BJP ವಿರುದ್ಧ ಲಿಂಗಾಯತ ವಿರೋಧಿ ದಾಳ ಉರುಳಿಸಿದ Congress


Team Udayavani, Apr 17, 2023, 6:52 AM IST

BJP ವಿರುದ್ಧ ಲಿಂಗಾಯತ ವಿರೋಧಿ ದಾಳ ಉರುಳಿಸಿದ Congress

ಬೆಂಗಳೂರು: ಕಾಂಗ್ರೆಸ್‌ “ಲಿಂಗಾಯತ ವಿರೋಧಿ’ ಎಂಬ ಕಳಂಕ ತೊಳೆದುಕೊಳ್ಳಲು ಮಾಜಿ ಸಿಎಂಗಳಾದ ಬಿಜೆಪಿಯ ಬಿ.ಎಸ್‌.ಯಡಿಯೂರಪ್ಪ, ಜಗದೀಶ್‌ ಶೆಟ್ಟರ್‌ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ “ಕುರ್ಚಿ ತ್ಯಾಗ ಹಾಗೂ ಪಕ್ಷ ತ್ಯಾಗ’ ಪ್ರಕರಣಗಳನ್ನು ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ಲಿಂಗಾಯತ ವಿರೋಧಿ ದಾಳ ಉರುಳಿಸಲು ಕೈಪಡೆ ಸಜ್ಜಾದಂತೆ ಕಾಣುತ್ತಿದೆ.

ಕಳೆದ ಒಂದು ವಾರದಿಂದ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಅವಲೋಕಿಸಿದರೆ ಸದ್ಯಕ್ಕೆ ಸ್ವಲ್ಪಮಟ್ಟಿಗೆ ಬಿಜೆಪಿಗೆ ಡ್ಯಾಮೇಜ್‌ ಆಗಿದೆಯೆನ್ನಬಹುದು. ಆದರೆ ಇದು ಕಾಂಗ್ರೆಸ್‌ಗೆ ಎಷ್ಟರ ಮಟ್ಟಿಗೆ ಲಾಭವಾಗಲಿದೆ ಎಂಬುದು ಕೈಪಡೆಯ ಹಿಡಿತಕ್ಕೆ ಸಿಕ್ಕಿಲ್ಲವಾದರೂ “ಲಾಭ’ ಖಂಡಿತ ಅಗಲಿದೆ ಎಂಬ ವಿಶ್ವಾಸದಲ್ಲಿದೆ. ಈ ರಾಜಕೀಯ ಪರಿಸ್ಥಿತಿಯನ್ನು ಲಾಭ ಮಾಡಿಕೊಳ್ಳಬೇಕೆಂಬುದೇ ಕಾಂಗ್ರೆಸ್‌ ಲೆಕ್ಕಾಚಾರ. ಹೀಗಾಗಿ ಲಿಂಗಾಯತ ಸಮುದಾಯಕ್ಕೆ ಸೇರಿದ ಯಡಿಯೂರಪ್ಪ ಅವರನ್ನು ಬಿಜೆಪಿ ಬಲವಂತವಾಗಿ ಸಿಎಂ ಕುರ್ಚಿಯಿಂದ ಕೆಳಗಿಳಿಸಿದ ಪ್ರಕರಣ, ಜಗದೀಶ್‌ ಶೆಟ್ಟರ್‌ ಹಾಗೂ ಲಕ್ಷ್ಮಣ ಸವದಿ ಅವರಿಗೆ ಟಿಕೆಟ್‌ ಕೊಡದೆ ಪಕ್ಷದಿಂದ ಹೊರ ಹೋಗುವಂತಹ ಪರಿಸ್ಥಿತಿ ನಿರ್ಮಿಸಿದ್ದನ್ನು ರಾಜಕೀಯವಾಗಿ ಬಳಸಿಕೊಂಡ ಕಾಂಗ್ರೆಸ್‌ ಇದೊಂದು ರೀತಿ ಬಿಜೆಪಿಯಲ್ಲಿ ಲಿಂಗಾಯತ ನಾಯಕರ ದಮನ ಸರಣಿ ಆರಂಭ ಎಂಬ ಸಂದೇಶ ರವಾನಿಸುವಲ್ಲಿ ಯಶಸ್ವಿಯಾಗಿದೆ.

ಬಿಜೆಪಿಯಲ್ಲಿ ಲಿಂಗಾಯತರಿಗೆ ರಾಜಕೀಯ ಭವಿಷ್ಯವಿಲ್ಲವೆಂಬುದನ್ನು ಬಿಂಬಿಸಲು ಟಿಕೆಟ್‌ ವಂಚಿತರು, ಅಸಮಾಧಾನಿತರನ್ನು ಆಹ್ವಾನಿಸಿ ಪಕ್ಷಕ್ಕೆ ಕರೆತಂದು ಸದ್ಯಕ್ಕೆ ಕಾಂಗ್ರೆಸ್‌ “ರಾಜ ಮರ್ಯಾದೆ’ ಕೊಡುತ್ತಿರುವುದನ್ನು ನೋಡಿದರೆ ಚುನಾವಣೆ ಸಂದರ್ಭದಲ್ಲಿ ಇವರನ್ನು ಚೆನ್ನಾಗಿ ಬಳಸಿಕೊಳ್ಳಲು ಇದು ಕಾಂಗ್ರೆಸ್‌ಗೆ ಸಿಕ್ಕ ಪ್ರಬಲ ಅಸ್ತ್ರವೆಂದೇ ರಾಜಕೀಯ ವಲಯದಲ್ಲಿ ವ್ಯಾಖ್ಯಾನಿಸಲಾಗುತ್ತಿದೆ. ಬಿಜೆಪಿ ಮುರಿದ ಮನೆಯಾಗಿದ್ದು ಅದರ ಲಾಭ ಪಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್‌ ಶೆಟ್ಟರ್‌, ಸವದಿ ಅವರ ಸೇರ್ಪಡೆಯನ್ನು ಯಶಸ್ವಿಯಾಗಿ ಮುಗಿಸಿದೆ.
ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದವರಲ್ಲಿ ಜಗದೀಶ್‌ ಶೆಟ್ಟರ್‌ ಹಾಗೂ ಲಕ್ಷ್ಮಣ ಸವದಿ ಪ್ರಮುಖರು. ಸವದಿ ಅವರದು ಬಿಜೆಪಿಯಲ್ಲಿ 20 ವರ್ಷದ ಒಡನಾಟ ಅಷ್ಟೇ, ಅವರ ಮೂಲ ಜನತಾಪರಿವಾರ. ಆದರೆ ಶೆಟ್ಟರ್‌ ಅವರದು ವಿಭಿನ್ನ ರೀತಿ. ಬಿಜೆಪಿಯಲ್ಲಿ 45 ವರ್ಷಗಳ ಸುದೀರ್ಘ‌ ಜೀವನ. ಎಲ್ಲಕ್ಕಿಂತ ಮುಖ್ಯವಾಗಿ ಸಂಘ ಪರಿವಾರದಲ್ಲಿ ಬೆಳೆದ ವ್ಯಕ್ತಿ, ಇವರು ಕಾಂಗ್ರೆಸ್‌ ಸಂಸ್ಕೃತಿಗೆ ಹೇಗೆ ಹೊಂದಿಕೊಳ್ಳುತ್ತಾರೆ ಎಂಬುದು ಮುಂದಿನ ದಿನಗಳಲ್ಲಿ ಕಾದು ನೋಡಬೇಕು.

ಶೆಟ್ಟರ್‌-ಸವದಿ ಸೇರ್ಪಡೆಯಿಂದ ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಾತ್ರವಲ್ಲದೆ ಕಿತ್ತೂರು ಕರ್ನಾಟಕವೂ ಸೇರಿದಂತೆ ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷಕ್ಕೆ ಹೆಚ್ಚು ಬಲ ಬಂದಿದೆ. ವೀರಶೈವ-ಲಿಂಗಾಯತ ಮತಗಳು ಸಾಕಷ್ಟು ಪ್ರಮಾಣದಲ್ಲಿ ವರ್ಗಾವಣೆಗೊಂಡರೆ ಕನಿಷ್ಟ 15 ರಿಂದ 20 ಕ್ಷೇತ್ರಗಳ ಫ‌ಲಿತಾಂಶ ಚಿತ್ರಣವೇ ಬದಲಾಗುತ್ತದೆ ಎಂಬ ನಿರೀಕ್ಷೆಗಳಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂಬ ಕಾರಣದಿಂದ ನೋವಿನಿಂದ ಹೊರಬರುತ್ತಿರುವ ಲಿಂಗಾಯತರಿಗೆ ಕಾಂಗ್ರೆಸ್‌ ಮಣೆ ಹಾಕುತ್ತಿದೆ. ಕಾಂಗ್ರೆಸ್‌ ಪಕ್ಷ ಲಿಂಗಾಯತರನ್ನು ಕಡೆಗಣಿಸಿತ್ತು ಎಂಬ ಅಪವಾದದಿಂದ ಹೊರಬರಲು ಇದು ಸಕಾಲವೆಂದು ಪರಿಗಣಿಸಿರುವ ಕಾಂಗ್ರೆಸ್‌ ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದೆ.

ಬಿಜೆಪಿಯಲ್ಲಿ ಯಡಿಯೂರಪ್ಪ ಯಾವ ರೀತಿ ಲಿಂಗಾಯತ ಸಮುದಾಯದ ನಾಯಕರೋ ಅದೇ ರೀತಿ ಕಾಂಗ್ರೆಸ್‌ನಲ್ಲಿ ಎಂ.ಬಿ.ಪಾಟೀಲ್‌ ಮುಂಚೂಣಿಯಲ್ಲಿದ್ದಾರೆ. ಶೆಟ್ಟರ್‌ ಕಾಂಗ್ರೆಸ್‌ ಸೇರ್ಪಡೆ ಪ್ರಕ್ರಿಯೆಯಲ್ಲಿ ಸಂಬಂಧಿಕರೂ ಆಗಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹಾಗೂ ಎಂ.ಬಿ.ಪಾಟೀಲ್‌ ಸಕ್ರಿಯರಾಗಿದ್ದರು. ಹಿಂದೆ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಲ್ಲಿ ಈ ಮೂವರದು ವಿಭಿನ್ನ ನಿಲುವಾಗಿತ್ತು. ಈಗ ಅದು ತೆರೆಗೆ ಸರಿದಿದೆ. ಮೂವರು ಒಂದೇ ಪಕ್ಷದಲ್ಲಿದ್ದಾರೆ. ಹೀಗಾಗಿ ಕಾಂಗ್ರೆಸ್‌ನಲ್ಲಿ ಪ್ರಬಲ ಲಿಂಗಾಯತರ ಸಂಖ್ಯೆ ಹೆಚ್ಚಿದಂತೆ ಆಗಿದೆ. ಜತೆಗೆ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ನಂತರ ಮತ್ತೂಂದು ಶಕ್ತಿಕೇಂದ್ರ ಸೃಷ್ಟಿಯಾದರೂ ಅಚ್ಚರಿ ಇಲ್ಲ.

ಪ್ರತಿ ಚುನಾವಣೆ ಸಂದರ್ಭದಲ್ಲೂ ಪಕ್ಷಾಂತರ ಸರ್ವೇ ಸಾಮಾನ್ಯ. ಆದರೆ ಪಕ್ಷಾಂತರ ಮಾಡಿದ ನಾಯಕನ ಹಿಂದೆ ಎಷ್ಟು ಮಂದಿ ಮುಖಂಡರು/ಹಿಂಬಾಲಕರು ಪಕ್ಷ ತೊರೆಯುತ್ತಾರೆ ಎಂಬುದು ಸಹ ಮುಖ್ಯ, ಜತೆಗೆ ಕೇವಲ ನಾಯಕ/ಮುಖಂಡ ಪಕ್ಷಾಂತರ ಮಾಡಿದರೆ ಸಾಲದು, ತಾವು ಸೇರ್ಪಡೆಯಾದ ಪಕ್ಷಕ್ಕೆ ಎಷ್ಟು ಮತಗಳನ್ನು ತಂದುಕೊಡುತ್ತಾರೆ ಎಂಬುದು ಅಷ್ಟೇ ಮುಖ್ಯ. ತಾವು ಬದಲಾದಂತೆ ತಮ್ಮ ಸಮುದಾಯ ಇಲ್ಲವೇ ಸಾಮಾನ್ಯ ಮತದಾರರನ್ನು ಬದಲಾಯಿಸುವ ಶಕ್ತಿ ಇದ್ದರೆ ಮಾತ್ರ ಆಗ ನಾಯಕರ ಪಕ್ಷಾಂತರಕ್ಕೆ ಬೆಲೆ ಇರುತ್ತದೆ, ಇಲ್ಲದಿದ್ದರೆ ಅದು ಕೇವಲ ಅವರಿಗಷ್ಟೇ ಸೀಮಿತವಾಗಿರುತ್ತದೆ. ಈ ಕಾರಣದಿಂದಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್‌ನವರು ಬಿಜೆಪಿಯವರನ್ನು ಕರೆದುಕೊಂಡಿರಬಹುದು, ಆದರೆ ಬಿಜೆಪಿ ಮತ ಬ್ಯಾಂಕ್‌ ಬಿಟ್ಟು ಹೋಗುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೊಮ್ಮಾಯಿಗೂ ಶೆಟ್ಟರ್‌, ಸವದಿ ಸ್ಥಿತಿ: ಎಂಬಿಪಾ
ವಿಜಯಪುರ: ವಿಧಾನಸಭೆ ಮತದಾನ ಬಳಿಕ ಸಿಎಂ ಬಸವರಾಜ ಬೊಮ್ಮಾಯಿಗೂ ಶೆಟ್ಟರ್‌ ಹಾಗೂ ಸವದಿ ಅವರಿಗೆ ಆದಂತೆ ರಾಜಕೀಯ ಪರಿಸ್ಥಿತಿ ಎದುರಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಭವಿಷ್ಯ ನುಡಿದಿದ್ದಾರೆ. ಬಬಲೇಶ್ವರದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣೆ ಬಳಿಕ ಬೊಮ್ಮಾಯಿ ಮಾತ್ರವಲ್ಲ ಬಿಜೆಪಿ ಇತರೆ ನಾಯಕರ ಪರಿಸ್ಥಿತಿ ಏನಾಗಲಿದೆ ಅಂತಾ ನಿಮಗೂ ಗೊತ್ತಾಗಲಿದೆ. ಲಕ್ಷ್ಮಣ ಸವದಿ, ಜಗದೀಶ್‌ ಶೆಟರ್‌ ಅವರಿಗಾದ ಪರಿಸ್ಥಿತಿ ಬೊಮ್ಮಾಯಿಗೂ ಆಗುತ್ತದೆ. ಬೇಕಾದರೆ ಬರೆದಿಟ್ಟುಕೊಳ್ಳಿ. ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಸೈಡ್‌ಲೈನ್‌ ಮಾಡಲಾಗುತ್ತಿದೆ. ಮೊದಲು ಯಡಿಯೂರಪ್ಪ ಅವರಿಂದ ಅಧಿಕಾರ ಕಸಿದುಕೊಂಡ ಬಿಜೆಪಿ ಹೈಕಮಾಂಡ್‌ ಈಗ ಲಕ್ಷ್ಮಣ ಸವದಿ, ಜಗದೀಶ್‌ ಶೆಟ್ಟರ್‌ ಅವರನ್ನು ಮೂಲೆಗುಂಪು ಮಾಡಿದೆ. ಚುನಾವಣೆ ಬಳಿಕ ಬೊಮ್ಮಾಯಿಗೂ ಇದೇ ಪರಿಸ್ಥಿತಿ ಬರುವುದು ಖಚಿತ. ಬಿಜೆಪಿ ಹೈಕಮಾಂಡ್‌ ನಾಯಕರ ಹಿಡನ್‌ ಅಜಂಡಾ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದಂತೆ ಬೇರೆ ಇದೆ. ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ಮುಗಿಸಲಾಗುತ್ತಿದೆ. ಕಾಂಗ್ರೆಸ್‌ ಪಕ್ಷಕ್ಕೆ ಲಿಂಗಾಯತ ನಾಯಕರು ಬಂದಿರೋದು ಪ್ಲಸ್‌ ಪಾಯಿಂಟ್‌ ಆಗಲಿದೆ ಎಂದರು.

-ಎಂ.ಎನ್‌.ಗುರುಮೂರ್ತಿ

ಟಾಪ್ ನ್ಯೂಸ್

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.