Congressಗೆ ಸೆಡ್ಡು; ಕಡೂರಲ್ಲಿ ಶಕ್ತಿ ಪ್ರದರ್ಶನ ಮಾಡಿದ ವೈ.ಎಸ್.ವಿ.ದತ್ತ
ಬೃಹತ್ ರೋಡ್ ಶೋ.... ಟವಲ್ ಒಡ್ಡುತ್ತೇನೆ, ಮತ ಭಿಕ್ಷೆ, ಹಣ ನೀಡಿ....
Team Udayavani, Apr 9, 2023, 2:30 PM IST
ಚಿಕ್ಕಮಗಳೂರು: ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಬಳಿಕ ಸ್ವಕ್ಷೇತ್ರ ಕಡೂರಿನಲ್ಲಿ ಭಾನುವಾರ ವೈ.ಎಸ್.ವಿ.ದತ್ತ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಅಭಿಮಾನಿಗಳ ಸ್ವಾಭಿಮಾನದ ಸಭೆ ಕರೆದಿದ್ದ ದತ್ತ, ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬೃಹತ್ ರೋಡ್ ಶೋ ನಡೆಸಿ ಗಮನ ಸೆಳೆದಿದ್ದಾರೆ.
ಕಡೂರಿನ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಗೆ ಜಾಗ ಸಾಲದೆ ಮಂಟಪದ ಕೆಳಭಾಗದಲ್ಲಿ ಎಲ್ ಇಡಿ ವ್ಯವಸ್ಥೆ ಮಾಡಲಾಗಿತ್ತು. ದತ್ತ ಅವರು ವೆಂಕಟೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಸಭೆಗೆ ಬಂದರು. ಅಭಿಮಾನಿಗಳನ್ನು ಕಂಡು ನಿಮ್ಮ ಪ್ರೀತಿಗೆ ನಾನು ಋಣಿ ಎಂದರು.
ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ
ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಸ್ಪರ್ಧೆ ಮಾಡುವುದಾಗಿ ಸಭೆಯಲ್ಲಿ ದತ್ತ ಘೋಷಣೆ ಮಾಡಿದರು. ಟವಲ್ ಗುರುತಿನಿಂದ ಸ್ಪರ್ಧೆ ಮಾಡುವುದಾಗಿ ಹೇಳಿದ ಅವರು ಹೆಗಲ ಮೇಲಿದ್ದ ಟವಲ್ ಒಡ್ಡುತ್ತೇನೆ, ಮತ ಭಿಕ್ಷೆ, ಹಣ ನೀಡಿ, ಭಿಕ್ಷೆ ನೀಡಿ ಎಂದು ಬೇಡಿದರು.
ಈ ವೇಳೆ ಅಭಿಮಾನಿಗಳು 50 ಸಾವಿರ, ಲಕ್ಷ, 2 ಲಕ್ಷ ರೂಪಾಯಿಗಳ ಚೆಕ್ ನೀಡಿ,ಮತ್ತಷ್ಟು ಹಣ ಕೊಡುತ್ತೇವೆ ಎಂದು ಅಭಿಮಾನಿಗಳು ಹೇಳಿದರು.
ಸ್ವಾಭಿಮಾನಿ ಸಭೆಯಲ್ಲಿ 4000ಕ್ಕೂ ಹೆಚ್ಚು ಜನ ಭಾಗಿಯಾಗಿದ್ದಾರೆ.ಅಭಿಮಾನಿಗಳು ದತ್ತ ಅವರಿಗೆ ಸ್ವತಂತ್ರವಾಗಿ ಸ್ಪರ್ಧಿಸಲು ಮನವಿ ಮಾಡಿದ್ದರು. ದತ್ತ ಅವರು ಎರಡು ದಿನ ಸಮಯ ಕೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ