ಗೋಕಾಕ: ಕರದಂಟು ನಾಡಲ್ಲಿ ರಮೇಶ್‌ ಅವರಿಗೆ ಎದುರಾಳಿ ಯಾರು?


Team Udayavani, Mar 7, 2023, 6:20 AM IST

ಗೋಕಾಕ: ಕರದಂಟು ನಾಡಲ್ಲಿ ರಮೇಶ್‌ ಅವರಿಗೆ ಎದುರಾಳಿ ಯಾರು?

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಗೋಕಾಕ ಎಲ್ಲರ ಗಮನ ಸೆಳೆಯುವ ಕ್ಷೇತ್ರ. ಕಾರಣ ಇಲ್ಲಿರುವ ಜಾರಕಿಹೊಳಿ ಕುಟುಂಬದ ಪ್ರಭಾವ ಮತ್ತು ಪ್ರಾಬಲ್ಯ. 1999ರಿಂದ ಈ ಕ್ಷೇತ್ರದಲ್ಲಿ ತಮ್ಮ ಸಾಮ್ರಾಜ್ಯ ಸ್ಥಾಪಿಸಿರುವ ರಮೇಶ ಜಾರಕಿ ಹೊಳಿ ಅಂದಿನಿಂದ ಇದುವರೆಗೆ ಒಮ್ಮೆಯೂ ಹಿಂತಿರುಗಿ ನೋಡಿಲ್ಲ.

ಕಳೆದ ಚುನಾವಣೆ ಅನಂತರ ತಮ್ಮ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿದ್ದ ರಮೇಶ ಜಾರಕಿಹೊಳಿ ಒಮ್ಮೆಲೇ ರಾಷ್ಟ್ರ ರಾಜ ಕಾರಣಿಗಳು ತಮ್ಮ ಕಡೆ ತಿರುಗಿ ನೋಡುವಂತೆ ಮಾಡಿದರು. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರಕಾರ ಪತನ ಮಾಡುವುದಾಗಿ ಪಣ ತೊಟ್ಟ ರಮೇಶ ತಮ್ಮ ಹಠದಲ್ಲಿ ಯಶಸ್ವಿಯಾದರು. ಆಗಿನಿಂದ ಗೋಕಾಕ ಕ್ಷೇತ್ರ ರಾಜ್ಯದ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿತು.

ಗೋಕಾಕ ಕ್ಷೇತ್ರದಲ್ಲಿ ಜಾರಕಿಹೊಳಿ ಅವರಿಗೆ ಪಕ್ಷ ಮುಖ್ಯವಲ್ಲ. ಬದಲಾಗಿ ಪಕ್ಷಗಳಿಗೆ ಇವರು ಬಹಳ ಅಗತ್ಯ. ಇದೇ ಕಾರಣಕ್ಕೆ ಪ್ರಮುಖ ರಾಷ್ಟ್ರೀಯ ಪಕ್ಷ­ಗಳು ಇವರಿಗೆ ಜೋತು ಬಿದ್ದಿವೆ. ಜಾರಕಿ­ಹೊಳಿ­ಯವರ ಭದ್ರ ಕೋಟೆ ಭೇದಿಸಲು ಅನೇಕರು ಹಲವು ರೀತಿಯ ಕಸರತ್ತು ನಡೆಸುತ್ತಿದ್ದಾರೆ. ಆದರೆ ಅದು ಇದುವರೆಗೂ ಫಲ ಕೊಟ್ಟಿಲ್ಲ. ಇಲ್ಲಿ ಜಾತಿ ಲೆಕ್ಕಾಚಾರದ ಮಾತುಗಳು ನಡೆಯುತ್ತಿವೆ­ಯಾದರೂ ಕೊನೆಗೆ ಬರುವ ಫಲಿತಾಂಶವೇ ಬೇರೆ. ಪ್ರತೀ ಬಾರಿ ರಮೇಶ ಅವರು ಅದೃಷ್ಟ ಪರೀಕ್ಷೆಗೆ ಒಳಗಾಗುತ್ತಾರೆ. ಇಂತಹ ಸಂದರ್ಭ­ದಲ್ಲಿ ಕೆಲವರು ಜಾತಿ ಲೆಕ್ಕಾಚಾರ ಹಾಕಿ ಈ ಬಾರಿ ಜಾರಕಿಹೊಳಿ ಅವರಿಗೆ ಕಷ್ಟ ಎನ್ನುವ ಮಾತು ಆಡುತ್ತಾರೆ. ಆದರೆ ಫಲಿತಾಂಶ ಪ್ರಕಟವಾದಾಗ ಎಲ್ಲ ಲೆಕ್ಕಾಚಾರಗಳು ತಲೆಕೆಳಗಾಗಿರುತ್ತವೆ.

1999ರಿಂದ ಗೋಕಾಕ ಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ ಒಮ್ಮೆಯೂ ಆತಂಕದ ಪೈಪೋಟಿ ಎದುರಿಸಿಲ್ಲ. ಸತತ ಐದು ಬಾರಿ ಕಾಂಗ್ರೆಸ್‌ ಶಾಸಕರಾಗಿದ್ದ ರಮೇಶ ಜಾರಕಿಹೊಳಿ 2018­ರಲ್ಲಿ ಆಪರೇಷನ್‌ ಕಮಲದಿಂದ ಬಿಜೆಪಿ ಸೇರ್ಪಡೆಯಾಗಿ ಉಪ ಚುನಾವಣೆ ಎದುರಿಸಿ ಶಾಸಕರಾದರು. ಉಪಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದರೂ ರಮೇಶ ಅವರ ನಿರಾಯಾಸ ಗೆಲುವಿಗೆ ಇದು ಅಡ್ಡಿಯಾಗಲಿಲ್ಲ.

ಈಗಿನ ರಾಜಕೀಯ ಚಿತ್ರಣದಲ್ಲಿ ಗೋಕಾಕ ಕ್ಷೇತ್ರದಲ್ಲಿ ಟಿಕೆಟ್‌­ಗಾಗಿ ಕಾಂಗ್ರೆಸ್‌ ಮತ್ತು ಬಿಜೆಪಿಯಲ್ಲಿ ಪೈಪೋಟಿ ಕಾಣುತ್ತಿಲ್ಲ. ಬಿಜೆಪಿಯಿಂದ ಮತ್ತೆ ರಮೇಶ ಜಾರಕಿಹೊಳಿ ಸ್ಪರ್ಧೆ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಅಶೋಕ ಪೂಜಾರಿ ಹೆಸರು ಬಹುತೇಕ ಅಂತಿಮಗೊಂಡಿದೆ. ಜೆಡಿಎಸ್‌ನಿಂದ ಇದುವರೆಗೆ ಯಾವ ಹೆಸರೂ ಅಂತಿಮವಾಗಿಲ್ಲ. ರಮೇಶ ಜಾರಕಿಹೊಳಿ ಅವರಿಗೆ ಸಿಡಿ ಪ್ರಕರಣದಿಂದ ಇನ್ನೂ ಸಂಪೂರ್ಣ ಮುಕ್ತಿ ಸಿಕ್ಕಿಲ್ಲ. ಇದೇ ಕಾರಣದಿಂದ ಬಿಜೆಪಿ ಟಿಕೆಟ್‌ ಕೊಡಲು ಹಿಂದೇಟು ಹಾಕಿದರೆ ಆಗ ರಮೇಶ ಜಾರಕಿಹೊಳಿ ಅವರ ಪುತ್ರ ಅಮರನಾಥ ಇಲ್ಲವೇ ಅಳಿಯ ಆಂಬಿರಾವ್‌ ಅವರಿಗೆ ಟಿಕೆಟ್‌ ನೀಡಬೇಕು ಎಂಬ ಮಾತು ಕೇಳಿಬಂದಿದೆ.

ಸಹೋದರರ ಪ್ರಚಾರದ ಕುತೂಹಲ: ವಿಧಾನ ಪರಿಷತ್‌ ಸದಸ್ಯ, ಸಹೋದರ ಲಖನ್‌ ಜಾರಕಿಹೊಳಿ ರಮೇಶ ಅವರ ಬೆಂಬಲಕ್ಕೆ ನಿಂತಿದ್ದಾರೆ. ಇನ್ನೊಂದು ಕಡೆ ಮತ್ತೊಬ್ಬ ಸಹೋದರ ಸತೀಶ ಈ ಬಾರಿಯೂ ರಮೇಶ ವಿರುದ್ಧ ಪ್ರಚಾರ ಕಣಕ್ಕೆ ಇಳಿದಿದ್ದಾರೆ. ಬಾಲಚಂದ್ರ ಮತ್ತು ಲಖನ್‌ ಅವರು ರಮೇಶ ಪರ ಪ್ರಚಾರ ನಡೆಸಲಿದ್ದಾರೆ. ಈ ಸಹೋದರರ ಪ್ರಚಾರ ಪೈಪೋಟಿಯಲ್ಲಿ ಯಾರ ಕೈ ಮೇಲಾಗಲಿದೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಇದೆಲ್ಲದರ ಮಧ್ಯೆ ಈ ಬಾರಿ ಪಂಚಮಸಾಲಿ ಮೀಸಲಾತಿ ಹೋರಾಟ ತೀವ್ರಗೊಂಡಿದೆ. ಮೀಸಲಾತಿ ಹೋರಾಟಗಾರರು ಬಿಜೆಪಿ ಹಿಡಿತವಿರುವ ಕ್ಷೇತ್ರ ಗಳಲ್ಲಿಯೇ ಸಮಾವೇಶಗಳನ್ನು ಮಾಡುವ ಮೂಲಕ ರಮೇಶ ಜಾರಕಿಹೊಳಿ ಹಿಡಿತವನ್ನು ಬೇಸೆಯುವ ನಿಟ್ಟಿನಲ್ಲಿ ತಂತ್ರಗಾರಿಕೆ ರೂಪಿಸುತ್ತಿದ್ದಾರೆ. ಇದರ ಲಾಭ ತಮಗೆ ಆಗಲಿದೆ ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ನಾಯಕರಿದ್ದಾರೆ.

ಅಶೋಕ ಪೂಜಾರಿಗೆ ಸ್ವಪಕ್ಷೀಯರ ಕಾಟ
ರಮೇಶ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್‌ ಸ್ಪರ್ಧಿ ಯಾರು ಎಂಬ ಚರ್ಚೆ ನಡೆದಿರುವಾಗಲೇ ಈ ಪಕ್ಷದಲ್ಲಿ ಕೆಲ ಕಾರ್ಯಕರ್ತರು ಮೂಡಿಸುತ್ತಿರುವ ಗೊಂದಲ ಮತ್ತಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಈಗಾಗಲೇ ಟಿಕೆಟ್‌ ಖಚಿತಪಡಿಸಿಕೊಂಡೇ ಕಾಂಗ್ರೆಸ್‌ ಸೇರ್ಪಡೆಯಾಗಿ ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ ನಡೆಸಿರುವ ಅಶೋಕ ಪೂಜಾರಿ ವಿರುದ್ಧ ಕಾಂಗ್ರೆಸ್‌ನ ಕೆಲವು ಅತೃಪ್ತರು ಚುನಾವಣೆಗೆ ಮೊದಲೇ ಪೂಜಾರಿ ಅವರಿಗೆ ಸಮಸ್ಯೆ ಉಂಟು ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಅವರ ವಿರುದ್ಧ ಪ್ರಚಾರ ನಡೆಸಿದ್ದಾರೆ. ಇದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಕ್ಷೇತ್ರದ ಉಸ್ತುವಾರಿ ತೆಗೆದುಕೊಂಡಿರುವ ಸತೀಶ ಜಾರಕಿಹೊಳಿ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

-ಕೇಶವ ಆದಿ

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.