ಶನಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Apr 30, 2022, 7:11 AM IST
ಮೇಷ:
ದೀರ್ಘ ಪ್ರಯಾಣ. ನಷ್ಟ ದ್ರವ್ಯ ವನ್ನು ಪಡೆಯಲು ಪ್ರಯತ್ನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೂರದ ವ್ಯವಹಾರಗಳಿಂದ ಧನಾಗಮನ. ಅಧ್ಯಯನ ಪ್ರವೃತ್ತರಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಲಾಭ.
ವೃಷಭ:
ಅನಿರೀಕ್ಷಿತ ಸ್ಥಾನ ವೃದ್ಧಿ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ವಾಕ್ ಚತುರತೆಯಿಂದ ಕೂಡಿದ ನಡೆ. ಧನ ಸಂಪತ್ತಿನ ಅಭಿವೃದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮಾನಸಿಕ ತೃಪ್ತಿ.
ಮಿಥುನ:
ಮಕ್ಕಳಿಂದ ಸಂತೋಷ ವೃದ್ಧಿ. ಅಧ್ಯಯನ ಪ್ರವೃತ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ, ಮಾರ್ಗದರ್ಶನ. ದೈಹಿಕ ಮಾನಸಿಕ ಆರೋಗ್ಯ ವೃದ್ಧಿ.
ಕರ್ಕ:
ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಸ್ಪಷ್ಟತೆ ಇರಲಿ. ಆಸ್ತಿ ಕ್ರಯವಿಕ್ರಯ ವಿಚಾರದಲ್ಲಿ ಮುನ್ನಡೆ. ಸಾಂಸಾರಿಕವಾಗಿ ನೆಮ್ಮದಿಯ ದಿನ.
ಸಿಂಹ:
ಹಠಮಾರಿತನದಿಂದ ನಷ್ಟ ಸಂಭವ. ಆರ್ಥಿಕ ವಿಚಾರಗಳಲ್ಲಿ ಪ್ರಗತಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಚರ್ಚೆಗೆ ಅವಕಾಶ ನೀಡದಿರಿ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ಮಧ್ಯಮ.
ಕನ್ಯಾ:
ಉತ್ತಮ ವಾಕ್ಚತುರತೆ ಪ್ರದರ್ಶನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವ ಸುಖಾದಿ ಲಭ್ಯ. ಉತ್ತಮ ಧನಾರ್ಜನೆ. ಅಧ್ಯಯನ ಪ್ರವೃತ್ತರಿಗೆ ಸರ್ವ ಸೌಲಭ್ಯ ಪ್ರಾಪ್ತಿ. ಮನೆಯಲ್ಲಿ ಸಂತಸದ ವಾತಾವರಣ.
ತುಲಾ:
ಗುರುಹಿರಿಯರ ಆಶೀರ್ವಾದದಿಂದ ಹೆಚ್ಚಿನ ಸ್ಥಾನ ವೃದ್ಧಿ. ಸಹೋದ್ಯೋಗಿಗಳ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಹಾಗೂ ಹೆಚ್ಚಿನ ಸಂಪಾದನೆ ಪ್ರಾಪ್ತಿ. ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಚರ್ಚೆ ಸಂಭವ.
ವೃಶ್ಚಿಕ:
ಉದ್ಯೋಗ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ. ನಿರೀಕ್ಷೆಗೆ ಸರಿಯಾಗಿ ಧನಾಗಮ. ಭೂಮ್ಯಾದಿ ವ್ಯವಹಾರಗಳಲ್ಲಿ ಅಡಚಣೆ ವಿಳಂಬ. ಮಾನಸಿಕ ಒತ್ತಡ. ದಂಪತಿಗಳಲ್ಲಿ ಪರಸ್ಪರ ಸಹಕಾರ ವೃದ್ಧಿ. ಮಕ್ಕಳಿಂದ ಸಂತೋಷ.
ಧನು:
ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಅವಿವಾಹಿತರಿಗೆ ವಿವಾಹ ಭಾಗ್ಯ. ನೂತನ ಮಿತ್ರರ ಸಮಾಗಮ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಅತಿಯಾದ ಪರಿಶ್ರಮದಿಂದ ಧನ ವೃದ್ಧಿ. ಧಾರ್ಮಿಕ ಕಾರ್ಯಗಳಿಗಾಗಿ ದೇವತಾ ಸ್ಥಳ ಸಂದರ್ಶನ.
ಮಕರ:
ದೀರ್ಘ ಪ್ರಯಾಣ ಸಂಭವ. ಭೂಮ್ಯಾದಿ ವಿಚಾರಗಳಲ್ಲಿ, ಆಸ್ತಿ ವಿಚಾರ ಗಳಲ್ಲಿ ಬದಲಾವಣೆ ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ಅನ್ಯರ ಜೊತೆ ವ್ಯವಹರಿಸುವಾಗ ಎಚ್ಚರವಿರಲಿ.
ಕುಂಭ:
ನಡೆನುಡಿಗಳಲ್ಲಿ ಸ್ಪಷ್ಟತೆ ಇರಲಿ. ಅನ್ಯಥಾ ತೊಂದರೆಗಳನ್ನು ನಿಯಂತ್ರಿಸದಿರಿ. ಭೂಮ್ಯಾದಿ ವ್ಯವಹಾರಗಳಲ್ಲಿ ಏರುಪೇರು ಸಂಭವ. ಮಕ್ಕಳಿಗೆ ಅಧ್ಯಯನ ನಿಮಿತ್ತ ದೂರ ಪ್ರಯಾಣ. ಆರೋಗ್ಯ ಗಮನಿಸಿ. ಸಂಸಾರದಲ್ಲಿ ಸಾಮರಸ್ಯ ಕಾಪಾಡಿಕೊಳ್ಳಿ.
ಮೀನ:
ವೃದ್ಧಿದಾಯಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಧನಾಗಮನ. ಸ್ಥಾನ ಕೀರ್ತಿ ಪ್ರಶಂಸೆ ಪ್ರಾಪ್ತಿ. ಉತ್ತಮ ವಾಕ್ಚತುರತೆ ಮನೋರಂಜನೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವುದು. ವಿದ್ಯಾರ್ಥಿಗಳು ವಿದ್ಯಾರ್ಜನೆಯ ಬಗ್ಗೆ ಗಮನಹರಿಸುವುದು ಉತ್ತಮ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ
Daily Horoscope: ಈ ರಾಶಿ ಅವರಿಗಿಂದು ಶುಭಫಲಗಳ ದಿನ
Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ
Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ