ಇಂದಿನ ಗ್ರಹಬಲ: ಯಾರಿಗೆ ಶುಭ? ಯಾರಿಗೆ ಲಾಭ?


Team Udayavani, Jun 1, 2021, 7:26 AM IST

ಇಂದಿನ ಗ್ರಹಬಲ: ಯಾರಿಗೆ ಶುಭ? ಯಾರಿಗೆ ಲಾಭ?

01-06-2021

ಮೇಷ: ನಿಮ್ಮ ಆಪ್ತರು ಬೇಜವಾಬ್ದಾರಿಯಿಂದ ವರ್ತಿಸಬಹುದು. ಅದರ ಹೊಣೆಗೇಡಿತನವು ನಿಮ್ಮನ್ನು ಕಷ್ಟಕ್ಕೆ ಸಿಲುಕಿಸಬಹುದು. ಎಚ್ಚರದಿಂದಿರಿ. ಅನಿರೀಕ್ಷಿತ ದೂರ ಸಂಚಾರದ ಸಾಧ್ಯತೆ ಕಾರ್ಯಾನುಕೂಲವಾಗಲಿದೆ.

ವೃಷಭ: ಸಾಮಾಜಿಕ ಚಟುವಟಿಕೆಗಳಲ್ಲಿ ಬಹು ಚುರುಕಾಗಿ ಕೆಲಸ ಮಾಡಲಿದ್ದೀರಿ. ಯಾವುದೇ ಕೆಲಸ ಮಾಡುವ ಮುನ್ನ ದುಡುಕದೆ ಪೂರ್ವ ತಯಾರಿಯ ಅಗತ್ಯವಿದೆ. ಗೆಳೆಯರ ಬಳಗವು ಬಹಳ ದೊಡ್ಡದಾದೀತು.

ಮಿಥುನ: ನಿಮ್ಮ ವಿಶ್ವಾಸದ ದುರುಪಯೋಗವಾಗದಂತೆ ಜಾಗ್ರತೆ ಮಾಡುವುದು. ನಿಮ್ಮ ಸ್ಫೂರ್ತಿಯು ನಿಮ್ಮನ್ನು ಮುನ್ನಡೆಸಿ ವಿಜಯದ ಪಥದತ್ತ ಸಾಗಿಸಲಿದೆ. ಬ್ಯಾಂಕ್‌, ಫೈನಾನ್ಸ್‌ಗಳಲ್ಲಿ ಆದಾಯ ವೃದ್ಧಿ ಇದೆ.

ಕರ್ಕ: ನಿಮ್ಮ ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿಯು ಹೆಚ್ಚಲಿದೆ. ಅವಿವಾಹಿತರಿಗೆ ಮಾತುಕತೆಯಿಂದ ವೈವಾಹಿಕ ಸಂಬಂಧವು ಕುದುರಲಿದೆ. ಕೆಲವೊಂದು ಅದ್ಭುತ ಹೊಳಹುಗಳು ನಿಮ್ಮ ಗೋಚರಕ್ಕೆ ಬರಲಿದೆ.

ಸಿಂಹ: ನಿಮ್ಮ ಸಾಮರ್ಥ್ಯದ ಮೇಲೆ ನಿಮಗೆ ವಿಶ್ವಾಸವಿರಲಿ. ಮೇಲಾಧಿಕಾರಿಗಳಿಂದ ಮೆಚ್ಚುಗೆ ಗಳಿಸಲಿದ್ದೀರಿ. ಸಾಮಾಜಿಕ ಕ್ಷೇತ್ರದಲ್ಲಿ ಯಶಸ್ಸು, ಸೂಕ್ತ ಸ್ಥಾನಮಾನವು ನಿಮ್ಮದಾಗಲಿದೆ. ಗೃಹದಲ್ಲಿ ಮಂಗಲಕಾರ್ಯದ ತಯಾರಿ.

ಕನ್ಯಾ: ಭವಿಷ್ಯಕ್ಕೆ ಒಳ್ಳೆಯ ಯೋಜನೆ ರೂಪಿಸಲು ಇದು ಸಕಾಲವೆನ್ನಬಹುದು. ಆಗಾಗ ಅನಿರೀಕ್ಷಿತ ಖರ್ಚುವೆಚ್ಚಗಳು ಬಂದೊದಗಬಹುದು. ಉಳಿತಾಯದ ಹೆಚ್ಚಳಕ್ಕೆ ಗಮನ ನೀಡಿರಿ. ಮುಂದಕ್ಕೆ ಉಪಯೋಗವಿದೆ.

ತುಲಾ: ನಿಮ್ಮ ಉದಾಸೀನತೆಯ ವಿಳಂಬ ನೀತಿಯಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಲಿದೆ. ಶೇರು, ಬಿಜಿನೆಸ್‌, ಲಾಟರಿ ಫೈನಾನ್ಸ್‌ಗಳ ಬಗ್ಗೆ ಭರವಸೆ ಬೇಡ. ವಿದ್ಯಾರ್ಥಿಗಳಿಗೆ ಫ‌ಲಿತಾಂಶದಿಂದ ನಿರಾಸೆ.

ವೃಶ್ಚಿಕ: ಗೃಹಿಣಿಗೆ ಅನಾವಶ್ಯಕವಾಗಿ ಉದ್ವೇಗ, ಕೋಪ-ತಾಪಗಳು ಹೆಚ್ಚಾದೀತು. ಆರೋಗ್ಯದ ಕಡೆ ಗಮನಹರಿಸುವುದು ಉತ್ತಮ. ಕೆಲವೊಮ್ಮೆ ವಿಷವೂ ಅಮೃತವಾದೀತು. ವೃತ್ತಿಯಲ್ಲಿ ಸ್ತ್ರೀ ಮೂಲಕ ಅಪವಾದ ಭೀತಿ.

ಧನು: ಯಾವುದಕ್ಕೂ ನಿಧಾನಗತಿಯ ದಿನಗಳಿವು. ವೃತ್ತಿರಂಗದಲ್ಲಿ ಆಶಾಭಂಗವಾಗಲಿದ್ದರೂ ಕಾರ್ಯಸಿದ್ಧಿಯಿಂದ ನೆಮ್ಮದಿ ಸಿಗಲಿದೆ. ಮಕ್ಕಳ ವೈವಾಹಿಕ ಸಂಬಂಧ ವಿಚಾರದಲ್ಲಿ ಮಾತುಕತೆಯು ಮಂಗಲ ಹಾಡಲಿದೆ.

ಮಕರ: ನೀವು ಬಯಸಿದ್ದು ದೊರಕಲಾರದು. ಆ ಬಗ್ಗೆ ಕೊರಗುತ್ತಾ ಕೂರಬೇಡಿರಿ. ಮುಂದಿನ ಯೋಜನೆಗೆ ಕಾರ್ಯರೂಪಿಸಿರಿ. ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಆಶಾವಾದಿಗಳಾಗಿರಿ. ಭರವಸೆಯನ್ನಿಡಿರಿ.

ಕುಂಭ: ಸರಕಾರೀ ಕೆಲಸ ಕಾರ್ಯಗಳು ಕಾರ್ಯ ರೂಪಕ್ಕೆ ಬರಲಿದೆ. ಸಂಬಂಧಗಳನ್ನು ಜತನ ದಿಂದ ಕಾಯ್ದುಕೊಳ್ಳಿರಿ. ಸಂಬಂಧ ಕೆಡಿಸುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಂಡರೆ ಉತ್ತಮ.

ಮೀನ: ಅವಿವಾಹಿತರಿಗೆ ವಿವಾಹಯೋಗ ತಡೆ-ತೊಂದರೆಗಳಿಂದಲೇ ಕಾರ್ಯಸಿದ್ಧಿಯಾಗಲಿದೆ. ಆರೋಗ್ಯದ ಕಡೆ ಗಮನ ಅಗತ್ಯವಿದೆ. ಸಾಂಸಾರಿಕವಾಗಿ ಕಲಹ, ಭಿನ್ನಾಭಿಪ್ರಾಯಗಳಿಗೆ ಬಲಿಯಾಗದಿರಿ. ಶುಭವಿದೆ.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.