ರೆಡ್ಡಿಗೆ ಅಡ್ಡಿಯಾಗ್ತಾರಾ ಕೆಆರ್‌ಪಿ ಅರುಣಾ ಲಕ್ಷ್ಮಿ?


Team Udayavani, May 8, 2023, 4:21 PM IST

ರೆಡ್ಡಿಗೆ ಅಡ್ಡಿಯಾಗ್ತಾರಾ ಕೆಆರ್‌ಪಿ ಅರುಣಾ ಲಕ್ಷ್ಮಿ?

ಬಳ್ಳಾರಿ: ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ಈ ಬಾರಿಯೂ ಜಿದ್ದಾಜಿದ್ದಿನಿಂದ ಕೂಡಿದ್ದು, ಮೇಲ್ನೋಟಕ್ಕೆ ಕಾಂಗ್ರೆಸ್‌-ಬಿಜೆಪಿ-ಕೆಆರ್‌ಪಿ ನಡುವೆ ತ್ರಿಕೋನ ಸ್ಪರ್ಧೆ ಎನಿಸಿದರೂ, ಆಂತರಿಕವಾಗಿ ಕಾಂಗ್ರೆಸ್‌-ಬಿಜೆಪಿ ನಡುವೆಯೇ ನೇರ ಬಿಗ್‌ಫೈಟ್‌ ಏರ್ಪಟ್ಟಿದೆ.

ಜೆಡಿಎಸ್‌ ಚುನಾವಣೆಗೆ ಸೀಮಿತವಾಗಿದೆ. ಸಾಮಾನ್ಯಕ್ಕೆ ಮೀಸಲಾಗಿರುವ ಬಳ್ಳಾರಿ ನಗರ ಕ್ಷೇತ್ರದಿಂದ ಒಟ್ಟು 28 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದು, ಬಿಜೆಪಿ ಹಾಲಿ ಶಾಸಕ ಜಿ. ಸೋಮಶೇಖರ ರೆಡ್ಡಿ, ಕಾಂಗ್ರೆಸ್‌ನ ನಾರಾ ಭರತ್‌ ರೆಡ್ಡಿ, ಮಾಜಿ ಸಚಿವ ಜನಾರ್ದನ ರೆಡ್ಡಿ ಸ್ಥಾಪಿತ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ದಿಂದ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ, ಕಾಂಗ್ರೆಸ್‌ ಟಿಕೆಟ್‌ ವಂಚಿತ ರಾಗಿ ಜೆಡಿಎಸ್‌ ಟಿಕೆಟ್‌ ಪಡೆದ ಮಾಜಿ ಶಾಸಕ ಅನಿಲ್‌ ಲಾಡ್‌ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಬಿಜೆಪಿ ಅಭ್ಯರ್ಥಿ, ಶಾಸಕ ಜಿ.ಸೋಮಶೇಖರ ರೆಡ್ಡಿ ಮೂರನೇ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸ್ಲಂ ನಿವಾಸಿಗಳಿಗೆ ಪಟ್ಟಾ ವಿತರಣೆ, ಸಾವಿರ ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮತ್ತೂಂದು ಅವಕಾಶ ನೀಡುವಂತೆ ಜನರಲ್ಲಿ ಮನವಿ ಮಾಡಿ ಕೊಳ್ಳುತ್ತಿದ್ದಾರೆ. ಕ್ಷೇತ್ರದಲ್ಲಿ ರೆಡ್ಡಿಯ ವರಿಗೆ ಜನಮನ್ನಣೆ ಇದೆ ಯಾದರೂ, ಪಕ್ಷದ ಕಾರ್ಯಕರ್ತರಲ್ಲಿನ ಅಸಮಾಧಾನ, ಅಗತ್ಯ ವಸ್ತುಗಳ ಬೆಲೆ ಏರಿಕೆ ತುಸು ನಕಾರಾತ್ಮಕವಾಗಿ ಪರಿಣಾಮ ಬೀರುವ ಸಾಧ್ಯತೆ ಇದೆ. ಯುವ ಮುಖಂಡ, ನಾರಾ ಭರತ್‌ರೆಡ್ಡಿ ಕಾಂಗ್ರೆಸ್‌ ಅಭ್ಯರ್ಥಿ.

ಕಳೆದ ಹಲವು ವರ್ಷಗಳಿಂದ ಟಚ್‌ ಫಾರ್‌ ಲೈಫ್‌ ಫೌಂಡೇಷನ್‌ ಹೆಸರಲ್ಲಿ ಸಾರ್ವ ಜನಿಕವಾಗಿ ಕಾಣಿಸಿಕೊಂಡ ಭರತ್‌ ರೆಡ್ಡಿ, 2015ರಲ್ಲಿ ಜಿಪಂ ಸದಸ್ಯರಾಗುವ ಮೂಲಕ ರಾಜಕೀಯ ಪ್ರವೇ ಶಿಸಿದ್ದಾರೆ. ಈಗ ಕಾಂಗ್ರೆಸ್‌ನಲ್ಲಿನ ಘಟಾನುಘಟಿ ಗಳನ್ನು ಹಿಂದಿಕ್ಕಿ, ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ ಬ್ಯಾಂಕ್‌ ಆದ ಮುಸ್ಲಿಂ, ಪರಿಶಿಷ್ಟ ಜಾತಿ, ಕುರುಬ ಮತಗಳು ಹೆಚ್ಚಿನ ಸಂಖ್ಯೆ ಯಲ್ಲಿರುವುದು ಸಹಕಾರಿಯಾಗುವ ಸಾಧ್ಯತೆಯಿದೆಯಾದರೂ, ಚಿಕ್ಕ ವಯಸ್ಸಿಗೆ ಕಾಂಗ್ರೆಸ್‌ ಟಿಕೆಟ್‌ ಪಡೆದಿರುವುದು, ಹಿರಿಯ ನಾಯಕರನ್ನು ಕಡೆಗ ಣಿಸುತ್ತಿದ್ದಾರೆ ಎಂಬ ಆರೋ ಪಗಳು ಕೇಳಿಬರುತ್ತಿವೆ. ಮಾಜಿ ಸಚಿವ ಜನಾರ್ದನ ರೆಡ್ಡಿ ಸ್ಥಾಪಿತ ಕೆಆರ್‌ಪಿದಿಂದ ಅವರ ಪತ್ನಿ ಲಕ್ಷ್ಮೀ ಅರುಣಾ ಸ್ಪರ್ಧಿಸಿದ್ದಾರೆ.

ವರ್ಷದ ಮೊದಲ ದಿನ ಜ.1ರಿಂದಲೇ ಪ್ರಚಾರ ಆರಂಭಿಸಿದ್ದಾರೆ. ಮುಖ್ಯವಾಗಿ ಮಹಿಳಾ ಮತದಾರರನ್ನು ಹೆಚ್ಚು ಸೆಳೆ ಯು ತ್ತಿದ್ದಾರೆ. ಹೊಸಮುಖ, ಜನಾ ರ್ದನ ರೆಡ್ಡಿ ಜನಪ್ರಿಯತೆ ಪ್ಲಸ್‌ ಆದರೂ, ಅಕ್ರಮ ಗಣಿಗಾರಿಕೆ ಆರೋಪ, ಕೆಆರ್‌ಪಿ-ಬಿಜೆಪಿ ಒಂದೇ ಎಂಬ ಆರೋ ಪಗಳು ಕೇಳಿಬರುತ್ತಿರು ವುದು ಒಂದಷ್ಟು ಮೈನಸ್‌ ಆಗಬಹುದಾಗಿದೆ. ಇನ್ನು ಜೆಡಿಎಸ್‌ನ ಅನಿಲ್‌ ಲಾಡ್‌, ಎಎಪಿ ಅಭ್ಯರ್ಥಿ ಕೊರ್ಲಗುಂದಿ ದೊಡ್ಡ ಕೇಶವ ರೆಡ್ಡಿ ಪಡೆಯಲಿರುವ ಮತಗಳ ಮೇಲೆ ಫ‌ಲಿತಾಂಶ ನಿರ್ಧಾರವಾಗಲಿದೆ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.