ಚಿಕ್ಕಮಗಳೂರಲ್ಲಿ ಮಾಜಿ ದೋಸ್ತಿಗಳ ಕಾದಾಟ

ಸಿ.ಟಿ.ರವಿ ವಿರುದ್ಧ ತೊಡೆ ತಟ್ಟಿದ ಎಚ್‌.ಡಿ.ತಮ್ಮಯ್ಯ

Team Udayavani, May 1, 2023, 6:25 AM IST

ಚಿಕ್ಕಮಗಳೂರಲ್ಲಿ ಮಾಜಿ ದೋಸ್ತಿಗಳ ಕಾದಾಟ

ಚಿಕ್ಕಮಗಳೂರು:ಕಾಫಿನಾಡು ಚಿಕ್ಕಮಗಳೂರು ಕ್ಷೇತ್ರ ಈ ಬಾರಿ ಮಾಜಿ ಗೆಳೆಯ’ರ ಕದನದಿಂದ ಹೈವೋಲ್ಟೆಜ್‌ ಕ್ಷೇತ್ರಗಳಲ್ಲಿ ಒಂದಾಗಿದೆ.

ಸತತ ನಾಲ್ಕು ಬಾರಿ ಗೆಲುವು ಸಾಧಿ ಸಿ ವಿವಿಧ ಇಲಾಖೆ ಮಂತ್ರಿಯಾಗಿ ಸದ್ಯ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಸಿ.ಟಿ. ರವಿ ವಿರುದ್ಧ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಎಚ್‌.ಡಿ. ತಮ್ಮಯ್ಯ ಈ ಬಾರಿ ಸೆಡ್ಡು ಹೊಡೆದಿದ್ದು ಕಾಂಗ್ರೆಸ್‌ ಟಿಕೆಟ್‌ ಗಿಟ್ಟಿಸಿ ಪ್ರತಿಸ್ಪರ್ಧಿಯಾಗಿದ್ದಾರೆ. ಈ ಮಾಜಿ ದೋಸ್ತಿಗಳ ಕದನದಿಂದ ಚಿಕ್ಕಮಗಳೂರು ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ.

ಕಾಂಗ್ರೆಸ್‌ನ ಸಗೀರ್‌ ಅಹಮದ್‌ ವಿರುದ್ಧ ಒಮ್ಮೆ ಸೋತಿರುವ ಸಿ.ಟಿ. ರವಿ ಬಳಿ ಮತ್ತೆಂದೂ ಸೋಲು ಸುಳಿದಿಲ್ಲ. ಈ ಬಾರಿ ಐದನೇ ಗೆಲುವಿನ ನಿರೀಕ್ಷೆಯಲ್ಲಿದ್ದು ಮಾಜಿ ಆಪ್ತನ ವಿರುದ್ಧ ಸೆಣಸಬೇಕಾಗಿದೆ. ಎಚ್‌.ಡಿ. ತಮ್ಮಯ್ಯ ಬಿಜೆಪಿ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದರು. ಆದರೆ, ಟಿಕೆಟ್‌ ಸಿಗುವ ಯಾವ ಲಕ್ಷಣವೂ ಕಾಣದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕದ ತಟ್ಟಿ ಕೊನೆಗೆ ಎಲ್ಲ ಆಕಾಂಕ್ಷಿಗಳನ್ನೂ ಹಿಂದಿಕ್ಕಿ ಟಿಕೆಟ್‌ ಗಿಟ್ಟಿಸುವಲ್ಲಿಯೂ ಯಶಸ್ವಿಯಾಗಿದ್ದು, ಆಪ್ತನ ವಿರುದ್ಧವೇ ತೊಡೆ ತಟ್ಟಿದ್ದಾರೆ.

ಮತ್ತೊಮ್ಮೆ ಗೆಲುವಿಗೆ ಪಣ:
ಸಿ.ಟಿ.ರವಿ ಗರಡಿಯಲ್ಲೇ ಪಳಗಿರುವ ಎಚ್‌.ಡಿ. ತಮ್ಮಯ್ಯ, ಸಿ.ಟಿ. ರವಿಯವರ ಚುನಾವಣಾ ಅಸ್ತ್ರಗಳನ್ನು ಕರಗತ ಮಾಡಿಕೊಂಡಿದ್ದು ಅವರ ವಿರುದ್ಧ ಪ್ರಯೋಗಕ್ಕೂ ಮುಂದಾಗಿದ್ದಾರೆ. ಸಿ.ಟಿ. ರವಿ ಒಕ್ಕಲಿಗ ಸಮುದಾಯವನ್ನು ಪ್ರತಿನಿಧಿ ಸುತ್ತಿದ್ದು, ಕ್ಷೇತ್ರದಲ್ಲಿ ಸಮುದಾಯದ ಪ್ರಾಬಲ್ಯ ಇಲ್ಲದಿದ್ದರೂ ತಮ್ಮ ಮಾತಿನ ಶೈಲಿಯಿಂದ ಎಲ್ಲರನ್ನೂ ಸೆಳೆದುಕೊಳ್ಳುವ ಶಕ್ತಿ ಪ್ರತಿ ಚುನಾವಣೆಯಲ್ಲೂ ಅವರಿಗೆ ವರವಾಗಿದೆ. ಐದು ಚುನಾವಣೆ ಎದುರಿಸಿರುವ ಅನುಭವ, ಕ್ಷೇತ್ರದಲ್ಲಿನ ಅಭಿವೃದ್ಧಿ ಕೆಲಸ, ಹಿಂದುತ್ವದ ಅಜೆಂಡಾ, ಪಕ್ಷ ಸಂಘಟನಾ ಶಕ್ತಿ ಈ ಚುನಾವಣೆಯಲ್ಲಿ ಕೈ ಹಿಡಿಯಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಎರಡು ದಶಕಗಳಿಂದ ಶಾಸಕರಾಗಿರುವ ಸಿ.ಟಿ. ರವಿ, ಕ್ಷೇತ್ರದ ಅಭಿವೃದ್ಧಿಯಲ್ಲಿ ಸ್ವಲ್ಪ ಹಿನ್ನಡೆ ಸಾ ಧಿಸಿದ್ದು, ಅಲ್ಲದೇ ಸಮುದಾಯದ ಬಲ ಅಷ್ಟಾಗ ಇಲ್ಲದಿರುವುದು, ಕೆಲವೊಮ್ಮೆ ರಾಜ್ಯದ ಪ್ರಮುಖ ನಾಯಕರ ಬಗ್ಗೆ ಮಾತನಾಡಿದ್ದು, ಲಿಂಗಾಯತ ಶಾಸಕ ಕೂಗು ಕ್ಷೇತ್ರದಲ್ಲಿ ಎದ್ದಿರುವುದು ಸಿ.ಟಿ. ರವಿಗೆ ಹಿನ್ನಡೆಯಾಗಬಲ್ಲವು ಎನ್ನಲಾಗುತ್ತಿದೆ.

ಚೊಚ್ಚಲ ಕದನ:
ಸಿ.ಟಿ. ರವಿ ಪ್ರತಿಸ್ಪರ್ಧಿಯಾಗಿರುವ ಎಚ್‌.ಡಿ. ತಮ್ಮಯ್ಯ ಪ್ರಬಲ ಲಿಂಗಾಯತ ಸಮುದಾಯ ಪ್ರತಿನಿಧಿ ಸುತ್ತಿದ್ದು, ಕಳೆದ ಮೂರು ದಶಕಗಳಿಂದ ಕ್ಷೇತ್ರದಲ್ಲಿ ಸಮುದಾಯದ ಶಾಸಕರು ಇಲ್ಲದಿರುವುದು, ಬಿಜೆಪಿಯಲ್ಲಿ ಟಿಕೆಟ್‌ ದಕ್ಕದಿರುವ ಅನುಕಂಪ, ಬದಲಾವಣೆ ಕೂಗು ಇವರಿಗೆ ಪ್ಲಸ್‌ ಆಗಲಿದೆ ಎಂಬ ಮಾತುಗಳು ಹರಿದಾಡುತ್ತಿವೆ.
ಎಚ್‌.ಡಿ. ತಮ್ಮಯ್ಯ ಬಿಜೆಪಿಯಲ್ಲಿ ಪಳಗಿದ್ದು, ಟಿಕೆಟ್‌ಗಾಗಿಯೇ ಕಾಂಗ್ರೆಸ್‌ಗೆ ವಲಸೆ ಬಂದವರು ಎಂಬ ಹಣೆಪಟ್ಟಿ ಇದೆ. ಇದೇ ಮೊದಲ ಬಾರಿ ವಿಧಾನಸಭೆ ಚುನಾವಣೆ ಕಣಕ್ಕಿಳಿದಿದ್ದು, ಅನುಭವದ ಕೊರತೆ ಮತ್ತು ಸಿ.ಟಿ. ರವಿ ಚುನಾವಣೆ ತಂತ್ರಗಾರಿಕೆ ತಡೆದುಕೊಳ್ಳುವ ಶಕ್ತಿ. ಕಾಂಗ್ರೆಸ್‌ ಕಾರ್ಯಕರ್ತರನ್ನು ಒಗ್ಗೂಡಿಸುವುದು ಹಾಗೂ ಲಿಂಗಾಯತ ಸಮುದಾಯದ ಮತಗಳನ್ನು ಸೆಳೆಯುವ ದೊಡ್ಡ ಸವಾಲು ಇವರ ಮುಂದಿದೆ.

ಜೆಡಿಎಸ್‌ನಿಂದ ಬಿ.ಎಂ. ತಿಮ್ಮಶೆಟ್ಟಿ ಕಣದಲ್ಲಿದ್ದರೂ ಇಬ್ಬರಿಗೂ ಭಾರೀ ಸ್ಪರ್ಧೆಯೊಡ್ಡುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಜೆಡಿಎಸ್‌ ಮುಖಂಡ ಎಸ್‌.ಎಲ್‌. ಭೋಜೇಗೌಡ ಕಾಂಗ್ರೆಸ್‌ಗೆ ಮತ ನೀಡುವಂತೆ ಮನವಿ ಮಾಡಿದ್ದು, ಜೆಡಿಎಸ್‌ಗೆ ದೊಡ್ಡ ಆಘಾತ ನೀಡಿರುವುದಲ್ಲದೆ, ಕಾಂಗ್ರೆಸ್‌ಗೆ ಪ್ಲಸ್‌ ಆಗಲಿದೆ. ಜೆಡಿಎಸ್‌ ಕಣದಲ್ಲಿದ್ದರೂ ಲೆಕ್ಕಕಿಲ್ಲದಂತಾಗಿದೆ. ಹೀಗಾಗಿ ಒಂದು ಕಾಲದ ಆಪ್ತರಿಬ್ಬರ ಹೋರಾಟಕ್ಕೆ ಅಖಾಡಾ ಸಿದ್ಧವಾಗಿದೆ.

ಜಾತಿ ಲೆಕ್ಕಾಚಾರ
ಲಿಂಗಾಯತರು-35,000
ಕುರುಬ-27,000
ಒಕ್ಕಲಿಗ-15,000
ಮುಸ್ಲಿಂ-20,000
ಬ್ರಾಹ್ಮಣ-5,000
ಎಸ್‌ಸಿ, ಎಸ್‌ಟಿ-50,000
ಇತರೆ-40,000

2018ರ ಫಲಿತಾಂಶ
ಸಿ.ಟಿ.ರವಿ (ಬಿಜೆಪಿ)-70,863
ಬಿ.ಎಲ್‌. ಶಂಕರ್‌ (ಕಾಂಗ್ರೆಸ್‌)-44549
ಬಿ.ಎಚ್‌. ಹರೀಶ್‌ (ಜೆಡಿಎಸ್‌)-38,317

28ಸಿಕೆಎಂ1
ಸಿ.ಟಿ.ರವಿ
28ಸಿಕೆಎಂ1ಎ
ಎಚ್‌.ಡಿ.ತಮ್ಮಯ್ಯ
28ಸಿಕೆಎಂ1ಬಿ
ಬಿ.ಎಂ.ತಿಮ್ಮಶೆಟ್ಟಿ

-ಸಂದೀಪ ಜಿ.ಎನ್‌. ಶೇಡ್ಗಾರ್‌

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.