ಗ್ರಹಬಲ: ಅತೀ ಮಹತ್ವದ ವಿಚಾರದಲ್ಲಿ ದುಡುಕದೆ ವಿವೇಚನೆಯಿಂದ ಹೆಜ್ಜೆ ಇಡಿ, ಜಯ ನಿಮ್ಮದೆ


Team Udayavani, May 21, 2021, 7:12 AM IST

ಗ್ರಹಬಲ: ಅತೀ ಮಹತ್ವದ ವಿಚಾರದಲ್ಲಿ ದುಡುಕದೆ ವಿವೇಚನೆಯಿಂದ ಹೆಜ್ಜೆ ಇಡಿ, ಜಯ ನಿಮ್ಮದೆ

21-05-2021

ಮೇಷ: ಆಕಸ್ಮಿಕವಾಗಿ ಧನಾಗಮನದಿಂದ ಕಾರ್ಯಸಿದ್ಧಿ ಎನಿಸಿ ಮನೆಯಲ್ಲಿ ಧಾರ್ಮಿಕ ಹಾಗೂ ಶುಭಮಂಗಲ ಕಾರ್ಯಗಳಿಂದ ಮನಸ್ಸು ಉಲ್ಲಸಿತಗೊಳ್ಳಲಿದೆ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿ ಬರುವುದು.

ವೃಷಭ: ಎಲ್ಲದಕ್ಕೂ ಹಿರಿಯರ ಮಾರ್ಗದರ್ಶನ ಪಡೆದರೆ ಉತ್ತಮ ಎನಿಸಲಿದೆ. ಮಕ್ಕಳ ಆರೋಗ್ಯದತ್ತ ಗಮನಹರಿಸುವುದು ಅಗತ್ಯ. ದುಡುಕಿನಿಂದ ಕೆಟ್ಟ ಪರಿಣಾಮಗಳಿಗೆ ಕಾರಣರಾಗದಿರಿ. ಮನೆಯಲ್ಲಿ ಸಮಾಧಾನ ನೆಲೆಸಲಿದೆ.

ಮಿಥುನ: ಪ್ರೀತಿ ಪಾತ್ರರ ಸಮಾಗಮದಿಂದ ಉತ್ಸಾಹ ತೋರಿಬರಲಿದೆ. ವಾಹನ ಖರೀದಿ ಯಾ ಗೃಹ ಯಾ ಭೂಮಿ ಖರೀದಿದಾರರಿಗೆ ಅಧಿಕ ಧನವ್ಯಯವಾದರೂ ಸಮಾಧಾನವೆನಿಸಲಿದೆ. ವ್ಯಾಪಾರ, ವ್ಯವಹಾರದಲ್ಲಿ ಚೇತರಿಕೆ ಇದೆ.

ಕರ್ಕ: ಆರ್ಥಿಕವಾಗಿ ಅಭಿವೃದ್ಧಿಯು ಕಂಡು ಬರುವುದು. ಉದ್ಯೋಗಾಪೇಕ್ಷಿಗಳಿಗೆ ಆಕಸ್ಮಿಕ ಉದ್ಯೋಗ ಲಾಭ ಒದಗಿ ಬರಲಿದೆ. ಹಿಂದಿನ ಕೆಲಸಕಾರ್ಯಗಳ ಬಗ್ಗೆ ಸಿಂಹಾವಲೋಕನ ಅಗತ್ಯವಿದೆ. ಆಪ್ತ ಸ್ನೇಹಿತರಿಂದ ನೆರವು ಕಂಡುಬಂದೀತು.

ಸಿಂಹ: ಕೃಷಿಕರಿಗೆ ಆಗಾಗ ಆರಂಭದ ಮಳೆಯಿಂದ ತುಸು ನೆಮ್ಮದಿ ಎನಿಸಿ ಸಾಧಕವಾಗಲಿದೆ. ಆಚಾರವಂತರಿಗೆ ದೂರದ ಕ್ಷೇತ್ರಗಳ ದರ್ಶನ ಭಾಗ್ಯ ದೊರೆತು ನೆಮ್ಮದಿ ತರಲಿದೆ. ಕೂಡಿಟ್ಟ ಹಣದ ವ್ಯಯದಿಂದ ಸದುಪಯೋಗವಾಗಲಿದೆ.

ಕನ್ಯಾ: ನಿಮ್ಮ ಕಾರ್ಯವೈಖರಿಗೆ ಸಹೋದ್ಯೋಗಿಗಳಿಂದ ಪ್ರಶಂಸೆಗೆ ಒಳಗಾಗುವಿರಿ. ನಿರುದ್ಯೋಗಿಗಳು ಉದ್ಯೋಗದ ಲಾಭವನ್ನು ಪಡೆದಾರು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ರೀತಿಯಲ್ಲಿ ಫ‌ಲಿತಾಂಶ ದೊರೆಯಲಿದೆ. ಮುಂದಾಳತ್ವ ವಹಿಸುವಿರಿ.

ತುಲಾ: ಉದ್ಯೋಗಿಗಳಿಗೆ ಕಚೇರಿಯ ಕೆಲಸಗಳು ನಿಮ್ಮ ಪರವಾಗಿ ಕಾರ್ಯ ಮಾಡಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ರೀತಿಯಲ್ಲಿ ಫ‌ಲಿತಾಂಶ ದೊರಕಲಿದೆ. ನಿರುದ್ಯೋಗಿಗಳಿಗೆ ಅವರ ಇಚ್ಛೆಗೆ ಅನುಗುಣವಾಗಿ ಉದ್ಯೋಗವು ಲಭಿಸಲಿದೆ. ಶುಭವಿದೆ.

ವೃಶ್ಚಿಕ: ಆರೋಗ್ಯ ಭಾಗ್ಯವು ಸಾವಕಾಶವಾಗಿ ಸುಧಾರಿಸಿ ತೃಪ್ತಿ ಎನಿಸಲಿದೆ. ವ್ಯಾಪಾರಿಗಳಿಗೆ ತಕ್ಕಮಟ್ಟಿನ ಲಾಭವು ಸಿಗಲಿದೆ. ಆಕಸ್ಮಿಕ ವಿದೇಶ ಯಾನದ ಯೋಗದಿಂದ ವಿದ್ಯಾರ್ಥಿಗಳಿಗೆ ಪೂರಕವಾದ ವಾತಾವರಣ ದೊರಕಲಿದೆ.

ಧನು: ಅತೀ ಮಹತ್ವದ ವಿಚಾರದಲ್ಲಿ ದುಡುಕದೆ ವಿವೇಚನೆಯಿಂದ ಹೆಜ್ಜೆ ಇಟ್ಟಲ್ಲಿ ಜಯವು ನಿಮ್ಮ ಪಾಲಿಗಿರುತ್ತದೆ. ಬಹುದಿನಗಳಿಂದ ಕಾದು ಸೋತವರಿಗೆ ಕಂಕಣಬಲ ಕೂಡಿ ಬರಲಿದೆ. ಸಾಂಸಾರಿಕವಾಗಿ ಸ್ವಲ್ಪ ಕಿರಿಕಿರಿ ಕಂಡುಬಂದೀತು.

ಮಕರ: ಆತ್ಮವಿಶ್ವಾಸ, ಸ್ವಪ್ರಯತ್ನದಲ್ಲಿ ನಂಬಿಕೆ ಇಟ್ಟಲ್ಲಿ ಕಾರ್ಯಸಿದ್ಧಿಯಾಗಲಿದೆ. ಸಾಂಸಾರಿಕವಾಗಿ ಸಮಾಧಾನದಿಂದ ಸುಧಾರಿಸಿಕೊಂಡು ಹೋಗುವುದು ಒಳಿತು. ಮಹಿಳೆಯರಿಗೆ ಅನಾವಶ್ಯಕವಾಗಿ ಋಣಾತ್ಮಕ ಚಿಂತನೆಗಳು ಕಾಡಲಿದೆ.

ಕುಂಭ: ಪುರುಷರಿಗೆ ವ್ಯಾಪಾರ, ವ್ಯವಹಾರದಲ್ಲಿ ವಂಚನೆ ತೋರಿಬಂದು ವಿಶ್ವಾಸದ ದುರುಪಯೋಗವಾಗಲಿದೆ. ಮಾತಿಗೆ ಮಾತು ಬೆಳೆಸದೆ ಮೌನದಿಂದ ಕಾರ್ಯಸಾಧಿಸಬೇಕು. ನಿಷ್ಠೂರ ಕಟ್ಟಿಕೊಳ್ಳುವುದು ಒಳ್ಳೆಯದಲ್ಲ.

ಮೀನ: ಸಾಂಸಾರಿಕವಾಗಿ ಸಮಾಧಾನವಿದ್ದರೂ ಹಿತಶತ್ರುಗಳ ಉಪಟಳ ಹಾಗೂ ದಾಯಾದಿಗಳ ಕಿರಿಕಿರಿಯು ತಪ್ಪಿದಲ್ಲಿ ದೂರ ಸಂಚಾರದ ಸಾಧ್ಯತೆ ಇದ್ದು ಸಾಧಕ ಬಾಧಕಗಳ ಬಗ್ಗೆ ಯೋಚಿಸಿ ಮುನ್ನಡೆಯಿರಿ. ಧನವ್ಯಯವು ಹೆಚ್ಚಾಗಲಿದೆ

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

1-24-sunday

Horoscope: ಅವಿವಾಹಿತರಿಗೆ ಸರಿಯಾದ ಜೋಡಿ ಲಭಿಸುವ ಆಶೆ, ಆಭರಣ ವ್ಯಾಪಾರಿಗಳಿಗೆ ಲಾಭ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.