ತಡರಾತ್ರಿ ವರೆಗೂ ನಡೆದ ಡಿಮಸ್ಟರಿಂಗ್‌ : ಎನ್‌ಐಟಿಕೆಗೆ ತಲುಪಿದ ಮತಯಂತ್ರ


Team Udayavani, May 11, 2023, 7:10 AM IST

ತಡರಾತ್ರಿ ವರೆಗೂ ನಡೆದ ಡಿಮಸ್ಟರಿಂಗ್‌ : ಎನ್‌ಐಟಿಕೆಗೆ ತಲುಪಿದ ಮತಯಂತ್ರ

ಮಂಗಳೂರು: ಈ ಬಾರಿಯ ಮತದಾನವನ್ನು ಯಶಸ್ವಿಯಾಗಿ ನೆರವೇರಿಸಿದ ಎಲ್ಲ ಸಿಬಂದಿ ಬುಧವಾರ ರಾತ್ರಿ ಇವಿಎಂ, ವಿವಿಪಾಟ್‌, ದಾಖಲೆಗಳನ್ನೂ ಎಲ್ಲ 8 ಡಿಮಸ್ಟರಿಂಗ್‌ ಕೇಂದ್ರಕ್ಕೆ ಒಪ್ಪಿಸಿದರು. ತಡರಾತ್ರಿಯೇ ಇವಿಎಂಗಳನ್ನು ಎನ್‌ಐಟಿಕೆಯ ಸ್ಟ್ರಾಂಗ್‌ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆ ಭದ್ರತೆಯೊಂದಿಗೆ ಕೊಂಡೊಯ್ಯಲಾಗಿದೆ.

ಮಂಗಳವಾರ ಮಸ್ಟರಿಂಗ್‌ ಕೇಂದ್ರದಿಂದ ಇವಿಎಂ, ವಿವಿಪಾಟ್‌ ಹಾಗೂ ಇತರ ಸಾಮಗ್ರಿಗಳೊಂದಿಗೆ ಮತಗಟ್ಟೆಗೆ ಸಿಬಂದಿ ತೆರಳಿದ್ದರು. ಬುಧವಾರ ಮತದಾನ ಮುಗಿದ ಬಳಿಕ ಆಯಾ ಡಿಮಸ್ಟರಿಂಗ್‌ ಕೇಂದ್ರಗಳಿಗೆ ತಂದು ಹಿರಿಯ ಅಧಿಕಾರಿಗಳಿಗೆ ಹಸ್ತಾಂತರ ಮಾಡಿದರು.

ಮಂಗಳೂರಿನ ರೊಸಾರಿಯೋ ಶಾಲೆ, ಉರ್ವ ಕೆನರಾ ಶಾಲೆ, ಮೂಡುಬಿದಿರೆಯ ಮಹಾವೀರ ಕಾಲೇಜು, ಮಂಗಳೂರು ವಿಶ್ವವಿದ್ಯಾಲಯ, ಎಸ್‌ಡಿಎಂ ಉಜಿರೆ, ಮೊಡಂಕಾಪು ಇನ್‌ಫ್ಯಾಂಟ್‌ ಜೀಸಸ್‌ ಶಾಲೆ, ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಸುಳ್ಯದ ನೆಹರೂ ಮೆಮೋರಿಯಲ್‌ ಕಾಲೇಜಿನ ಡಿಮಸ್ಟರಿಂಗ್‌ ಕೇಂದ್ರಗಳಿಗೆ ಮತಯಂತ್ರಗಳನ್ನು ತಂದು ಡಿಮಸ್ಟರಿಂಗ್‌ ಪ್ರಕ್ರಿಯೆ ಮುಗಿಸಲಾಯಿತು.

ಉಡುಪಿ ಜಿಲ್ಲೆಯಲ್ಲಿ ಡಿಮಸ್ಟರಿಂಗ್‌ ಕಾರ್ಯ ಪೂರ್ಣ
ಉಡುಪಿ: ಮಂಗಳವಾರವಷ್ಟೇ ಮತಯಂತ್ರ ಹಿಡಿದು ಮತಗಟ್ಟೆಗೆ ಹೋಗಿದ್ದ ಅಧಿಕಾರಿ, ಸಿಬಂದಿ ವರ್ಗ ಬುಧವಾರ ಸಂಜೆ ಮತ ಯಂತ್ರ ಬಾಕ್ಸ್‌, ದಾಖಲೆ ಪತ್ರ, ವಿವಿಧ ಪರಿಕರಗ
ಳೊಂದಿಗೆ ಎಲ್ಲ ಐದು ಕ್ಷೇತ್ರಗಳ ಡಿಮಸ್ಟ ರಿಂಗ್‌ ಕೇಂದ್ರಕ್ಕೆ ಬಂದು ಮತಯಂತ್ರಗಳನ್ನು ಒಪ್ಪಿಸಿ ದಾಖಲೆ ನೀಡಿ ಸಹಿ ಹಾಕಿ ಮನೆ ಕಡೆಗೆ ತೆರಳಿದರು.

ಬೆಳಗ್ಗೆ 7 ಗಂಟೆಗೂ ಮೊದಲು ಮತದಾನಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದ ಅಧಿಕಾರಿ, ಸಿಬಂದಿ ಸಂಜೆ 6 ಗಂಟೆಗೆ ಮತದಾನ ಪೂರ್ಣಗೊಳಿಸಿ, ನಿರ್ದಿಷ್ಟ ನಿಯಮಾನುಸಾರ ಮತಯಂತ್ರಗಳನ್ನು ಪ್ಯಾಕ್‌ ಮಾಡಿ, ದಾಖಲೆ ಪತ್ರ ಸಮೇತವಾಗಿ ಡಿಮಸ್ಟರಿಂಗ್‌ ಸೆಂಟರ್‌ ತಲುಪಿ, ಅಲ್ಲಿದ್ದ ಅಧಿಕಾರಿಗಳಿಗೆ ಮಾಹಿತಿ ಒದಗಿಸಿ, ಮತಯಂತ್ರ ಒಪ್ಪಿಸಿ ವಾಪಸಾಗಿದ್ದಾರೆ.

ಬುಧವಾರ ತಡರಾತ್ರಿಯವರೆಗೂ ಬೈಂದೂರಿನ ಸ.ಪ.ಪೂ. ಕಾಲೇಜು, ಕುಂದಾಪುರ ಭಂಡಾರ್ಕಾರ್ಸ್‌ ಕಾಲೇಜು, ಉಡುಪಿಯ ಸೈಂಟ್‌ ಸಿಸಿಲೀಸ್‌, ಕಾಪುವಿನ ದಂಡತೀರ್ಥ ಪದವಿಪೂರ್ವ ಕಾಲೇಜು ಹಾಗೂ ಕಾರ್ಕಳದ ಮಂಜುನಾಥ್‌ ಪೈ ಸ್ಮಾರಕ ಸರಕಾರಿ ಪ್ರಥಮದರ್ಜೆ ಕಾಲೇಜಿನ ಡಿಮಸ್ಟರಿಂಗ್‌ ಕೇಂದ್ರಕ್ಕೆ ಮತಯಂತ್ರ ತರಲಾಯಿತು. ಇಲ್ಲಿಂದ ಮತಯಂತ್ರಗಳನ್ನು ತಡರಾತ್ರಿ ಮತ ಎಣಿಕೆ ಕೇಂದ್ರಕ್ಕೆ ಕೊಂಡೊಯ್ಯಲಾಯಿತು. ಕುಂದಾಪುರ, ಬೈಂದೂರು, ಕಾರ್ಕಳ ಕಡೆಗೆ ತೆರಳುವ ಸಿಬಂದಿಗೆ ಬಸ್‌ ವ್ಯವಸ್ಥೆ ಮಾಡಲಾಗಿತ್ತು. ಐದೂ ಕ್ಷೇತ್ರಗಳ ಮತ ಎಣಿಕೆ ಮೇ 13 ರಂದು ನಡೆಯಲಿದೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.