Election: ಶಿಕಾರಿಪುರ ಜನ ನನಗೂ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸ ಇದೆ; ವೈ. ವಿಜಯೇಂದ್ರ
ಅಂಬಾಸಿಡರ್ ಕಾರಿನಲ್ಲಿ ಪ್ರಯಾಣಿಸಿದ ಬಿಎಸ್ ವೈ
Team Udayavani, Apr 19, 2023, 12:16 PM IST
ಶಿವಮೊಗ್ಗ: ಹುಚ್ಚುರಾಯಸ್ವಾಮಿಗೆ ಪೂಜೆ ಸಲ್ಲಿಸಿ, ರಾಯರ ಮಠದಲ್ಲಿ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಿದ್ದೇನೆ. ಮೆರವಣಿಗೆ ಬಳಿಕ ಬೃಹತ್ ಬಹಿರಂಗ ಸಮಾವೇಶ ನಡೆಯಲಿದೆ. ಬಹಿರಂಗ ಸಮಾವೇಶದಲ್ಲಿ ಕೇಂದ್ರ ಸಚಿವ ನಾರಾಯಣಸ್ವಾಮಿ, ಕುಡಚಿ ಶಾಸಕ ರಾಜೀವ್ ಸೇರಿದಂತೆ ಹಲವರು ಭಾಗವಹಿಸುತ್ತಿದ್ದಾರೆ ಎಂದು ಶಿಕಾರಿಪುರ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಹೇಳಿದರು.
ನಾಮಪತ್ರ ಸಲ್ಲಿಕೆ ಬಳಿಕ ಶಿಕಾರಿಪುರದಲ್ಲಿ ಮಾತನಾಡಿದ ಅವರು, ನಮ್ಮ ಶಕ್ತಿ ಕಾರ್ಯಕರ್ತರ ಪಡೆ. ಕಾರ್ಯಕರ್ತರು ಶಕ್ತಿಯನ್ನು ತುಂಬುವ ಕೆಲಸ ಮಾಡಿದರು. ಕಾರ್ಯಕರ್ತರ ಪಡೆ ದೊಡ್ಡ ಶಕ್ತಿ ತಂದುಕೊಟ್ಟಿದೆ. ಯುವಕರ ಹೊಸ ಪಡೆ ಮೋದಿ ಅಭಿವೃದ್ಧಿ ಮೆಚ್ಚಿ ನಮ್ಮ ಜೊತೆ ಸೇರಿದ್ದಾರೆ. ಕ್ಷೇತ್ರದಲ್ಲಿ ಮತದಾರರು ಯಡಿಯೂರಪ್ಪ ಅವರಿಗೆ, ಸಂಸದ ರಾಘವೇಂದ್ರ ಅವರಿಗೆ ಆಶೀರ್ವಾದ ಮಾಡಿದ್ದಾರೆ. ನನಗೂ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು.
ಇದನ್ನೂ ಓದಿ: karnataka polls 2023; ನಾಮಪತ್ರ ಸಲ್ಲಿಸಿದ ಕೊಪ್ಪಳ ಬಿಜೆಪಿ ಅಭ್ಯರ್ಥಿ ಮಂಜುಳಾ ಕರಡಿ
ಶಿಕಾರಿಪುರದಲ್ಲಿ ಪ್ರಚಾರ ಮಾಡುವ ಜೊತೆಗೆ ರಾಜ್ಯದಲ್ಲಿ ಬೇರೆ ಬೇರೆ ಕಡೆ ಒಂದು ವಾರ ಪ್ರಚಾರ ಮಾಡುತ್ತೇನೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದರು.
ಯಡಿಯೂರಪ್ಪ ಅಂಬಾಸಿಡರ್ ಕಾರಿನಲ್ಲಿ ಪ್ರಯಾಣಿಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪ ಅವರಿಗೆ ಅಂಬಾಸಿಡರ್ ಕಾರು ಮೇಲೆ ಬಹಳ ಪ್ರೀತಿ. ಈ ಹಿಂದೆ ಈ ಕಾರನ್ನು ಅವರು ಬಳಸುತ್ತಿದ್ದರು. ಅಂಬಾಸಿಡರ್ ಕಾರು ನಂಬರ್ ಸಿಕೆಆರ್ 454 ಆ ಕಾರಿನ ನಂಬರ್ ಮೇಲೆ ಅವರಿಗೆ ಪ್ರೀತಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!