Belagavi ಮತ್ತೊಬ್ಬ ಮಾಜಿ ಸಚಿವ ಬಿಜೆಪಿಗೆ ಗುಡ್ ಬೈ
ಟಿಕೆಟ್ ಸಿಗದಿದ್ದಕ್ಕೆ ರಾಜೀನಾಮೆಗೆ ನಿರ್ಧಾರ
Team Udayavani, Apr 13, 2023, 9:51 PM IST
ಬೆಳಗಾವಿ: ಬಿಜೆಪಿ ಟಿಕೆಟ್ ಕೈ ತಪ್ಪಿರುವ ಆಕಾಂಕ್ಷಿಗಳು ಬಂಡಾಯದ ಬಾವುಟ ಹಾರಿಸುತ್ತಿದ್ದು, ಮಾನಿ ಸಚಿವ ಶಶಿಕಾಂತ ನಾಯಕ ಹುಕ್ಕೇರಿಯಲ್ಲಿ ಟಿಕೆಟ್ ಸಿಗದಿದ್ದಕ್ಕೆ ಬಿಜೆಪಿ ಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಶಿಕಾಂತ ನಾಯಕ, ಹುಕ್ಕೇರಿ ಮತಕ್ಷೇತ್ರದಿಂದ ಟಿಕೆಟ್ ನೀಡದಿರುವುದು ಹಾಗೂ ಕತ್ತಿ ಕುಟುಂಬದ ಕಿರುಕುಳದಿಂದ ಬೇಸತ್ತು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಯಮಕನಮರಡಿ ಉಸ್ತುವಾರಿ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಬೆಂಗಳೂರಿಗೆ ತೆರಳಿ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಉಮೇಶ ಕತ್ತಿ ನಿಧನ ಬಳಿಕ ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಬಳಿಯೂ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೆ. ಆದರೆ ನನಗೆ ಅನ್ಯಾಯ ಮಾಡಿದ್ದಾರೆ. ಅಲ್ಲದೇ ರಮೇಶ ಕತ್ತಿ ಮತ್ತು ಅವರ ಕುಟುಂಬಸ್ಥರು ನನಗೆ ಸಾಕಷ್ಟು ಕಿರುಕುಳ ಕೊಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ರಾಜೀನಾಮೆಗೂ ನನಗೂ ಸಂಬಂಧವಿಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರ ಎಂದರು.
ಬೆಳಗಾವಿ ನಗರಕ್ಕೆ ಸೀಮಿತವಾಗಿದ್ದ ಬಿಜೆಪಿಯನ್ನು ಹಳ್ಳಿ ಹಳ್ಳಿಯಲ್ಲಿ ನಾನು ಮತ್ತು ಬಾಬಾಗೌಡ ಪಾಟೀಲರು ಬೆಳೆಸಿದ್ದೇವೆ. ಆದರೆ ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಟಿಕೆಟ್ ನೀಡಿದ್ದಾರೆ. 20 ವರ್ಷದಿಂದ ಬಿಜೆಪಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಐದಾರು ವರ್ಷ ಪಕ್ಷಕ್ಕಾಗಿ ದುಡಿದಿದ್ದನ್ನು ಗಮನಿಸಿ ಪಕ್ಷ ನನಗೆ ಟಿಕೆಟ್ ನೀಡಿತ್ತು. ಆಗ ಉಮೇಶ ಕತ್ತಿಯವರ ವಿರುದ್ಧ ಗೆಲುವು ಸಾಧಿಸಿದ್ದೆ. ಅಲ್ಲದೆ ಸಚಿವನಾಗಿಯೂ ಕೆಲಸ ಮಾಡಿದ್ದೆ ಎಂದರು.
ಉತ್ತರ ಕರ್ನಾಟಕ ಅಭಿವೃದ್ಧಿಯಾಗಬೇಕೆಂದು ಮೊದಲ ಬಾರಿಗೆ ಅಧಿವೇಶ ನಡೆಸಿ ಇಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣ ಮಾಡಿದ್ದರಿಂದ ನಿರಂತರ ಕಾರ್ಯ ಚಟುವಟಿಕೆ ಮಾಡಲು ಸಾಧ್ಯವಾಯಿತು. ಉಮೇಶ ಕತ್ತಿ ಬಿಜೆಪಿಗೆ ಬಂದ ಬಳಿಕ ಕೇವಲ 11 ತಿಂಗಳು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದ್ದರು. ನನ್ನ ಅವಧಿಯಲ್ಲಿ ಪಂಚಾಯತ್ ಕೆಲಸ ಉತ್ತಮ ಆಗಿದ್ದಕ್ಕೆ ಚಿನ್ನದ ಪದಕ ಬಂದಿತ್ತು. ಪಕ್ಷ ನೀಡಿದ ಕೆಲಸವನ್ನು ನಾನು ಸರಿಯಾಗಿ ಮಾಡಿದ್ದೇನೆ. ಆದರೆ ಟಿಕೆಟ್ ನೀಡದೇ ಅನ್ಯಾಯ ಮಾಡಲಾಗಿದೆಎಂದು ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಮುಖಂಡರಾದ ಆರ್.ಕೆ. ಪಾಟೀಲ, ಶಿವಕುಮಾರ ನಾಯಿಕ, ಗುಂಡು ಪಾಟೀಲ, ಗುರುಸಿದ್ಧ ಮೂಡಲಗಿ, ರಾಮನಗೌಡ ಪಾಟೀಲ, ಷಣ್ಮುಖ ಕೆ.ಎಸ್. ಸುದ್ದಿಗೋಷ್ಠಿಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ