ಆರೋಗ್ಯ ಗಮನಿಸಿ, ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಣಯದಿಂದ ನಷ್ಟ ಸಂಭವಿಸೀತು
Team Udayavani, Feb 19, 2022, 7:30 AM IST
ಮೇಷ: ಹೆಚ್ಚಿದ ಪರಿಶ್ರಮ. ಹಠ ಮಾಡದೇ ತಾಳ್ಮೆಯಿಂದ ಕಾರ್ಯ ಪ್ರವೃತ್ತರಾಗಿ. ದೂರದ ವ್ಯವಹಾರಗಳಿಂದ ಹೆಚ್ಚಿದ ವರಮಾನ. ಗುರುಹಿರಿಯರ ಮೇಲಾಧಿಕಾರಿಗಳ ಮಾರ್ಗದರ್ಶನ ಪಾಲಿಸುವುದರಿಂದ ಯಶಸ್ಸು ಲಭಿಸೀತು.
ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ಉದಾರತೆ ತೋರುವುದರಿಂದ ಜನಮನ್ನಣೆ. ನಿರೀಕ್ಷಿತ ಸ್ಥಾನ ಸುಖ. ಯಶಸ್ಸು ಲಭಿಸಿದ ಮನಃತೃಪ್ತಿ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ದೀರ್ಘ ಪ್ರಯಾಣ ಸಂಭವ.
ಮಿಥುನ: ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ. ನಿರೀಕ್ಷಿತ ಧನಾಗಮ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಪಾಲುದಾರರು ಪರಸ್ಪರ ಪ್ರೋತ್ಸಾಹಿಸಿ ಕಾರ್ಯ ಸಾಧಿಸಿಕೊಳ್ಳಿ.
ಕಟಕ: ಉತ್ತಮ ಸ್ಥಾನಮಾನಕ್ಕಾಗಿ ಪ್ರಯತ್ನ. ಅಧ್ಯಯನದಲ್ಲಿ ತತ್ಪರತೆ. ಕುಟುಂಬದಲ್ಲಿ ತಾಳ್ಮೆ ಸಹನೆಯಿಂದ ವರ್ತಿಸಿ. ಪರಕಾರ್ಯದಲ್ಲಿ ಆಸಕ್ತಿ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಧಾರದಿಂದ ನಷ್ಟ ಸಂಭವ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ.
ಸಿಂಹ: ಹಿರಿಯರಿಂದ ಸಂತೋಷ. ಗೃಹ ವಾಹನಾದಿ ವಿಚಾರಗಳಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಣಯದಿಂದ ನಷ್ಟ ಸಂಭವಿಸೀತು.
ಕನ್ಯಾ: ಧೈರ್ಯ ಸಾಹಸ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ ಹಾಗೂ ವರಮಾನ. ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಗೌರವ ಪ್ರಾಪ್ತಿ. ಸಾಂಸಾರಿಕ ಸುಖ ತೃಪ್ತಿದಾಯಕ.
ತುಲಾ: ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಗೌರವ ಆದರಾದಿ ಸುಖ. ನೂತನ ಮಿತ್ರರ ಸಮಾಗಮ. ಹೆಚ್ಚಿದ ಧನ ಲಾಭ. ಆಸ್ತಿ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ.
ವೃಶ್ಚಿಕ: ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪರಾವಲಂಬನೆ ಅನಿವಾರ್ಯವಾದೀತು. ಧನಾರ್ಜನೆ ಯಲ್ಲಿ ಪ್ರಗತಿ. ಪಾರದರ್ಶಕತೆಗೆ ಆದ್ಯತೆ ನೀಡಿ.
ಧನು: ದೈಹಿಕವಾಗಿಯೂ ಮಾನಸಿಕ ವಾಗಿಯೂ ಆರೋಗ್ಯ ಸುದೃಢ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರುಹಿರಿಯರ ಮೇಲಾಧಿಕಾರಿಗಳ ಗಣ್ಯರ ಸಹಕಾರ ಪ್ರೋತ್ಸಾಹ. ಆಸ್ತಿ ವಿಚಾರದಲ್ಲಿ ಮುನ್ನಡೆ.
ಮಕರ: ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಸಮಾಜದಲ್ಲಿ ಗೌರವ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ಬದಲಾವಣೆ. ಬಂಧುಮಿತ್ರರೊಂದಿಗೆ ಚರ್ಚೆಗೆ ಅವಕಾಶ ನೀಡದಿರಿ. ನಿರೀಕ್ಷಿತ ಧನಾರ್ಜನೆ.
ಕುಂಭ: ಹಣಕಾಸಿನ ವಿಚಾರದಲ್ಲಿ ಅಪೇಕ್ಷಿಸಿ ದಂತೆ ಉತ್ತಮ ಪ್ರತಿಫಲ. ಅಧಿಕಾರ ಗೌರವಾದಿ ಪ್ರಾಪ್ತಿ. ಗುರುಹಿರಿಯರ ಆರೋಗ್ಯ ಸುದೃಢ. ವಿದ್ಯಾರ್ಥಿಗಳಿಗೆ ದೂರ ಸಂಚಾರ ಸಂಭವ ಹಾಗೂ ಪರಿಶ್ರಮ. ಬಂಧುಮಿತ್ರರಿಂದ ಸಹಕಾರ.
ಮೀನ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ ಪ್ರಾಪ್ತಿ. ಆರೋಗ್ಯ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ದಾಖಲಾತಿಗಳೊಂದಿಗೆ ವ್ಯವಹರಿಸಿ. ಸಾಲಖಾತೆಗೆ ಒಳಗಾಗದಂತೆ ಎಚ್ಚರಿಕೆ ಇರಲಿ. ವಿದ್ಯಾರ್ಥಿಗಳಿಗೆ, ಅಧ್ಯಯನ ನಿರತರಿಗೆ ಅತ್ಯಧಿಕ ಪರಿಶ್ರಮ ಅಗತ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ
Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ