ವಚನ ಎಂಬ ಶ್ರೀಮಂತ ಸಾಹಿತ್ಯ


Team Udayavani, Nov 1, 2019, 7:47 AM IST

VACHANA

ಕನ್ನಡದ ಹಲವು ಸಾಹಿತ್ಯ ಪ್ರಕಾರಗಳ ನಡುವೆ ‘ವಚನ ಸಾಹಿತ್ಯ’ ವಿಶಿಷ್ಟವಾಗಿ ಎದ್ದುನಿಲ್ಲುತ್ತದೆ. ಸರಳ, ನೇರ ನುಡಿಯ ಮೂಲಕ ಇಂದಿಗೂ ಜನಮಾನಸದಲ್ಲಿ ನೆಲೆ ಪಡೆದುಕೊಂಡಿದೆ. ವಚನ ಎಂದರೆ ವಾಣಿ, ಮಾತು ಎಂದರ್ಥ. ವಚನಗಳು ಹುಟ್ಟಿಕೊಂಡಿದ್ದು 12ನೇ ಶತಮಾನದ ಹೊತ್ತಿಗೆ. ಜನಾಂದೋಲನದ ಪರಿಣಾಮವಾಗಿ ಜನಿಸಿದ ಈ ಸಾಹಿತ್ಯ, ಮುಂದೆ ಹಲವು ಬದಲಾವಣೆಗಳಿಗೆ, ಹೊಸ ಪರಂಪರೆಗೆ ನಾಂದಿ ಹಾಡಿತು.
‘ಮಾದಾರ ಚೆನ್ನಯ್ಯ’ ಪ್ರಥಮ ವಚನಕಾರರು. ಇವರ ನಂತರ ಅಸಂಖ್ಯಾತ ವಚನಕಾರರು ಕನ್ನಡ ನೆಲದಲ್ಲಿ ಆಗಿಹೋಗಿದ್ದಾರೆ. ಅಲ್ಲಮ ಪ್ರಭು, ಅಕ್ಕಮಹಾದೇವಿ, ಅಂಬಿಗರ ಚೌಡಯ್ಯ, ಬಸವಣ್ಣ, ಆಯ್ದಕ್ಕಿ ಲಕ್ಕಮ್ಮ, ಮಡಿವಾಳ ಮಾಚಯ್ಯ, ಜೇಡರ ದಾಸೀಮಯ್ಯ, ಮುಕ್ತಾಯಕ್ಕ, ಡೋಹರ ಕಕ್ಕಯ್ಯ ಮುಂತಾದವರು ನೆನಪಿಸಿಕೊಳ್ಳಲೇಬೇಕಾದ ವಚನಕಾರರು.
ವಚನಗಳು ಸರಳ ಹಾಗೂ ಸುಲಭ. ಸಮಾಜದ ಸ್ಥಿತಿಗತಿಯನ್ನು, ಜನರ ಅನಾಗರಿಕ ವರ್ತನೆಗಳನ್ನು, ಅನಿಷ್ಟ ಪದ್ಧತಿಗಳನ್ನು ತೀವ್ರವಾಗಿ ಖಂಡಿಸುವ ಕೆಲಸವನ್ನು ವಚನಗಳು ಮಾಡುತ್ತವೆ. ಸಮಾಜವನ್ನು ಬದಲಾವಣೆ ಮಾಡುವ ನಿಟ್ಟಿನಲ್ಲಿ ಇವು ರೂಪುಗೊಳ್ಳುತ್ತವೆ. ಹೀಗೇ ರೂಪುಗೊಂಡ ವಚನಗಳು ಅಗಣಿತ, ವಚನಕಾರರೂ ಅಗಣಿತ.

ಸಾಹಿತಿಗಳಿಗೆ ಕಾವ್ಯನಾಮವಿರುವುದು ಸಹಜ. ವಚನಕಾರರಿಗೂ ಇದೆ, ಆದರೆ ಅದನ್ನು ‘ಅಂಕಿತ’ ಎನ್ನಲಾಗುತ್ತದೆ. ಪ್ರತಿಯೊಬ್ಬ ವಚನಕಾರ ತನ್ನ ಇಷ್ಟದೇವರ ಹೆಸರನ್ನೇ ತನ್ನ ಅಂಕಿತವನ್ನಾಗಿ ಮಾಡಿಕೊಂಡಿದ್ದಾನೆ. ವಚನದ ಕೊನೆಯಲ್ಲಿ ಅಂಕಿತವನ್ನು ಸೇರಿಸುತ್ತಾರೆ. ಈ ಅಂಕಿತದ ಮೂಲಕವೇ ನಾವು ವಚನಕಾರರನ್ನು ಗುರುತಿಸಬಹುದು.

ಬಸವಣ್ಣನವರ ಅಂಕಿತ – ಕೂಡಲಸಂಗಮದೇವ, ಅಕ್ಕಮಹಾದೇವಿಯವರ ಅಂಕಿತ – ಚೆನ್ನಮಲ್ಲಿಕಾರ್ಜುನ, ಅಲ್ಲಮಪ್ರಭು – ಗುಹೇಶ್ವರ, ಅಂಬಿಗರ ಚೌಡಯ್ಯ – ಅಂಬಿಗ ಚೌಡಯ್ಯ, ಮಡಿವಾಳ ಮಾಚಯ್ಯ – ಕಲಿದೇವ, ಆಯ್ದಕ್ಕಿ ಲಕ್ಕಮ್ಮ – ಮಾರಯ್ಯ ಪ್ರಿಯ ಅಮರೇಶ್ವರ ಲಿಂಗ ಇತ್ಯಾದಿ ಕೆಲವು ಉದಾಹರಣೆಗಳು.

ವಚನಕಾರರು ಕಾಯಕಪ್ರಿಯರು. ‘ಕಾಯಕವೇ ಕೈಲಾಸ’ ಎಂದು ಬಸವಣ್ಣ ಹೇಳಿದ್ದು ಇದೇ ಕಾರಣಕ್ಕೆ. ಕಾಯಕವನ್ನು ದೇವರೆಂದೇ ನಂಬಿ, ಅದರಿಂದಲೇ ದಾಸೋಹ ನಡೆಸುವ ವಿಶಾಲ ಮನಸ್ಸಿನವರಾಗಿದ್ದರು. ಇದಕ್ಕೆ ಉತ್ತಮ ನಿದರ್ಶನವೆಂದರೆ, ಹೆಚ್ಚಿನ ವಚನಕಾರರ ಹೆಸರು ಅವರ ಕಾಯಕವನ್ನು ಪ್ರತಿನಿಧಿಸುತ್ತದೆ. ಆಯ್ದಕ್ಕಿ ಲಕ್ಕಮ್ಮ, ಅಂಬಿಗರ ಚೌಡಯ್ಯ, ಮಾದಾರ ಚೆನ್ನಯ್ಯ, ಮಡಿವಾಳ ಮಾಚಯ್ಯ, ಸೂಳೆ ಸಂಕವ್ವ, ಹೆಂಡದ ಮಾರಯ್ಯ ಇತ್ಯಾದಿ ಉತ್ತಮ ಉದಾಹರಣೆಗಳು.

೧೨ನೇ ಶತಮಾನದಲ್ಲಿಯೇ ಶ್ರೀಸಾಮಾನ್ಯನ ಯೋಚನೆಗಳನ್ನು ಬದಲಿಸಿದ ವಚನಗಳು, ವಚನಕಾರರು ಇಂದಿಗೂ ಪ್ರಸ್ತುತ. ಅದೆಷ್ಟೋ ವಚನಗಳನ್ನು ಇಂದಿಗೂ ಪಾಲಿಸಬಹುದು, ಇಂದಿನ ಕಾಲಕ್ಕೆ, ಘಟನೆಗೆ ಹೋಲಿಸಿಕೊಳ್ಳಬಹುದು. ಈ ವಚನಗಳು ಮುಂದಿನ ಪೀಳಿಗೆಗೂ ಪಾಠವಾಗಲಿ, ಎಂದೆಂದಿಗೂ ಉಳಿಯಲಿ.

“ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ,
ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ,
ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ,
ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ,
ಇದೇ ನಮ್ಮ ಕೂಡಲಸಂಗಮದೇವನೊಲಿಸುವ ಪರಿ” – ಬಸವಣ್ಣ.

– ಟಿ. ವರ್ಷಾ ಪ್ರಭು,
ಪ್ರಥಮ ಎಂಸಿಜೆ,
ಎಸ್.ಡಿ.ಎಂ ಕಾಲೇಜು, ಉಜಿರೆ.

ಟಾಪ್ ನ್ಯೂಸ್

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-13

ಕನ್ನಡ ಶಾಲೆಯಲ್ಲಿ ತ.ನಾಡು ಮಕ್ಕಳ ವಿದ್ಯಾಭ್ಯಾಸ

0611MLE1A-SHAALE

ಮಕ್ಕಳು ಅಸೌಖ್ಯವಾದಾಗ ಶಾಲೆಗೆ ಸಿಹಿತಿಂಡಿ ಹಂಚುವ ಹರಕೆ

0711AJKE01

108 ವರ್ಷಗಳ ಇತಿಹಾಸದೊಂದಿಗೆ ಮುನ್ನಡೆಯುತ್ತಿರುವ ಸರಕಾರಿ ಕನ್ನಡ ಶಾಲೆ

0511KDPP7A-2

ಹತ್ತೂರಿನ ಮಕ್ಕಳಿಗೆ ಅಕ್ಷರ ಕಲಿಸಿದ ಜ್ಞಾನ ದೇಗುಲಕ್ಕೆ 130ರ ಸಂಭ್ರಮ

cc-46

ಆರು ದಶಕಗಳ ಬಳಿಕ ಕಿ.ಪ್ರಾ. ಹಂತದಿಂದ ಮೇಲೇರಿದ ಶಾಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.