ಗುರುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Oct 21, 2021, 7:52 AM IST
ಮೇಷ: ಘರ್ಷಣೆಗೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ ಕಾರ್ಯ ನಿರ್ವಹಿಸುವುದರಿಂದ ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಲಭ್ಯ. ಧನಾಗಮನ ಅತ್ಯುತ್ತಮ. ಭೂಮ್ಯಾದಿ ವ್ಯವಹಾರಗಳಲ್ಲಿ ಅನುಕೂಲಕರ ಪರಿಸ್ಥಿತಿ.
ವೃಷಭ: ಧಾರ್ಮಿಕ ಕ್ಷೇತ್ರ ಸಂದರ್ಶನ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಸಾಂಸಾರಿಕ ಸುಖ ಮಧ್ಯಮ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.
ಮಿಥುನ: ನಿರೀಕ್ಷೆಯಂತೆ ಉತ್ತಮ ವಾಕ್ಚತುರತೆ ಯಿಂದ ಹೆಚ್ಚಿದ ಧನಲಾಭ. ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಸಹೋದರ ಸಮಾನರಿಂದ ಪ್ರೋತ್ಸಾಹ ಸಹಕಾರ. ವಿದ್ಯಾರ್ಜನೆಯಲ್ಲಿ ತಲ್ಲೀನತೆ.
ಕರ್ಕ: ಉದ್ಯೋಗ ವ್ಯವಹಾರಗಳಲ್ಲಿ ಸಫಲತೆ ಗಳಿಸಲು ಹೆಚ್ಚು ತಾಳ್ಮೆ ಪರಿಶ್ರಮ ಅಗತ್ಯ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ನೆಮ್ಮದಿ ಲಭಿಸೀತು. ಗುರು ಹಿರಿಯರಲ್ಲಿ ಚರ್ಚೆಗೆ ಆಸ್ಪದ ನೀಡದಿರಿ.
ಸಿಂಹ: ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣದಲ್ಲಿ ಸರಿಯಾದ ನಿಯಮ ಪಾಲಿಸಿ. ಉದ್ಯೋಗ ವ್ಯವಹಾರ ದಲ್ಲಿ ಅತೀ ಉದಾರತೆಯಿಂದ ತೊಂದರೆ ಸಂಭವ. ಹಣಕಾಸಿನ ಬಗ್ಗೆ ಪಾರದರ್ಶಕತೆ ಇರಲಿ. ವಿಶ್ರಾಂತಿಗೆ ಗಮನಹರಿಸಿ.
ಕನ್ಯಾ: ಸಜ್ಜನರಲ್ಲಿ ವಿಶ್ವಾಸ ಪ್ರೀತಿ ಆತ್ಮೀಯತೆ ತೋರುವುದರಿಂದ ಗೌರವಾದಿ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಹೆಚ್ಚಿದ ವರಮಾನ. ಉತ್ತಮ ವಾಕ್ಚತುರತೆಯಿಂದ ಜನರಂಜನೆ. ಸಾಂಸಾರಿಕ ಸುಖ ವೃದ್ಧಿ.
ತುಲಾ : ಉತ್ತಮ ಆರೋಗ್ಯ. ಸ್ಥಿತಿಗತಿಗಳ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೀರ್ಘ ಪ್ರಯಾಣ ಸಂಭವ. ಮಕ್ಕಳಿಂದ ವಿದ್ಯಾರ್ಥಿಗಳಿಂದ ಸಂತೋಷ. ಹಣಕಾಸಿನ ವಿಚಾರದಲ್ಲಿ ಪ್ರಗತಿ.
ವೃಶ್ಚಿಕ: ದೀರ್ಘ ಪ್ರಯಾಣದಲ್ಲಿ ವಿಳಂಬ ತೋರೀತು. ಉದ್ಯೋಗ ವ್ಯವಹಾರಗಳಲ್ಲಿ ಪರರಿಗೆ ಉಪಕಾರ ಮಾಡುವಾಗ ತಿಳಿದು ನಿರ್ಣಯಿಸಿ. ಗೃಹ, ವಾಹನ, ಆಸ್ತಿ ಸಂಬಂಧ ಖರ್ಚು ತೋರೀತು. ಬಂಧುಮಿತ್ರರಿಂದ ಮಧ್ಯಮ ಸುಖ.
ಧನು: ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಸುಮ್ಮನೆ ಬೇರೆಯವರ ವಿಚಾರದಲ್ಲಿ ಭಾಗವಹಿಸದಿರಿ. ಹಣಕಾಸಿನ ವಿಚಾರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕಿದ ತೃಪ್ತಿ.
ಮಕರ: ಅತಿಯಾದ ನಿಷ್ಠೆ ಶ್ರಮ ವಹಿಸಿದರೂ ದೇಹಾರೋಗ್ಯ ಗಮನಿಸಿ. ಒಳ್ಳೆ ಹೆಸರು ಸಂಪಾದಿಸುವ ಸಮಯ. ಮಕ್ಕಳಿಂದ ಸಂತೋಷ ವೃದ್ಧಿ. ಗೃಹ, ವಾಹನ, ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ ಸಂಭವ.
ಕುಂಭ: ಅಧ್ಯಯನದಲ್ಲಿ ತಲ್ಲೀನತೆ. ಸಂದಭೋìಚಿತ ಉಪಾಯ, ಪ್ರತಿಭೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಧನಾಗಮ ಉತ್ತಮ. ಬಂಧುಮಿತ್ರರ ಸಹಕಾರ. ಗುರುಹಿರಿಯ ರಿಂದ ಪ್ರೋತ್ಸಾಹ ಹಾಗೂ ಉತ್ತಮ ಮಾರ್ಗದರ್ಶನ.
ಮೀನ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಪೈಪೋಟಿ ತೋರೀತು. ಧೈರ್ಯ ಶೌರ್ಯ ದಿಂದ ಪ್ರಗತಿ. ಆರ್ಥಿಕ ವಿಚಾರದಲ್ಲಿ ಗಣನೀಯ ಪ್ರಗತಿ. ಗೃಹದಲ್ಲಿ ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ
Daily Horoscope: ಶುಭ ಕಾರ್ಯ ನಡೆಸುವ ಬಗ್ಗೆ ಚಿಂತನೆ, ಆರೋಗ್ಯದತ್ತ ಗಮನವಿರಲಿ
Daily Horoscope: ಕುಟುಂಬದಲ್ಲಿ ವಿವಾಹ ಮಾತುಕತೆ, ಬಂಧು ಮಿತ್ರರಿಂದ ಶುಭ ಸಮಾಚಾರ
Daily Horoscope: ಕಾಲೆಳೆಯುವ ಪ್ರಯತ್ನಗಳನ್ನು ಕೊಡವಿ ಮುಂದಡಿಯಿಡುವುದರಿಂದ ವಿಜಯ
Daily Horoscope: ತರಾತುರಿಯಲ್ಲಿ ಕಾರ್ಯ ಮುಗಿಸುವ ಪ್ರಯತ್ನ ಬೇಡ, ವ್ಯವಹಾರದಲ್ಲಿ ಲಾಭ
MUST WATCH
ಹೊಸ ಸೇರ್ಪಡೆ
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!