ಮಗನಿಗೆ ತಪ್ಪಿದ ಟಿಕೆಟ್: ನಾನು ಪಕ್ಷದ ತೀರ್ಮಾನಕ್ಕೆ ಬದ್ದನೆಂದ ಕೆ.ಎಸ್.ಈಶ್ವರಪ್ಪ
Team Udayavani, Apr 20, 2023, 9:51 AM IST
ಶಿವಮೊಗ್ಗ: ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್ ಕೊನೆಗೂ ಘೋಷಣೆಯಾಗಿದೆ. ಟಿಕೆಟ್ ಆಕಾಂಷಿಯಾಗಿದ್ದ ಕೆ.ಇ.ಕಾಂತೇಶ್ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಶಿವಮೊಗ್ಗ ನಗರ ಕ್ಷೇತ್ರಕ್ಕೆ ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇದರಿಂದ ಸಹಜವಾಗಿಯೇ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬೆಂಬಲಿಗರಿಗೆ ನಿರಾಸೆಯಾಗಿದೆ.
ಈ ಬಗ್ಗೆ ಮಾತನಾಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ,ಶಿವಮೊಗ್ಗ ನಗರ ಕ್ಷೇತ್ರಕ್ಕೆ ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಪಕ್ಷದ ವರಿಷ್ಠರು ಅವರನ್ನು ಆಯ್ಕೆ ಮಾಡಿದ್ದಾರೆ. ನಾನು ಪಕ್ಷದ ತೀರ್ಮಾನಕ್ಕೆ ಬದ್ದ. ವರಿಷ್ಠರ ಆಯ್ಕೆಯನ್ನು ಯಾರು ಪ್ರಶ್ನೆ ಮಾಡುವ ಹಾಗೆ ಇಲ್ಲ. ಚೆನ್ನಬಸಪ್ಪ ಗೆಲ್ಲುವವರೆಗೂ ಸುಮ್ಮನೆ ಕೂರುವುದಿಲ್ಲ ಎಂದಿದ್ದಾರೆ.
ಇದನ್ನೂ ಓದಿ: ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಪ್ರಸಾರ: ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಬಚ್ಚನ್ ಮಗಳು
ಕಾಂತೇಶ್ ಗೆ ಮುಂದಿನ ದಿನಗಳಲ್ಲಿ ಅವನ ಕಾರ್ಯವೈಖರಿ ನೋಡಿ ಪಕ್ಷ ಸೂಕ್ತಮಾನ ಕೊಡುವ ಬಗ್ಗೆ ನಿರ್ಧಾರ ಮಾಡುತ್ತದೆ. ಇವತ್ತಿಗೆ ಇದು ಮುಗಿದು ಹೋಗಿಲ್ಲ. ಪಕ್ಷದ ನಾಯಕರು ಎಲ್ಲವನ್ನೂ ಅಳೆದು ತೂಗಿ ನಿರ್ಧಾರ ಮಾಡಿರುತ್ತಾರೆ ಎಂದರು.
ಆಯನೂರು ಮಂಜುನಾಥ್ ಜೆಡಿಎಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು,ಜೆಡಿಎಸ್ ಸಿದ್ದಾಂತ ಮೆಚ್ಚಿ ಹೋಗಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು