ಈ ರಾಶಿಯವರಿಂದು ಯಾರೊಂದಿಗೂ ವ್ಯವಹರಿಸುವಾಗ ಹೆಚ್ಚಿನ ಎಚ್ಚರಿಕೆಯ ಅಗತ್ಯವಿರುತ್ತದೆ


Team Udayavani, Jun 8, 2021, 7:10 AM IST

ಈ ರಾಶಿಯವರಿಂದು ಯಾರೊಂದಿಗೂ ವ್ಯವಹರಿಸುವಾಗ ಹೆಚ್ಚಿನ ಎಚ್ಚರಿಕೆಯ ಅಗತ್ಯವಿರುತ್ತದೆ

08-06-2021

ಮೇಷ: ನಿಮ್ಮ ಆಪ್ತರು ಬೇಜವಾಬ್ದಾರಿಯಿಂದ ವರ್ತಿಸಬಹುದು. ಅವರ ಹೊಣೆಗೇಡಿತನವು ನಿಮ್ಮನ್ನು ಕಾರ್ಯರಂಗದಲ್ಲಿ ಕಷ್ಟಕ್ಕೆ ಸಿಲುಕಿಸದಂತೆ ಎಚ್ಚರ ವಹಿಸಿರಿ. ಅನಿರೀಕ್ಷಿತವಾಗಿ ದೂರ ಸಂಚಾರ ಕಂಡುಬಂದೀತು.

ವೃಷಭ: ಕೆಲವೊಮ್ಮೆ ಯಾವ ವಿಷಯದಲ್ಲೂ ಸಮಾಧಾನವು ಸಿಗದು. ಎಲ್ಲಾ ರೀತಿಯಿಂದಲೂ ಮನಸ್ಸಿಗೆ ನೆಮ್ಮದಿ ಇರದು. ಕೌಟುಂಬಿಕವಾಗಿ ಹಿತಶತ್ರುಗಳಿಂದ ಕಿರುಕುಳ ಕಂಡುಬಂದೀತು. ಸಾಧಾರಣ ಆರೋಗ್ಯವಿರುತ್ತದೆ.

ಮಿಥುನ: ಕಾರ್ಯ ಒತ್ತಡವು ಹೆಚ್ಚಾಗಿ ಅಸಹನೆಯು ಕಾಡಲಿದೆ. ಸದ್ಯದಲ್ಲೇ ಮಾನಸಿಕವಾಗಿ ಕಾಡುತ್ತಿದ್ದ ಸಮಸ್ಯೆಗಳು ಪರಿಹಾರವಾಗುತ್ತದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಸಹಕಾರ ಸಿಗದು. ಬೇಸರಗೊಳ್ಳದಿರುವುದೇ ಲೇಸು.

ಕರ್ಕ: ಯಾರೊಂದಿಗೂ ವ್ಯವಹರಿಸುವಾಗ ಹೆಚ್ಚಿನ ಎಚ್ಚರಿಕೆಯ ಅಗತ್ಯವಿರುತ್ತದೆ. ತಪ್ಪಿದಲ್ಲಿ ಪ್ರತಿಕೂಲ ಪರಿಣಾಮ ಉಂಟಾದೀತು. ಆರ್ಥಿಕವಾಗಿ ಏರುಪೇರು ಕಂಡು ಬಂದೀತು. ಅಚ್ಚುಕಟ್ಟಾಗಿ ಖರ್ಚನ್ನು ನಿಭಾಯಿಸಿದರೆ ಉತ್ತಮ.

ಸಿಂಹ: ಯಾರೊಡನೆ ಅತೀ ಸ್ನೇಹ, ಅತೀ ಸಲುಗೆ ಸಲ್ಲದು. ನಿಮ್ಮ ಆತಂರಿಕ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ಇತರರಿಗೆ ಆಡಿಕೊಳ್ಳಲು ಆಸ್ಪದ ನೀಡದಿರಿ. ಮನಸ್ಸಿಗೆ ನೆಮ್ಮದಿಯನ್ನು ಕಾಯ್ದುಕೊಳ್ಳಿರಿ.

ಕನ್ಯಾ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಉದಾಸೀನತೆ ಕಂಡುಬಂದು ಹಿಂಜರಿಕೆ ಆದೀತು. ಮಕ್ಕಳ ವಿಷಯದಲ್ಲಿ ಎಚ್ಚರಿಕೆ ಅಗತ್ಯವಿದೆ. ಪತ್ನಿಯೊಂದಿಗೆ ಉತ್ತಮ ರೀತಿಯಲ್ಲಿ ವ್ಯವಹರಿಸಿರಿ. ಸಾಂಸಾರಿಕವಾಗಿ ನೆಮ್ಮದಿ ಇದೆ.

ತುಲಾ: ನಿರಾಶಾ ಮನೋಭಾವವು ಕಾಡಲಿದೆ. ಆದರೂ ನಿಮ್ಮ ಅಭಿವೃದ್ಧಿಗೆ ಎಲ್ಲವೂ ಪೂರಕವಾಗಲಿದೆ. ಆಸಕ್ತಿದಾಯಕ ವ್ಯಕ್ತಿಗಳಿಂದ ಅನುಕೂಲಕರವಾದ ಕೆಲಸವಾಗಲಿದೆ. ಸಾಮಾಜಿಕ ಚಟುವಟಿಕೆಗಳಲ್ಲಿ ಉತ್ಸಾಹ ಕಂಡುಬಂದೀತು.

ವೃಶ್ಚಿಕ: ಯಾವ ಕೆಲಸವನ್ನು ಕೈಗೊಂಡು ಮಾಡ  ಬೇಕಾದರೆ ಯೋಜನೆಯನ್ನು ರೂಪಿಸಿಕೊಳ್ಳಿರಿ. ನಿಮ್ಮ ಮೇಲಿನ ಅಧಿಕಾರಿಗಳಿಂದ ಮೆಚ್ಚುಗೆ ಗಳಿಸುವಿರಿ. ಸಾಂಸಾರಿಕವಾಗಿ ನೆಮ್ಮದಿಯ ದಿನಗಳಿವು. ಮಕ್ಕಳಿಂದ ಸಂತಸವಿದೆ.

ಧನು: ನಿಮಗೆ ಮಹತ್ವದ ದಿನಗಳು ಇವು. ನಿಮಗೆ ಆತ್ಮೀಯ ಹಾಗೂ ಪ್ರೀತಿಪಾತ್ರರಾದ ಜನರೊಂದಿಗೆ ಸಮಯ ಕಳೆಯುವ ಅವಕಾಶ ಒದಗಿ ಬಂದೀತು. ವೃತ್ತಿರಂಗದಲ್ಲಿ ನಾನಾ ತರಹದ ಸಮಸ್ಯೆಗಳು ಇದ್ದಾವು.

ಮಕರ: ಎಂತಹ ಸಮಸ್ಯೆಗಳು ಬಂದರೂ ಅವನ್ನು ಸಹನೆಯಿಂದ ಎದುರಿಸುವಿರಿ. ಅದರಲ್ಲಿ ನಿಮಗೆ ಗೆಲುವು ಕಂಡುಬರಲಿದೆ. ಖಾಸಗಿ ಬದುಕಿನಲ್ಲಿ ಸಣ್ಣಪುಟ್ಟ ನಿರಾಸೆಗಳು ನಿಮ್ಮನ್ನು ಕಾಡಲಿದೆ. ಚಿಂತೆ ಬೇಡ.

ಕುಂಭ: ನಿಮ್ಮ ಜೀವನ ಶೈಲಿಯನ್ನು ಮನೆಯಲ್ಲಿ ಎಲ್ಲರೂ ಒಪ್ಪುವ ಹಾಗೆ ಬದಲಾಯಿಸಿಕೊಳ್ಳಿರಿ. ನಿವೇಶನ ಯಾ ಜಾಗ ಖರೀದಿಯ ಬಗ್ಗೆ ಮಾತುಕತೆಗಳು ನಡೆದೀತು. ಕೆಲಸ ಕಾರ್ಯಗಳು ನಿಧಾನಗತಿ ಕಂಡಾವು.

ಮೀನ: ಕೌಟುಂಬಿಕವಾಗಿ ನೀವು ನಂಬಿದವರೇ ನಿಮಗೆ ಕೈಕೊಟ್ಟಾರು. ಹಣಕಾಸಿನ ಸ್ಥಿತಿಯು ಸುಧಾರಿಸುತ್ತಾ ಹೋದರೂ ಖರ್ಚುವೆಚ್ಚವು ಅಷ್ಟೇ ಕಂಡುಬರಲಿದೆ. ಯಾರಿಗೂ ನಂಬಿ ಸಾಲ ಕೊಟ್ಟು ಕೈ ಸುಟ್ಟುಕೊಳ್ಳದಿರಿ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.