ಬೆಳಗಾವಿ ಉತ್ತರ-ದಕ್ಷಿಣದಲ್ಲಿ ಅದಲು-ಬದಲು ರಾಜಕೀಯ
Team Udayavani, Feb 21, 2023, 5:54 AM IST
ಗಡಿ ಜಿಲ್ಲೆ ಬೆಳಗಾವಿಯಲ್ಲಿ ವಿಧಾನಸಭೆ ಚುನಾವಣೆಯ ಜ್ವರ ನಿಧಾನವಾಗಿ ಆರಂಭವಾಗಿದೆ. ಜತೆಗೆ ಗಾಳಿ ಸುದ್ದಿಗಳು ಸಹ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿವೆ.
ಕಾಂಗ್ರೆಸ್ಗಿಂತ ಬಿಜೆಪಿ ವಲಯದಲ್ಲಿ ಈ ರೀತಿಯ ಗಾಸಿಪ್ ಸುದ್ದಿಗಳು ಹೆಚ್ಚು ಕಾಣುತ್ತಿರುವುದು ವಿಶೇಷ. ಇದಕ್ಕೆ ಅನುಗುಣವಾಗಿ ಈಗ ಬೆಳಗಾವಿ ಉತ್ತರ, ದಕ್ಷಿಣ ಮತ್ತು ಗ್ರಾಮೀಣ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಅದಲು ಬದಲು ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಬಹು ಚರ್ಚೆಗೆ ಕಾರಣವಾಗಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಮರಾಠಿ ಭಾಷಿಕ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಜೈನ ಸಮುದಾಯದ ಹಾಲಿ ಶಾಸಕ ಅಭಯ ಪಾಟೀಲ ಅವರನ್ನು ಅಲ್ಲಿಂದ ಬದಲಾಯಿಸಿ ಅವರಿಗೆ ಬೆಳಗಾವಿ ಗ್ರಾಮೀಣ ಟಿಕೆಟ್ ಕೊಡಬೇಕು.
ಮರಾಠಾ ಸಮುದಾಯದ ಹಾಲಿ ಶಾಸಕ ಅನಿಲ ಬೆನಕೆ ಅವರನ್ನು ಬೆಳಗಾವಿ ಉತ್ತರದ ಬದಲಾಗಿ ದಕ್ಷಿಣದಿಂದ ಕಣಕ್ಕಿಳಿಸಬೇಕು. ಬೆಳಗಾವಿ ಉತ್ತರಕ್ಕೆ ಲಿಂಗಾಯತ ಸಮುದಾಯದವರಿಗೆ ಟಿಕೆಟ್ ಕೊಡಬೇಕು ಎಂಬ ಮಾತುಗಳು ಕೇಳಿಬರುತ್ತಿವೆ. ಬೆಳಗಾವಿ ಉತ್ತರ ಮತ್ತು ದಕ್ಷಿಣ ಈಗ ಬಿಜೆಪಿಯ ಭದ್ರಕೋಟೆ. ಈ ಎರಡೂ ಕೋಟೆಗಳಲ್ಲಿ ಮರಾಠಿ ಭಾಷಿಕ ಮತದಾರರು ಅಭ್ಯರ್ಥಿಗಳ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಇದೇ ಕಾರಣದಿಂದ ಬಿಜೆಪಿ ಮಹಾನಗರ ಪಾಲಿಕೆಯಲ್ಲಿ ಮಹಾಪೌರ ಮತ್ತು ಉಪ ಮಹಾಪೌರ ಸ್ಥಾನಗಳೆರಡನ್ನೂ ಮರಾಠಿ ಭಾಷಿಕರಿಗೆ ನೀಡಿದೆ. ಈಗ ಇದನ್ನೇ ಮುಂದೆ ಮಾಡಿಕೊಂಡು ಕೆಲವು ಮರಾಠಿ ಭಾಷಿಕರು ಬೆಳಗಾವಿ ದಕ್ಷಿಣದಲ್ಲಿ ಮರಾಠಿ ಭಾಷಿಕರಿಗೆ ಟಿಕೆಟ್ ನೀಡಬೇಕು. ಈ ಹಿಂದೆ ಬಾಗೇವಾಡಿ (ಈಗ ಬೆಳಗಾವಿ ಗ್ರಾಮೀಣವಾಗಿ ಬದಲಾಗಿದೆ) ಕ್ಷೇತ್ರದಿಂದ ಗೆದ್ದು ಬಂದಿದ್ದ ಅಭಯ ಪಾಟೀಲರಿಗೆ ಮತ್ತೆ ಅಲ್ಲಿಯೇ ಟಿಕೆಟ್ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ