇಂದ್ರ ಸಚಿವರು ಮತ್ತು ಪಕ್ಷದ ವರಿಷ್ಠ ನಾಯಕರ...