ನಿಮ್ಮ ಗ್ರಹಬಲ: ಈ ರಾಶಿಯವರಿಗಿಂದು ಬೇಡಿಕೆ ಈಡೇರಿಸುವ ತಾಕಲಾಟದಿಂದ ಕಿರಿಕಿರಿ ತಂದೀತು!


Team Udayavani, Jun 13, 2021, 7:12 AM IST

ನಿಮ್ಮ ಗ್ರಹಬಲ: ಈ ರಾಶಿಯವರಿಗಿಂದು ಬೇಡಿಕೆ ಈಡೇರಿಸುವ ತಾಕಲಾಟದಿಂದ ಕಿರಿಕಿರಿ ತಂದೀತು!

13-06-2021

ಮೇಷ: ಅವಿವಾಹಿತರಿಗೆ ಕಂಕಣಭಾಗ್ಯ ಒದಗಿ ಬರಲಿದೆ. ಸಹೋದ್ಯೋಗಿಗಳ ದುರ್ವ್ಯವಹಾರದಿಂದ  ಅಭಿವೃದ್ಧಿಗೆ ಮಾರಕವಾದೀತು. ಎಚ್ಚರಿಕೆ ಇರಲಿ. ಅವಿರತವಾದ ಸಂಚಾರ ದೇಹಾಯಾಸಕ್ಕೆ ಕಾರಣವಾಗಲಿದೆ.

ವೃಷಭ: ಆರ್ಥಿಕವಾಗಿ ನಿಮ್ಮ ಪರಿಸ್ಥಿತಿಯು ಸುಧಾರಿಸಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಹೆಚ್ಚಿನ ಲಾಭ ಗಳಿಸಲಾಗುವುದಿಲ್ಲ . ಹಿರಿಯರ ಮಾತಿಗೆ ಬೆಲೆ ಇರಲಿ. ತಾಳ್ಮೆ, ಎಚ್ಚರಿಕೆಯಿಂದ ಹೊಸ ಕಾರ್ಯದಲ್ಲಿ ಹೆಜ್ಜೆ ಇರಿಸುವುದು ಅಗತ್ಯವಿದೆ.

ಮಿಥುನ: ಸ್ವರ್ಣ, ಲೋಹ, ಗೃಹೋಪಕರಣಗಳ ವ್ಯವಹಾರದಲ್ಲಿ ಚೇತರಿಕೆ. ಹೊಸ ಯೋಜನೆಯ ಯೋಚನೆಯು ಕಾರ್ಯಗತವಾಗಲಿದೆ. ವಿವೇಚನೆಯಿಂದ ಕಾರ್ಯವೆಸಗಿರಿ. ಜಯ ನಿಮ್ಮ ಪಾಲಿಗಿದೆ.

ಕರ್ಕ: ನೂತನ ಧನದಾಯದ ಮೂಲಕ  ಭಾಗ್ಯಾಭಿವೃದ್ಧಿ ತಂದೀತು. ನೂತನ ವಸ್ತ್ರಾಭರಣ ಯಾ ನಿವೇಶನ ಖರೀದಿಯಿಂದ ಸಂತಸ ತಂದೀತು. ದುಂದುವೆಚ್ಚಕ್ಕೆ ಕಡಿವಾಣ ಹಾಕಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಸಿಂಹ: ಈ ವಾರ ಶುಭದಾಯಕ ಹಾಗೂ ಆಶಾದಾಯಕವಾದೀತು. ವೃತ್ತಿರಂಗದಲ್ಲಿ ತಾತ್ಕಾಲಿಕ ಸ್ಥಾನಮಾನ ದೊರೆತು ನೆಮ್ಮದಿ ಕಂಡೀತು. ಕ್ರೀಡಾರಂಗದಲ್ಲಿ ಕ್ರೀಡಾಗಾರರಿಗೆ ವಂಚನೆಯ ಆರೋಪ-ಪ್ರತ್ಯಾರೋಪಗಳು ತೋರಿ ಬಂದಾವು.

ಕನ್ಯಾ: ಕಳೆದುದ್ದನ್ನು ಗಳಿಸುವ ಪ್ರಯತ್ನ ಸಾಗಲಿ. ತೃಪ್ತಿ ಸಿಕ್ಕೀತು. ಮಾತೃಸೇವಾ, ಶೂಶ್ರಷೆಗಾಗಿ ಖರ್ಚು ತರಲಿದೆ. ಆರೋಗ್ಯಭಾಗ್ಯ ಸುಧಾರಿಸಿದರೂ ಉದಾಸೀನ ಮಾಡದಿರಿ. ಸಾಂಸಾರಿಕವಾಗಿ ಹುಸಿ ಅಪವಾದದ ಚಿಂತೆ ಕಾಡಲಿದೆ.

ತುಲಾ: ನೂತನ ವಸ್ತು ಖರೀದಿ ಧನ ಹಾನಿ ಕೊಟ್ಟೀತು. ಸಹೋದ್ಯೋಗಿಗಳು, ವ್ಯಾಪಾರಸ್ಥರು ಹೆಚ್ಚಿನ ಎಚ್ಚರಿಕೆಯಿಂದ ಇದ್ದಲ್ಲಿ ಮೂಲಧನ ಇಮ್ಮಡಿಯಾದೀತು. ಆಗಾಗ  ತೋರಿಬರುವ ಕಾರ್ಯಸಾಧನೆಯ ಅಡ್ಡಿಯನ್ನು ನಿವಾರಿಸಿಕೊಳ್ಳಿರಿ.

ವೃಶ್ಚಿಕ: ಬೇಡಿಕೆ ಈಡೇರಿಸುವ ತಾಕಲಾಟದಿಂದ ಕಿರಿಕಿರಿ ತಂದೀತು. ಕೌಟುಂಬಿಕವಾಗಿ ಆಕ್ಷೇಪ, ಭಿನ್ನಾಭಿಪ್ರಾಯದಿಂದ ಮನೋವ್ಯಾಕುಲ ಹೆಚ್ಚಾದೀತು. ಹಿರಿಯರ ಸಲಹೆಗೆ ಕಿವಿಕೊಡಿರಿ. ಸಮಾಧಾನ ಸಿಗಲಿದೆ.

ಧನು: ಉದ್ಯೋಗಿಗಳಿಗೆ ವಾರಾಂತ್ಯದಲ್ಲಿ ಸ್ಥಾನ ಬದಲಾವಣೆಯ ಸೂಚನೆ ತೋರಿಬಂದೀತು. ವಾರಾಂತ್ಯದಲ್ಲಿ ಶುಭವಾರ್ತೆ ಇರುತ್ತದೆ. ಸಾರ್ಥಕತೆಯಿಂದ ಶತ್ರು ಭಯ ನಿವಾರಣೆಯಾದರೂ ಹಿತಶತ್ರುಗಳ ಬಾಧೆ ಬಿಡದು.

ಮಕರ: ಆರ್ಥಿಕವಾಗಿ ಯಾರಿಗೂ ಸಾಲ ನೀಡದಿರಿ. ಆಗಾಗ ವ್ಯಯಾಧಿಕ್ಯವಾಗಿ ವ್ಯಾಪಾರ, ವ್ಯವಹಾರಗಳಲ್ಲಿ ಹೊಸ ಹೂಡಿಕೆಯಿಂದ ಅಲ್ಪಸ್ವಲ್ಪ ಆದಾಯವನ್ನು ತಂದುಕೊಟ್ಟೀತು. ಪತ್ನಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾದೀತು.

ಕುಂಭ: ಕಾರ್ಯಕ್ಷೇತ್ರದಲ್ಲಿ ಚೇತರಿಕೆಯ ವಾತಾವರಣ ಗೋಚರಕ್ಕೆ ಬರುತ್ತದೆ. ದೂರ ಸಂಚಾರದಲ್ಲಿ ಉತ್ತಮ ಫ‌ಲಗಳು ಅನುಭವಕ್ಕೆ ಬರುತ್ತದೆ. ಉದ್ಯೋಗ ರಂಗದಲ್ಲಿ ಭಿನ್ನಮತ ಕರಗಿ ಸೌಹಾರ್ದ ಮೂಡಿ ಬರುತ್ತದೆ.

ಮೀನ: ವಿದ್ಯಾರ್ಥಿಗಳು ಮುನ್ನಡೆಯನ್ನು ಸಾಧಿಸಲಿದ್ದಾರೆ. ಹಾಗೆದು ಉದಾಸೀನತೆ ಮಾಡದಿರಿ. ನಿಮ್ಮ ಸುತ್ತಮುತ್ತಲಿನ ವಾತಾವರಣ ಉದ್ವಿಗ್ನತೆಯಿಂದ ಕೂಡಿರುತ್ತದೆ. ಸಾಮಾಜಿಕವಾಗಿ ಎಲ್ಲರೊಂದಿಗೆ ಬೆರೆಯುವುದೇ ಉತ್ತಮ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

1-24-monday

Daily Horoscope: ಶುಭ ಕಾರ್ಯ ನಡೆಸುವ ಬಗ್ಗೆ ಚಿಂತನೆ, ಆರೋಗ್ಯದತ್ತ ಗಮನವಿರಲಿ

1-24-sunday

Daily Horoscope: ಕುಟುಂಬದಲ್ಲಿ ವಿವಾಹ ಮಾತುಕತೆ, ಬಂಧು ಮಿತ್ರರಿಂದ ಶುಭ ಸಮಾಚಾರ

1-24-saturday

Daily Horoscope: ಕಾಲೆಳೆಯುವ ಪ್ರಯತ್ನಗಳನ್ನು ಕೊಡವಿ ಮುಂದಡಿಯಿಡುವುದರಿಂದ ವಿಜಯ

1-24-friday

Daily Horoscope: ತರಾತುರಿಯಲ್ಲಿ ಕಾರ್ಯ ಮುಗಿಸುವ ಪ್ರಯತ್ನ ಬೇಡ, ವ್ಯವಹಾರದಲ್ಲಿ ಲಾಭ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.