ಕ್ಷೇತ್ರದ ಜನರ ಭಾವನೆಗಳಿಗೆ ಆಡಳಿತ ರೂಪ: ವಿ.ಸುನಿಲ್‌ಕುಮಾರ್‌

ಬಿಜೆಪಿ ಅಭ್ಯರ್ಥಿ ಸುನಿಲ್‌ರಿಂದ ಜನತಾ ಪ್ರಣಾಳಿಕೆ ಬಿಡುಗಡೆ

Team Udayavani, May 9, 2023, 1:43 PM IST

ಕ್ಷೇತ್ರದ ಜನರ ಭಾವನೆಗಳಿಗೆ ಆಡಳಿತ ರೂಪ: ವಿ.ಸುನಿಲ್‌ಕುಮಾರ್‌

ಕಾರ್ಕಳ: ಕ್ಷೇತ್ರದ ಜನರ ಅಭಿಪ್ರಾಯ, ಸಲಹೆಯಂತೆ ಜನರ ಭಾವನೆಗಳನ್ನು ಆಡಳಿತ ರೂಪದಲ್ಲಿ ಕೊಡಬೇಕೆನ್ನುವ ನಿಟ್ಟಿನಲ್ಲಿ ಒಂದಷ್ಟು ಹೊಸ ಯೋಜನೆಗಳೊಂದಿಗೆ ಜನñ ಪ್ರಣಾಳಿಕೆ ಸಿದ್ಧಪಡಿಸಿ ಬಿಡುಗಡೆಗೊಳಿಸಿದ್ದೇವೆ ಎಂದು ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ.ಸುನಿಲ್‌ಕುಮಾರ್‌ ಹೇಳಿದರು.

ವಿಕಾಸ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಕ್ಷೇತ್ರದಲ್ಲಿ ಹಿಂದೆ ಮಾಡಿದ ಸಾಧನಾ ರಿಪೋರ್ಟ್‌ ಕಾರ್ಡ್‌ ಇದೆ. ಅದೇ ಆತ್ಮವಿಶ್ವಾಸದಿಂದ ಹಿಂದಿನದನ್ನು ಮುಂದುವರೆಸುತ್ತ ಮತ್ತಷ್ಟೂ ಕೊಡುಗೆ ನೀಡಿ ಮುಂದುವರೆಯಲು ಬಯಸಿದ್ದೇವೆ. ಜನತಾ ಪ್ರಣಾಳಿಕೆ ಕೇವಲ ಘೋಷಣೆ, ಭರವಸೆ ಅಲ್ಲ ಎಂದರು.

ಗೆಲುವಿನ ಹಾದಿಯ ಸನಿಹದಲ್ಲಿ
ಚುನಾಣೆಯ ಅಂತಿಮ ಹಂತಕ್ಕೆ ಬಂದಿದ್ದೇವೆ. ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ 3 ಬಾರಿ ಮತದಾರರನ್ನು ಯಶಸ್ವಿಯಾಗಿ ಭೇಟಿಯಾಗಿದ್ದಾರೆ. ಬಹಳ ದೊಡ್ಡ ಪ್ರಮಾಣದಲ್ಲಿ ಬಿಜೆಪಿ ಪರ ಒಲವಿದೆ. ಕ್ಷೇತ್ರದ ಮತದಾರರ ಅಭಿವೃದ್ಧಿಯನ್ನು ಅಪ್ಪಿಕೊಂಡಿದ್ದಾರೆ. ಕ್ಷೇತ್ರಕ್ಕೆ ಇನ್ನಷ್ಟು ಅಭಿವೃದ್ಧಿ ಹಂಬಲ ಮತದಾರರಲ್ಲಿದೆ. ಬಿಜೆಪಿಯೇ ಭರವಸೆ ಎನ್ನುವ ವಿಶ್ವಾಸ ಸಾಮಾನ್ಯ ಜನರಿಂದ ವ್ಯಕ್ತವಾಗುತ್ತಿದೆ. ದಾರಿ ಗೆಲುವಿನ ಸನಿಹಕ್ಕೆ ಸಾಗಿದೆ ಎಂದರು.

ಮತ್ತೊಮ್ಮೆ ಅವಕಾಶ ನೀಡಿ, ಸ್ವರ್ಣ ಕಾರ್ಕಳ  ತೋರಿಸುವೆ
5 ವರ್ಷಗಳ ಶಾಸಕತ್ವದ ಅವಧಿಯಲ್ಲಿ ಸ್ವರ್ಣ ಕಾರ್ಕಳ ಪರಿಕಲ್ಪನೆಯಲ್ಲಿ ಚುನಾಯಿತ ಪ್ರತಿನಿಧಿಗಳ, ಸಂಘ ಸಂಸ್ಥೆಗಳ ಸಹಕಾರದಲ್ಲಿ ಹೆಜ್ಜೆ ಇಟ್ಟಿದ್ದೇವೆ, ಸ್ವರ್ಣ ಕಾರ್ಕಳ ಮುಂದುವರೆಸುವ ಕಾರ್ಯಕ್ಕೋಸ್ಕರ ಮತದಾರರಿಗೆ ಮತ್ತೂಮ್ಮೆ ವಿನಂತಿ ಮಾಡುತ್ತ ಈ ವರೆಗೆ ಕಾರ್ಕಳದಲ್ಲಿ ಆಗಿರುವಂತಹ ಅಭಿವೃದ್ಧಿಯ ಕಾರ್ಯಕ್ರಮಗಳು ಇನ್ನಷ್ಟೂ ಮುಂದುವರೆಸುತ್ತ ಈಗಿರುವ ಕಾರ್ಯಕ್ರಮಗಳಲ್ಲಿ ವ್ಯತ್ಯಾಸವಾಗದಂತೆ ಮುಂದುವರೆಯಲು ಒಂದಿಷ್ಟು ಹೊಸ ಪ್ರಣಾಳಿಕೆಗಳನ್ನು ಕ್ಷೇತ್ರದ ಜನರ ಮುಂದೆ ವಚನ ರೂಪದಲ್ಲಿ ನೀಡಿದ್ದೇವೆ. ಮತ್ತೆ ನನಗೆ ಅವಕಾಶ ನೀಡಿದರೆ ಸ್ವರ್ಣ ಕಾರ್ಕಳ ಏನೆನ್ನುವುದನ್ನು ತೋರಿಸಿ ಕೊಡುವೆ ಎಂದು ಸುನಿಲ್‌ ಹೇಳಿದರು.

ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಪ್ರಚಾರ ಸಮಿತಿ ಅಧ್ಯಕ್ಷ ಮಹೇಶ್‌ ಶೆಟ್ಟಿ ಕುಡುಪುಲಾಜೆ, ಹಿರಿಯ ಬಿಜೆಪಿಗ ಕೆ.ಪಿ ಶೆಣೈ, ಸಾಣೂರು ನರಸಿಂಹ ಕಾಮತ್‌ ಉಪಸ್ಥಿತರಿದ್ದರು.

ಬಿಜೆಪಿಯ ಜನತಾ ಪ್ರಣಾಳಿಕೆಯಲ್ಲೇನಿದೆ?
ಕಾರ್ಕಳ, ಹೆಬ್ರಿ ರಡೂ ಕಡೆ ಪರಿಸರ ಸ್ನೇಹಿ ಕೈಗಾರಿಕಾ ಕಾರಿಡಾರ್‌, ಕ್ಷೇತ್ರದ ಎಲ್ಲ ನಿವೇಶನ ರಹಿತರಿಗೆ ನಿವೇಶನ, ಸೂರಿಲ್ಲದವರಿಗೆ ನೆರವು. ಎಲ್ಲ ಹಳ್ಳಿಗಳಲ್ಲಿ ಹಿಂದೂ ರುದ್ರಭೂಮಿ, ತಾ|ನಾದ್ಯಂತ ಭಜನಾ ಮಂಡಳಿಗಳ ಕಾರ್ಯಚಟುವಟಿಕೆಗೆ ಉತ್ತೇಜನ, ವಾಟರ್‌ ಗೇಮ್ಸ್‌ ಒಳಗೊಂಡಂತೆ ರಾಮಸಮುದ್ರವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ, ವಾಣಿಜ್ಯೋದಮ್ಯ ವೃದ್ಧಿ, ಕಾರ್ಕಳದ ಪ್ರತಿ ಗ್ರಾಮಗಳಿಗೆ ಸರಕಾರಿ ಸಾರಿಗೆ ಬಸ್‌, ಹೆಬ್ರಿಯಲ್ಲಿ ಐಟಿಐ ಕಾಲೇಜು ಸ್ಥಾಪನೆ, ಕ್ಷೇತ್ರದ ಪ್ರತಿ ಮನೆಗೆ ಕುಡಿಯುವ ನೀರಿನ ಸಂಪರ್ಕ, ಸಂಜೀವಿನಿ- ಸ್ತ್ರೀ ಶಕ್ತಿ ಸಂಘಗಳ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ, ಧಾರ್ಮಿಕ ಕೇಂದ್ರಗಳ ಜತೆ ಸತ್ಯಸಾರಮಣಿ, ಮುಗೆರ್ಕಳ ದೈವಸ್ಥಾನಗಳ ಅಭಿವೃದ್ಧಿ, ಹೆಬ್ರಿಯಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ, ಪ್ರತಿ ಗ್ರಾ.ಪಂ ಮಟ್ಟದಲ್ಲಿ ಕಿರು ಆಟದ ಮೈದಾನ ನಿರ್ಮಾಣ, ರಿಕ್ಷಾ- ಟ್ಯಾಕ್ಸಿ ಚಾಲಕರಿಗೆ ಆರೋಗ್ಯ ಭದ್ರತೆ ಒದಗಿಸಲು ಬದ್ಧನಾಗಿರುವುದಾಗಿ ಹೇಳಿದರು.

ಚುನಾವಣೆಗೋಸ್ಕರ ಬರುವ ಪಕ್ಷ ಕಾಂಗ್ರೆಸ್‌
ಅಪಪ್ರಚಾರ, ಟೀಕೆ ಕಾಂಗ್ರೆಸ್‌ ಸಂಸ್ಕೃತಿ. ಇದು ಒಳಿತಲ್ಲ. ಕಾರ್ಕಳದ ಜನತೆ ಇದನ್ನು ಒಪ್ಪುವವರಲ್ಲ. ಕಾರ್ಕಳದ ಒಳಿತು ಕಾಂಗ್ರೆಸ್ಸಿಗೆ ಬೇಕಿಲ್ಲ. ಕಾಂಗ್ರೆಸ್ಸಿನ ಎ ಮತ್ತು ಬಿ. ಟೀಂ ಕ್ಷೇತ್ರದಲ್ಲಿ ದೌರ್ಜನ್ಯ, ತೇಜೋವಧೆ, ನಿಂದನೆಗಳಲ್ಲಿ ತೊಡಗಿಸಿಕೊಂಡಿದ್ದು, ಬೆಂಬಲಿಸಿದರೆ ಅದನ್ನೆ ಕಾರ್ಕಳದಲ್ಲಿ ಮುಂದುವರೆಸುತ್ತಾರೆ. ಚುನಾವಣೆಗೋಸ್ಕರ ಬಂದಿರುವ ಕಾಂಗ್ರೆಸ್‌ ಅನ್ನು ಈ ಚುನಾವಣೆಯಲ್ಲಿ ಮತದಾರರು ತಿರಸ್ಕರಿಸಬೇಕು ಎಂದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.