ಅಭಿಪ್ರಾಯ ಸಂಗ್ರಹ ಮಧ್ಯೆಯೇ ಬಿ ಪ್ಲ್ರಾನ್‌?

ಅಭ್ಯರ್ಥಿಗಳ ಆಯ್ಕೆಯ ಹಿನ್ನೆಲೆಯಲ್ಲಿ ಹಲವು ಲೆಕ್ಕಾಚಾರಕ್ಕೆ ಮೊರೆ ಹೋದ ಬಿಜೆಪಿ ವರಿಷ್ಠರು

Team Udayavani, Apr 2, 2023, 7:42 AM IST

ಅಭಿಪ್ರಾಯ ಸಂಗ್ರಹ ಮಧ್ಯೆಯೇ ಬಿ ಪ್ಲ್ರಾನ್‌?

ಮಂಗಳೂರು: ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿಯು ಜಿಲ್ಲಾ ಶಕ್ತಿಕೇಂದ್ರಗಳ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿರುವ ಬೆನ್ನಲ್ಲೇ, ಚುನಾವಣೆ ಹತ್ತಿರವಾಗಿರುವ ಹಿನ್ನೆಲೆಯಲ್ಲಿ ಹಾಲಿ ಶಾಸಕರಿಗೇ ಮತ್ತೂಮ್ಮೆ ಅವಕಾಶ ನೀಡುವ ಬಿ ಪ್ಲ್ರಾನ್‌ ಗೆ ವರಿಷ್ಠರು ಮೊರೆ ಹೋಗುತ್ತಾರೆಯೇ ಎಂಬ ಪ್ರಶ್ನೆ ಪಕ್ಷದ ವಲಯದಲ್ಲಿ ಮೂಡಿದೆ.

ಈಗಾಗಲೇ ಎಲ್ಲ 224 ಕ್ಷೇತ್ರಗಳಲ್ಲಿ ಏಕಕಾಲದಲ್ಲಿ ಮಾ. 31ರಂದು ಬಿಜೆಪಿ ಶಕ್ತಿಕೇಂದ್ರ, ಮಹಾಶಕ್ತಿ ಕೇಂದ್ರ, ಮೋರ್ಚಾದವರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಸಂದರ್ಭದಲ್ಲಿ ಕೆಲವೆಡೆ ಅಭಿ ಪ್ರಾಯ ಸಂಗ್ರಹ ತಡವಾಯಿತು. ಇವೆಲ್ಲವೂ ಒಂದು ತಿಂಗಳ ಹಿಂದೆಯೇ ನಡೆಯಬೇಕಾಗಿತ್ತು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಹಾಲಿ ಶಾಸಕರನ್ನು ಬದಲಾಯಿಸುವ ಸಾಧ್ಯತೆ ಕಡಿಮೆ ಎನ್ನುತ್ತದೆ ಪಕ್ಷದ ಆಂತರಿಕ ವಲಯದ ಮೂಲಗಳು.
ಬಿಜೆಪಿ ಆಂತರಿಕ ಸಮೀಕ್ಷೆ ಪ್ರಕಾರ 90ರಿಂದ 105 ಸೀಟು ಗೆಲ್ಲಬಹುದು ಎಂದಿದೆ. ಜತೆಗೆ ಕರಾವಳಿಯಲ್ಲಿ ಉತ್ತಮ ಪ್ರದರ್ಶನದ ವಿಶ್ವಾಸವಿದೆ.

ಹೀಗಿರುವಾಗ ಅಭ್ಯರ್ಥಿಗಳ ಬದಲಾವಣೆ ಅಗತ್ಯವಿದೆಯೆ? ಒಂದು ವೇಳೆ ಬದಲಾಯಿಸಿದರೆ ಗೊಂದಲ ಸೃಷ್ಟಿಯಾಗುವುದೇ? ಅದನ್ನು ಸೀಮಿತ ದಿನಗಳಲ್ಲಿ ಸರಿಪಡಿಸಲು ಸಾಧ್ಯವೇ? ಇತ್ಯಾದಿ ಅಂಶಗಳನ್ನು ಇಟ್ಟುಕೊಂಡು ಹಿರಿಯ ನಾಯಕರು ಲೆಕ್ಕ ಹಾಕುತ್ತಿದ್ದಾರೆ ಎನ್ನಲಾಗಿದೆ.

ಆಂತರಿಕ ಸಮೀಕ್ಷೆಯ ಪ್ರಕಾರ ಪುತ್ತೂರಿನಲ್ಲಿ ಸ್ವಲ್ಪ ತ್ರಾಸದಾಯಕವಾದುದು ಎಂಬ ಅಭಿಪ್ರಾಯವಿದೆ. ಸುಳ್ಯ ಕ್ಷೇತ್ರದಲ್ಲೂ ಹಾಲಿ ಶಾಸಕರ ವಿರುದ್ಧವೂ ಕೆಲವು ಕಾರ್ಯಕರ್ತರ ಆಕ್ರೋಶ ವ್ಯಕ್ತವಾಗಿದೆ. ಆದರೆ ಹಿರಿಯ ನಾಯಕರ ಪ್ರಕಾರ ಇಲ್ಲಿ ಕಾರ್ಯಕರ್ತರಿಗೆ ಸಿಟ್ಟು ಬಿಟ್ಟರೆ ಮತದಾರರಿಗೆ ಇಲ್ಲ. ಇವೆರಡನ್ನು ಹೊರತುಪಡಿಸಿದರೆ ಉಳಿದೆಡೆ ವಿರೋಧ ಕಡಿಮೆ ಎಂಬ ಅಭಿಪ್ರಾಯವಿದೆ.

ಪರೋಕ್ಷ ಸೂಚನೆ?
ವರಿಷ್ಠರು ಇನ್ನೂ ಯಾರ ಹೆಸರನ್ನೂ ಪ್ರಕಟಿಸಿಲ್ಲ. ಹಾಗೆಂದು ಕ್ಷೇತ್ರಗಳಲ್ಲಿ ಪಕ್ಷದ ಪ್ರಚಾರ ನಿಂತಿಲ್ಲ. ಬಹುತೇಕ ಟಿಕೆಟ್‌ ಖಚಿತ ಎಂದೆನಿಸಿರುವ ಅಭ್ಯರ್ಥಿಗಳ ಪರ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದು, ಶಾಸಕರು ಗಣ್ಯರು, ಹಿರಿಯರನ್ನು ಭೇಟಿ ಮಾಡುತ್ತಿದ್ದಾರೆ. ಇದು ಚುನಾವಣೆಗೆ ತಯಾರಾಗಿ ಎಂಬ ವರಿಷ್ಠರ ಪರೋಕ್ಷ ಸೂಚನೆಯ ಪರಿಣಾಮ ಎನ್ನಲಾಗುತ್ತಿದೆ. ಹೆಸರು ಪ್ರಕಟವಾದ ಮೇಲೆ ಅಭ್ಯರ್ಥಿಗಳ ಮನೆ ಮನೆ ಭೇಟಿ ಅಧಿಕೃತವಾಗಿ ಪ್ರಾರಂಭವಾಗಲಿದೆ.

ದುಬಾರಿ ಆದೀತೆ?
ಸುಳ್ಯ, ಪುತ್ತೂರು ಕ್ಷೇತ್ರಗಳಲ್ಲಿ ಕಾಣಿಸಿದ ಬಿಕ್ಕ ಟ್ಟನ್ನು ಮುಂಚಿತವಾಗಿಯೇ ಹಿರಿಯ ನಾಯ ಕರು ಬಗೆಹರಿಸದಿರುವುದು ದುಬಾರಿಯಾಗಿ ಪರಿಣ ಮಿಸಬಹುದೇ ಎನ್ನುವ ಆತಂಕವೂ ಪಕ್ಷದ ಕಾರ್ಯಕರ್ತರಲ್ಲಿದೆ. ಮಂಗಳೂರು ಕ್ಷೇತ್ರ ದಲ್ಲೂ ಗುಂಪುಗಾರಿಕೆ ಇದ್ದು, ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದೂ ಕಾರಣ. ಒಗ್ಗಟ್ಟಾಗಿ ಚುನಾ ವಣೆಗೆ ಹೋಗುವುದು ಬಿಟ್ಟು ಇಂಥ ಗುಂಪುಗಾರಿಕೆ ಸರಿಯಲ್ಲ ಎಂಬ ಅಭಿಪ್ರಾ ಯವೂ ಕಾರ್ಯಕರ್ತರಿಂದ ಕೇಳಿಬರುತ್ತಿದೆ.

 

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.