ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರ: ಇಲ್ಲಿ ಒಮ್ಮೆ ಗೆದ್ದವರು ಮತ್ತೆ ಗೆಲ್ಲುವುದಿಲ್ಲ
Team Udayavani, Mar 27, 2023, 5:55 AM IST
ಕೊಂಚ ನಗರ ಪ್ರದೇಶ ಮತ್ತ ಭಾಗಶಃ ಗ್ರಾಮಾಂತರ ಪ್ರದೇಶ ವ್ಯಾಪ್ತಿ ಪಡೆದ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರ ಪಾಳೆಗಾರರ ಫೈಟ್ನಿಂದ ರಾಜ್ಯದ ಗಮನ ಸೆಳೆದ ಕ್ಷೇತ್ರ. ಹಾಲಿ ಶಾಸಕ ಬಿಜೆಪಿಯ ಅಮೃತ ದೇಸಾಯಿ ಮತ್ತು ಮಾಜಿ ಸಚಿವ ವಿನಯ ಕುಲಕರ್ಣಿ ಮಧ್ಯದ ಫೈಟ್ನಿಂದ ಸುದ್ದಿಯಾಗಿದ್ದ ಈ ಕ್ಷೇತ್ರದಲ್ಲಿ ಒಮ್ಮೆ ಗೆದ್ದವರು ಮತ್ತೆ ಗೆದ್ದ ಉದಾಹರಣೆಯೇ ಇಲ್ಲ.
ಬಾಬುರಾವ್ ದೇಶಪಾಂಡೆ ಅವರಿಂದ ಹಿಡಿದು ಬಾಬಾಗೌಡ ಪಾಟೀಲವರೆಗೆ, ಪ್ರೊ|ಎಂ.ಡಿ.ನಂಜುಂಡಸ್ವಾಮಿ ಅವರಿಂದ ಹಿಡಿದು ಶ್ರೀಕಾಂತ ಅಂಬಡಗಟ್ಟಿವರೆಗೆ ಅಷ್ಟೆಯಲ್ಲ, 2008ರಿಂದ ಈಚೇಗೆ ಕ್ಷೇತ್ರ ಪುನರ್ವಿಂಗಡಣೆ ಅನಂತರ ನಡೆದ ಮೂರು ಚುನಾವಣೆಯಲ್ಲೂ ಇದು ನಡೆದುಕೊಂಡು ಬಂದಿದೆ.
2008ರಲ್ಲಿ ಬಿಜೆಪಿಯಿಂದ ಸೀಮಾ ಮಸೂತಿ ಗೆಲುವು ಸಾಧಿಸಿದರೆ, 2013ರಲ್ಲಿ ವಿನಯ ಕುಲಕರ್ಣಿ ಹಾಗೂ 2018ರಲ್ಲಿ ಅಮೃತ ದೇಸಾಯಿ ಗೆಲುವು ಸಾಧಿಸಿದ್ದಾರೆ. ಪ್ರತೀ ಬಾರಿಯೂ ಈ ಕ್ಷೇತ್ರದ ಜನತೆಯ ತೀರ್ಮಾನ ಸದಾ ಹೊಸತನದತ್ತ ತುಡಿಯುತ್ತದೆ. ಇನ್ನೊಂದೆಡೆ ಈ ಕ್ಷೇತ್ರದ ಯುವಶಕ್ತಿ ಸದಾ ಹೊಸ ಅಭ್ಯರ್ಥಿಗಳ ಬೆನ್ನು ತಟ್ಟುತ್ತಲೇ ಬಂದಿದ್ದಾರೆ. ಈ ಬಾರಿ ಎರಡೂ ಪಕ್ಷಗಳಿಂದ ಅಭ್ಯರ್ಥಿಗಳ ಅಖೈರು ಆಗಿಲ್ಲ. ಈ ಬಾರಿಯೂ ಜನ ಬದಲಾವಣೆ ಬಯಸುತ್ತಾರಾ ಇಲ್ಲವೇ ಹಳೆಯ ನಾಯಕನಿಗೆ ಮಣೆ ಹಾಕುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು