ಮದ್ಯಮುಕ್ತ, ಆಮಿಷಮುಕ್ತ ಚುನಾವಣೆ: ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಆಗ್ರಹ
Team Udayavani, Apr 20, 2023, 6:05 AM IST
ಬೆಳ್ತಂಗಡಿ: ಮದ್ಯಮುಕ್ತ, ಆಮಿಷಮುಕ್ತ ಚುನಾವಣೆ ಮತ್ತು ಮದ್ಯಮುಕ್ತ ಕರ್ನಾಟಕ ನಿರ್ಮಿಸುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಆಗ್ರಹಿಸುತ್ತಿದೆ ಎಂದು ಜನ ಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿ. ಪಾಯ್ಸ್ ತಿಳಿಸಿದ್ದಾರೆ.
ಭಾರತೀಯ ರಾಜಕೀಯ ವ್ಯವಸ್ಥೆಯ ನೈತಿಕ ಅಧಃಪತನವು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮದ್ಯಪಾನಾದಿ ದುಶ್ಚಟಗಳ ವ್ಯಾಪಕತೆಗೆ ಕಾರಣವಾಗಿದೆ. ಹೆಂಡ ಹಂಚದೆ, ಆಮಿಷಗಳಿಲ್ಲದೆ ಚುನಾವಣೆಯೇ ಇಲ್ಲ ಎಂಬಂತಹ ದುಸ್ಥಿತಿ ಉಂಟಾಗಿದೆ. ಚುನಾವಣೆಗಳಲ್ಲಿ ಎಲ್ಲ ರಾಜಕೀಯ ಪಕ್ಷಗಳು ಮದ್ಯ ಹಂಚುವುದಿಲ್ಲ, ಆಮಿಷ ಒಡ್ಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಬರಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಜ್ಞಾವಂತ ನಾಗರಿಕರು ಮದ್ಯ ಮತ್ತು ಇತರ ಯಾವುದೇ ಆಮಿಷಕ್ಕೆ ಬಲಿಯಾಗಬಾರದೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ರಾಜಣ್ಣ ಮೂ. ಕೊರವಿ ಮನವಿ ಮಾಡಿದ್ದಾರೆ. ಹೆಂಡದ ಆಮಿಷವೊಡ್ಡಿ ಮತ ಪಡೆಯುವ ಪ್ರಯತ್ನ ನಡೆಯುತ್ತಿರುವುದು ತಮ್ಮ ಗಮನಕ್ಕೆ ಬಂದಲ್ಲಿ ತತ್ಕ್ಷಣ ಚುನಾವಣ ಅಧಿಕಾರಿಗಳಿಗೆ, ತಹಶೀಲ್ದಾರರಿಗೆ, ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆಯೂ ತಿಳಿಸಿದ್ದಾರೆ.
ಪಾನಮುಕ್ತರ ನವಜೀವನ ಸಮಿತಿಗಳನ್ನು ಕಾವಲು ಸಮಿತಿಯಂತೆ ಕೆಲಸ ನಿರ್ವಹಿಸಲು ತರಬೇತಿ ನೀಡಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರು ನಗರಗಳಲ್ಲಿ ಮದ್ಯಮುಕ್ತ ಮತದಾನ ಎಂಬ ಶೀರ್ಷಿಕೆಯಲ್ಲಿ ಬ್ಯಾನರ್ ಅಳವಡಿಸಿ ಜಾಗೃತಿ ಮೂಡಿಸುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?