ಈ ರಾಶಿಯವರಿಗಿಂದು ಆಹಾರ ವ್ಯತ್ಯಯದಿಂದ ಆರೋಗ್ಯ ಸಮಸ್ಯೆಯು ತೋರಿ ಬಂದೀತು, ಕಾಳಜಿ ವಹಿಸಿರಿ


Team Udayavani, Feb 28, 2021, 7:48 AM IST

horo

28-02-2021

ಮೇಷ: ಅನಿರೀಕ್ಷಿತ ಶುಭ ಸಮಾಚಾರದಿಂದ ಕಾರ್ಯ ಸಿದ್ಧಿಯಾಗಲಿದೆ. ಕಾರ್ಯರಂಗದಲ್ಲಿ ನಿಮ್ಮ ಸ್ವಯಂ ಪ್ರಜ್ಞೆಯೂ ಪ್ರಯತ್ನ ಬಲಕ್ಕೆ ಒತ್ತು ನೀಡಿದ್ದಲ್ಲಿ ಯಶಸ್ಸು ಕೂಡಿ ಬರಲಿದೆ. ಸಣ್ಣ ವಿಚಾರದಲ್ಲಿ ಉದ್ವೇಗ ಮಾಡದಿದ್ದರೆ ಉತ್ತಮ.

ವೃಷಭ: ನಿರುದ್ಯೋಗದಿಂದ ಅಲೆದು ಬೇಸತ್ತ ನಿಮಗೆ ಉದ್ಯೋಗ ದೊರೆತು ಸಂತಸವಾಗಲಿದೆ. ಹಣಕಾಸಿನ ವಿಚಾರದಲ್ಲಿ ಆತಂಕಕ್ಕೆ ಕಾರಣರಾಗದಿರಿ. ನೀವು ನಿಮ್ಮವರು ಎಂದೆಣಿಸಿದವರು ಕೈಚೆಲ್ಲಿ ಕೂತಾರು. ಬೇಸರಿಸದಿರಿ.

ಮಿಥುನ: ಕ್ರಯವಿಕ್ರಯದಲ್ಲಿ ತುಸು ಲಾಭ ಕಂಡು ಬರಲಿದೆ. ಅದರಿಂದ ಉತ್ಸಾಹ ದೊರಕೀತು. ಎಣಿಕೆಗಳೆಲ್ಲಾ ಈಡೇರುವುದರಿಂದ ಧೈರ್ಯ ಪ್ರಯತ್ನ ಬಲದಿಂದ ಕಾರ್ಯ ಸಾಧಿಸುವಿರಿ. ಹೊಸ ವ್ಯಾಪಾರ ವ್ಯವಹಾರ ಈಗ ಬೇಡ.

ಕರ್ಕ: ಹೊಸ ಉದ್ಯಮ ಯಾ ವ್ಯವಹಾರಕ್ಕೆ ಕೈ ಹಾಕಿದ್ದಲ್ಲಿ ಸ್ವಲ್ಪ ಸ್ವಲ್ಪ ಲಾಭಾಂಶ ಕಂಡು ಬಂದು ನಿಧಾನವಾಗಿ ಏರುಗತಿಯನ್ನು ಕಾಣಲಿದೆ. ಆಗಾಗ ಭಿನ್ನಾಭಿಪ್ರಾಯದಿಂದ ಸಾಂಸಾರಿಕ ಸುಖ ಕಿರಿಕಿರಿ ಎನಿಸಲಿದೆ. ತಾಳ್ಮೆ ಇರಲಿ.

ಸಿಂಹ: ವಿವಾಹೇತರರಿಗೆ ವೈವಾಹಿಕ ಜೋಡಣೆಯು ಸಂತಸ ತಂದೀತು. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಅಭಿವೃದ್ಧಿಯು ಕಂಡು ಬರುವುದು. ಆದರೆ ವೈಯಕ್ತಿಕವಾಗಿ ಆರೋಗ್ಯದ ಬಗ್ಗೆ ಜಾಗ್ರತೆ ಮಾಡಿರಿ. ಅತೀಸಹನೆ ನಿಮಗಿಂದು ಬೇಕು.

ಕನ್ಯಾ: ಉದ್ಯೋಗ ಹಾಗೂ ಕಾರ್ಯರಂಗದಲ್ಲಿ ಖಚಿತ ಹಾಗೂ ಸಮರ್ಪಕ ನಿಲುವು ಮುನ್ನಡೆಗೆ ಸಾಧಕವಾಗಲಿದೆ. ಸಾಂಸಾರಿಕವಾಗಿ ಆತ್ಮೀಯರು ಮಧ್ಯಸ್ಥಿಕೆ ವಹಿಸಬೇಕಾದ ಸಂದಿಗ್ಧತೆ ತೋರಿ ಬಂದೀತು. ಜಾಗ್ರತೆ ಮಾಡಿರಿ.

ತುಲಾ: ಆರ್ಥಿಕವಾಗಿ ಹಣಕಾಸಿನ ಸಂಪಾದನೆ ಉತ್ತಮವಿದ್ದರೂ ಬರಬೇಕಾದ ಬಾಕಿ ಹಣಕ್ಕಾಗಿ ಒದ್ದಾಟ ಕಂಡು ಬಂದೀತು. ನಿಮ್ಮ ವಿಶ್ವಾಸದ ದುರುಪಯೋಗವಾಗದಂತೆ ಜಾಗ್ರತೆ ವಹಿಸಿರಿ. ವಿದ್ಯಾರ್ಥಿಗಳಿಗೆ ಪ್ರಯತ್ನ ಬೇಕೇಬೇಕು.

ವೃಶ್ಚಿಕ: ಆಹಾರ ವ್ಯತ್ಯಯದಿಂದ ಆರೋಗ್ಯ ಸಮಸ್ಯೆಯು ತೋರಿ ಬಂದೀತು. ಕಾಳಜಿ ವಹಿಸಿರಿ. ಹಿರಿಯರ ಅಭಿಪ್ರಾಯ ಭೇದದಿಂದ ಶುಭಮಂಗಲ ಕಾರ್ಯಗಳು ವಿಳಂಬವಾಗಲಿದೆ. ಗೃಹದಲ್ಲಿ ಅತೀ ಹೆಚ್ಚಿನ ಖರ್ಚು ತೋರಿ ಬಂದೀತು.

ಧನು: ಅವಕಾಶಗಳು ಕೂಡಿ ಬರಲು ನಿಧಾನವಾದರೂ ನಿಶ್ಚಿತ ರೂಪದಲ್ಲಿ ನಿಮಗೆ ಅಭಿವೃದ್ಧಿ ತೋರಿಬರುತ್ತದೆ. ಆರ್ಥಿಕವಾಗಿ ಹಣಕಾಸಿನ ಸಂಪಾದನೆ ಉತ್ತಮವಿದ್ದರೂ ಬರಬೇಕಾದ ಬಾಕಿ ಹಣಕ್ಕಾಗಿ ಒದ್ದಾಟ ತಂದೀತು.

ಮಕರ: ನಿಮ್ಮ ವಿಶ್ವಾಸದ ದುರುಪಯೋಗವಾಗದಂತೆ ಗಮನ ಹರಿಸಬೇಕಾಗುತ್ತದೆ. ಅವಿವಾಹಿತರ ಪ್ರಯತ್ನ ಬಲಕ್ಕೆ ಕಂಕಣ ಭಾಗ್ಯ ಪ್ರಾಪ್ತಿಯಾಗಲಿದೆ. ಅನಾವಶ್ಯಕವಾಗಿ ಸಮಯ ವ್ಯರ್ಥವಾಗದಂತೆ ಕಾಳಜಿ ವಹಿಸುವುದು.

ಕುಂಭ: ದಾಂಪತ್ಯದಲ್ಲಿ ಸ್ವಲ್ಪ ಸಮಾಧಾನ ಕಂಡು ಬರಲಿದೆ. ಪತ್ನಿಯ ಸಹಕಾರವು ನಿಮಗೆ ದೊರಕುವುದು. ಬರಬೇಕಾದ ಹಣವು ಕೈ ಸೇರಲಿದೆ. ಮಿತ್ರರಿಂದ ಸಹಕಾರವು ಕೂಡಿ ಬರುವುದು. ನೂತನ ದಂಪತಿಗಳಿಗೆ ಸಿಹಿ ಸುದ್ದಿ ಇದೆ.

ಮೀನ: ಕೌಟುಂಬಿಕವಾಗಿ ಬಂಧು ಭಾಂದವರ ಸಹಕಾರ ನಿಮಗಿದ್ದರೂ ವಿಶ್ವಾಸ ಅತೀ ಇಡದಿರಿ. ಅವಿವಾಹಿತರ ಪ್ರಯತ್ನ ಬಲಕ್ಕೆ ಕಂಕಣ ಭಾಗ್ಯ ಲಭಿಸಲಿದೆ. ಸ್ವಲ್ಪ ಸಮಾಧಾನ ಚಿತ್ತದಿಂದ ಆಲೋಚಿಸಿದರೆ ಉತ್ತಮ ಫ‌ಲವಿದೆ.

ಎನ್.ಎಸ್. ಭಟ್‌

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.