ಹೈಕಮಾಂಡ್‌ಗಳ ದೂತರ ತಂತ್ರಗಾರಿಕೆ


Team Udayavani, Feb 3, 2023, 6:20 AM IST

tdy-29

ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಷ್ಟ್ರೀಯ ಪಕ್ಷಗಳ ರಾಜ್ಯ ಉಸ್ತುವಾರಿಗಳಿಗೆ ಅತೀ ಹೆಚ್ಚು ಡಿಮ್ಯಾಂಡ್‌. ಹೈಕಮಾಂಡ್‌ ಅಥವಾ ವರಿಷ್ಠರಿಂದ ನೇಮಕಗೊಂಡು ಬರುವ “ಉಸ್ತುವಾರಿ’ಗಳು ಹಾಗೂ ವೀಕ್ಷಕರು ಮುಖ್ಯಮಂತ್ರಿಗಳ ಬದಲಾವಣೆ, ರಾಜ್ಯಾಧ್ಯಕ್ಷರ ನೇಮಕ ವಿಚಾರದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದು ರಾಜ್ಯ ರಾಜಕೀಯ ಇತಿಹಾಸದಲ್ಲಿ ದಾಖಲಾಗಿದೆ.

ಪ್ಯಾನಲ್‌ಗೆ ಹೆಸರು ಸೇರ್ಪಡೆ, ಟಿಕೆಟ್‌ ನೀಡುವಿಕೆ, ಹೈಕಮಾಂಡ್‌ ಅಥವಾ ವರಿಷ್ಠರ ಮಟ್ಟದಲ್ಲಿ ಪ್ರಭಾವ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳ ಆಕಾಂಕ್ಷಿಗಳು, ಶಾಸಕರು “ಉಸ್ತುವಾರಿ’ಗಳ ಮೊರೆ ಹೋಗುತ್ತಾರೆ. ಕಾಂಗ್ರೆಸ್‌ನ ಪರಮೋಚ್ಚ ಸಿಡಬ್ಲೂಸಿ (ಕಾಂಗ್ರೆಸ್‌ ವರ್ಕಿಂಗ್‌ ಕಮಿಟಿ) ಅಥವಾ ಬಿಜೆಪಿಯ ಸಂಸದೀಯ ಮಂಡಳಿ, ಕೇಂದ್ರ ರಾಜಕೀಯ ಸಮಿತಿಯಲ್ಲಿ ಸದಸ್ಯರಾದವರು ರಾಜ್ಯ ಉಸ್ತುವಾರಿ ಆದರಂತೂ ಸ್ವಲ್ಪ “ಡಿಮ್ಯಾಂಡ್‌’ ಜಾಸ್ತಿ ಎಂದು ಹೇಳಬಹುದು.

ಏಕೆಂದರೆ ರಾಜ್ಯ ಉಸ್ತುವಾರಿ ಜತೆಗೆ ದೆಹಲಿ ಮಟ್ಟದಲ್ಲಿ ಟಿಕೆಟ್‌ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಮಿತಿಯ ಸದಸ್ಯರಾಗಿದ್ದರೆ ನೇರವಾಗಿ ಪ್ರಭಾವ ಬೀರಿ ಟಿಕೆಟ್‌ ಕೊಡಿಸುತ್ತಾರೆ ಎಂಬ ನಂಬಿಕೆ.

ಸಾಮರ್ಥ್ಯ :

ರಾಜ್ಯ “ಉಸ್ತುವಾರಿ’ ಬಹುತೇಕ ರಾಷ್ಟ್ರೀಯ ಪಕ್ಷಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳನ್ನೇ ನೇಮಿಸಲಾಗುತ್ತದೆ. ಅವರಿಗೆ ಇರುವ ಸಾಮರ್ಥ್ಯವೂ ಇಲ್ಲಿ ಪರಿಗಣನೆಗೆ ಬರುತ್ತದೆ. ರಾಜ್ಯದ  ಎಲ್ಲ ವಿಧಾನಸಭೆ ಕ್ಷೇತ್ರಗಳ ಬಗ್ಗೆ ಮತ್ತು ಅಲ್ಲಿನ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ನಡೆಸುವುದು. ಚುನಾವಣೆ ಸಂದರ್ಭದಲ್ಲಿ ಬ್ಲಾಕ್‌, ಜಿಲ್ಲಾ, ರಾಜ್ಯ ಸಮಿತಿ ಶಿಫಾರಸು ಮಾಡಿದ್ದರೂ ಒಮ್ಮೆ ರಾಜ್ಯ ಉಸ್ತುವಾರಿ ಗಮನಕ್ಕೂ ಪಟ್ಟಿ ಬರುತ್ತದೆ. ಸ್ಥಳೀಯ ಮಟ್ಟದಲ್ಲಿನ ಗುಂಪುಗಾರಿಕೆ, ಗೊಂದಲ ಇವರ ಗಮನಕ್ಕೂ ಇರುವುದರಿಂದ ಸಣ್ಣಪುಟ್ಟ ಬದಲಾವಣೆಗೂ ಅವಕಾಶ ಇರುತ್ತದೆ. ರಾಜ್ಯ ಉಸ್ತುವಾರಿಗಳು ತಮ್ಮ ಪಕ್ಷ ಅಧಿಕಾರದಲ್ಲಿದ್ದರೆ ಮುಖ್ಯಮಂತ್ರಿ ಹಾಗೂ ಸಚಿವರ ಕಾರ್ಯವೈಖರಿ, ಶಾಸಕರ ಸಾಧನೆ ಮತ್ತಿತರ ವಿಚಾರಗಳ ಬಗ್ಗೆಯೂ ಮೌಲ್ಯಮಾಪನ ಮಾಡುವುದೂ ಇದೆ. ಇದರ ಆಧಾರದ ಮೇಲೆ ಕಾಲ ಕಾಲಕ್ಕೆ ಕೆಲವೊಂದು ಸಲಹೆ-ಸೂಚನೆ ಜತೆಗೆ ಸಂದೇಶ ರವಾನೆಯಾಗುತ್ತದೆ.

ಜನತಾ ಪಕ್ಷ  :

ರಾಜ್ಯದಲ್ಲಿ ಮೊದಲಿನಿಂದಲೂ ಕಾಂಗ್ರೆಸ್‌ ಮತ್ತು ಬಿಜೆಪಿಯಲ್ಲಿ ರಾಜ್ಯ ಉಸ್ತುವಾರಿಗಳ ನೇಮಕ ಸಂಪ್ರದಾಯ ಇದೆಯಾದರೂ ಜನತಾಪಕ್ಷ, ಜನತಾದಳದಲ್ಲಿ ಇರಲಿಲ್ಲ. ಆದರೆ ರಾಜ್ಯದಲ್ಲಿ ಜನತಾಪಕ್ಷ, ಜನತಾದಳ ಆಡಳಿತದಲ್ಲಿದ್ದಾಗ ದೆಹಲಿಯಿಂದ ವೀಕ್ಷಕರಾಗಿ ಹಿರಿಯ ನಾಯಕರು ಆಗಮಿಸುತ್ತಿದ್ದರು. 1983ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಎಚ್‌.ಡಿ.ದೇವೇಗೌಡ, ಎಸ್‌.ಬಂಗಾರಪ್ಪ, ಎಸ್‌.ಆರ್‌.ಬೊಮ್ಮಾಯಿ, ರಾಚಯ್ಯ ಅವರಂತಹ ಘಟಾನುಘಟಿಗಳ ಹೆಸರು ಇದ್ದಾಗ ಕೇಂದ್ರದಿಂದ ವೀಕ್ಷಕರಾಗಿ ಬಂದಿದ್ದ ಬಿಜು ಪಟ್ನಾಯಕ್‌, ಮಧು ದಂಡವತೆ ಅವರು ರಾಮಕೃಷ್ಣ ಹೆಗಡೆ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದ್ದರು.

ಆಗ ಜನತಾಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಚಂದ್ರಶೇಖರ್‌ ಅವರ ಪ್ರತಿನಿಧಿಯಾಗಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಮಕೃಷ್ಣ ಹೆಗಡೆ ಅವರೂ ವೀಕ್ಷಕರಾಗಿಯೇ ಬಂದಿದ್ದರು. ಆದರೆ ಮೂವರ ನಡುವೆ ಸ್ಪರ್ಧೆಯಲ್ಲೇ ಇರದಿದ್ದ ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದರು. ರಾಮಕೃಷ್ಣ ಹೆಗಡೆ ಅವರಿಗೆ ರಾಷ್ಟ್ರೀಯ ಮಟ್ಟದಲ್ಲಿದ್ದ ಸಂಪರ್ಕ, ವೀಕ್ಷಕರಾಗಿ ಬಂದಿದ್ದವರ ಜತೆಗಿದ್ದ ಸ್ನೇಹವೂ ಆಗ ಪೂರಕವಾಯಿತು ಎಂಬ ಮಾತುಗಳೂ ಇವೆ. ಜೆ.ಎಚ್‌. ಪಟೇಲ್‌ ಅವರು ಮುಖ್ಯಮಂತ್ರಿಯಾಗಿದ್ದಾಗ ಏನೇ ಸಮಸ್ಯೆ ಎದುರಾದರೂ ಶರದ್‌ ಯಾದವ್‌ ಸಂಧಾನಕಾರರಾಗಿ ಬರುತ್ತಿದ್ದರು.

ಶೋ ಮ್ಯಾನ್‌  :

ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಪಕ್ಷದ ಅಧಿಕಾರ ಇದ್ದಾಗ ರಾಜ್ಯ ಉಸ್ತುವಾರಿಗಳಿಗೆ ಕೆಲಸ ಕಡಿಮೆ. ಏಕೆಂದರೆ ಪ್ರಧಾನಿ ಹಾಗೂ ರಾಷ್ಟ್ರೀಯ ಅಧ್ಯಕ್ಷರು ಮುಖ್ಯಮಂತ್ರಿ ಬದಲಾವಣೆ ಸೇರಿ ಹಲವು ತೀರ್ಮಾನ ದಿಢೀರ್‌ ಆಗಿ ತೆಗೆದುಕೊಳ್ಳುವುದೂ ಉಂಟು. ಕೇಂದ್ರದಲ್ಲಿ ಅಧಿಕಾರದಲ್ಲಿ ಇಲ್ಲದಿದ್ದರೆ ಯಾವುದೇ ತೀರ್ಮಾನ ರಾಜ್ಯ ನಾಯಕರ ಮಟ್ಟದಲ್ಲಿ ಸಮಾಲೋಚನೆ ನಂತರವೇ ಆಗಲಿದೆ.  ಇನ್ನು ರಾಜ್ಯದಲ್ಲಿ ಪ್ರಬಲ ನಾಯಕರು ಇದ್ದಾಗ “ಉಸ್ತುವಾರಿ’ಗಳು ಶೋ ಮ್ಯಾನ್‌ ಅಷ್ಟೇ. ಉದಾಹರಣೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನೇರವಾಗಿ ಸೋನಿಯಾಗಾಂಧಿ, ರಾಹುಲ್‌ಗಾಂಧಿ ಅವರ ಸಂಪರ್ಕದಲ್ಲಿದ್ದರು. ಆಗ ಇಲ್ಲಿ ಕೆ.ಸಿ.ವೇಣುಗೋಪಾಲ್‌ ಉಸ್ತುವಾರಿಯಾಗಿದ್ದರೂ ಸಲಹೆಗಷ್ಟೇ ಸೀಮಿತ. ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಅರುಣ್‌ಸಿಂಗ್‌ ಉಸ್ತುವಾರಿ ಆಗಿದ್ದರಾದರೂ ಯಡಿಯೂರಪ್ಪ ತೀರ್ಮಾನ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಅಷ್ಟೇ ಅಲ್ಲ ರಾಜ್ಯದಲ್ಲಿ ಅನಂತಕುಮಾರ್‌ ಕೇಂದ್ರ ಸಚಿವರಾ ಗಿದ್ದಾಗಲೂ ರಾಜ್ಯ ಉಸ್ತುವಾರಿಗಳಿಗೆ ಹೆಚ್ಚು ಕೆಲಸ ಇರುತ್ತಿರಲಿಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಾರೆ.

ಕಾಂಗ್ರೆಸ್‌:

70-80ರ ದಶಕದಲ್ಲಿ ರಾಷ್ಟ್ರೀಯ ಕಾಂಗ್ರೆಸ್‌ನಲ್ಲಿ ಹಿಡಿತ ಹೊಂದಿದ್ದ ಮೋತಿಲಾಲ್‌ ವೋರಾ, ಎಂ.ಎಲ್‌. ಪೋತೇದಾರ್‌, ಕರುಣಾಕರನ್‌ ರಾಜ್ಯದ ಮುಖ್ಯಮಂತ್ರಿ ಯಾರಾಗಬೇಕು ಎಂಬ ಮಟ್ಟಿಗೆ ನಿರ್ಧಾರ ಮಾಡುವ “ಶಕ್ತಿ’ ಹೊಂದಿದ್ದರು. ದೇವರಾಜ ಅರಸು ಎರಡನೇ ಬಾರಿ, ಗುಂಡೂರಾವ್‌, ಬಂಗಾರಪ್ಪ, ವೀರಪ್ಪ ಮೊಲಿ ಮೊದಲ ಬಾರಿ ಮುಖ್ಯಮಂತ್ರಿಗಳಾಗಲು ಉಸ್ತುವಾರಿಗಳ ಕೃಪೆ ಇತ್ತು  ಎಂದು ಹಿರಿಯ ಕಾಂಗ್ರೆಸ್ಸಿಗರು ನೆನಪಿಸಿಕೊಳ್ಳುತ್ತಾರೆ.

ಕಾಂಗ್ರೆಸ್‌ನಲ್ಲಿ ಗುಲಾಂ ನಬಿ ಆಜಾದ್‌, ಎ.ಕೆ.ಆ್ಯಂಟನಿ, ದಿಗ್ವಿಜಯ್‌ಸಿಂಗ್‌, ಪೃಥ್ವಿರಾಜ್‌ ಚೌಹಾಣ್‌, ವಯಲಾರ್‌ ರವಿ, ಕೆ.ಸಿ.ವೇಣುಗೋಪಾಲ್‌ ರಾಜ್ಯ ಉಸ್ತುವಾರಿಗಳಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ರಣದೀಪ್‌ ಸಿಂಗ್‌ ಸುಜೇìವಾಲಾ ರಾಜ್ಯ ಉಸ್ತುವಾರಿಯಾಗಿದ್ದಾರೆ.

2018ರಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದಿದ್ದಾಗ ಕಾಂಗ್ರೆಸ್‌ನಲ್ಲಿ ರಾಜ್ಯ ಉಸ್ತುವಾರಿಯಾಗಿ ಕೆ.ಸಿ.ವೇಣುಗೋಪಾಲ್‌ ಇದ್ದರೂ ಎಐಸಿಸಿಯಿಂದ ಗುಲಾಂ ನಬಿ ಆಜಾದ್‌ ಅವರನ್ನು ವೀಕ್ಷಕ ಜತೆಗೆ ಸಮನ್ವಯಕಾರರನ್ನಾಗಿ ಕಳುಹಿಸಲಾಯಿತು. ಮಲ್ಲಿಕಾರ್ಜುನ ಖರ್ಗೆ ಅವರ ಜತೆಗೂಡಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಜತೆ ಮಾತುಕತೆ ನಡೆಸಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರ ರಚನೆ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಇದೇ ರೀತಿ 2004ರಲ್ಲಿಯೂ ಎಸ್‌.ಎಂ.ಕೃಷ್ಣ ಮುಖ್ಯಮಂತ್ರಿಯಾಗಿ ಚುನಾವಣೆಗೆ ಹೋದಾಗ ಕಾಂಗ್ರೆಸ್‌ಗೆ ಮತ್ತೆ ಬಹುಮತ ಬರದೆ ಜೆಡಿಎಸ್‌ ಜತೆ ಸೇರಿ ಸಮ್ಮಿಶ್ರ ಸರಕಾರ ರಚನೆ ಮಾಡಬೇಕಾದಾಗಲೂ ರಾಜ್ಯ ಉಸ್ತುವಾರಿ ಬಿಟ್ಟು ಕಾಂಗ್ರೆಸ್‌ ಹೈಕಮಾಂಡ್‌ ಬೇರೊಬ್ಬರಿಗೆ ಹೊಣೆಗಾರಿಕೆ ನೀಡಲಾಗಿತ್ತು. ಆಗ ಧರ್ಮಸಿಂಗ್‌ ಮುಖ್ಯಮಂತ್ರಿಯಾದರು. 2013ರಲ್ಲಿ ಕಾಂಗ್ರೆಸ್‌ಗೆ ಬಹುಮತ ಬಂದಾಗ ದಿಗ್ವಿಜಯ್‌ಸಿಂಗ್‌ ರಾಜ್ಯ ಉಸ್ತುವಾರಿಯಾದರೂ ಎ.ಕೆ.ಆ್ಯಂಟನಿ ವೀಕ್ಷಕರಾಗಿದ್ದªರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು.

ಬಿಜೆಪಿ :

ಬಿಜೆಪಿಯ ಅರುಣ್‌ ಜೇಟ್ಲಿ ಚುನಾವಣ ತಂತ್ರಗಾರಿಕೆಯಲ್ಲಿ ಎತ್ತಿದ ಕೈ. ಅವರು ರಾಜ್ಯ ಉಸ್ತುವಾರಿಯಾಗಿ ದೆಹಲಿಯಿಂದ ಬರುವ ಮುನ್ನ ರಾಜ್ಯದ 224 ಕ್ಷೇತ್ರಗಳ ಸಮುದಾಯವಾರು ಸ್ಥಿತಿಗತಿಗಳ ಡೇಟಾ ಸಹಿತ ಬರುತ್ತಿದ್ದರು. 2008ರಲ್ಲಿ ಕುಮಾರಸ್ವಾಮಿ -ಯಡಿಯೂರಪ್ಪ ನೇತೃತ್ವದಲ್ಲಿ ಸಮ್ಮಿಶ್ರ ಸರಕಾರ ರಚನೆ ಹಿಂದಿನ ರೂವಾರಿ ಅರುಣ್‌ಜೇಟ್ಲಿ. ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎದುರಾಗಬಹುದಾದ ಕಾನೂನಾತ್ಮಕ ಹಾಗೂ ಇತರೆ ತಾಂತ್ರಿಕ ಸಮಸ್ಯೆಗಳ ಬಗ್ಗೆ ಮೊದಲೇ ಅಧ್ಯಯನ ನಡೆಸಿ ಸೂಕ್ತ ಪರಿ ಹಾರದೊಂದಿಗೆ ಆಗಮಿಸುತ್ತಿದ್ದದ್ದು ಅವರ ವಿಶೇಷತೆ.

ಅದೇ ರೀತಿ ಸುಷ್ಮಾ ಸ್ವರಾಜ್‌ ಅವರು ಸಹ ಕರ್ನಾಟಕದ ರಾಜಕೀಯ ಪಲ್ಸ್‌ ಅರಿತಿದ್ದರು. ಬಳ್ಳಾರಿ ಗಣಿ ರೆಡ್ಡಿ ಸಹೋದರರು ಹಾಗೂ ಶ್ರೀರಾಮುಲು ಅವರ ಮೇಲೆ ಹಿಡಿತ ಹೊಂದಿದ್ದರು. ಒಮ್ಮೆ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಜನಾರ್ದನರೆಡ್ಡಿ ಸಹೋದರರು ಮುನಿಸಿಕೊಂಡು, ಕೆಲವು ಶಾಸಕರು ಹೈದರಾಬಾದ್‌ ಪ್ರವಾಸಕ್ಕೆ ಹೋದಾಗ ಸಂಧಾನ ಮಾತುಕತೆ ನಡೆದಿದ್ದು ಸುಷ್ಮಾ ಸ್ವರಾಜ್‌ ಸಮ್ಮುಖದಲ್ಲಿ. ಸುಷ್ಮಾ ಅವರು ರಾಜ್ಯದ ಎಲ್ಲ ನಾಯಕರ ಜತೆ ಉತ್ತಮ ಸಂಬಂಧ ಹೊಂದಿದ್ದರು. ಅವರ ಮಾತಿಗೆ ಹಿರಿಯ ನಾಯಕರು ವಿರೋಧ ವ್ಯಕ್ತಪಡಿ ಸುತ್ತಿರಲಿಲ್ಲ. ಬಳ್ಳಾರಿಗೆ ಪ್ರತೀ ವರ್ಷ ವರಮಹಾಲಕ್ಷ್ಮಿ ಹಬ್ಬಕ್ಕೆ ಬರು ವ ಮೂಲಕ ಆ ಭಾಗದಲ್ಲಿ ಒಂದು ರೀತಿಯ ಮನೆ ಮಗಳಂತೆಯೇ ಆಗಿದ್ದರು. ಇನ್ನು ರಾಜನಾಥ್‌ ಸಿಂಗ್‌, ಧರ್ಮೇಂದ್ರ ಪ್ರಧಾನ್‌, ಅರುಣ್‌ ಸಿಂಗ್‌ ಅವರೂ ರಾಜ್ಯ ಉಸ್ತುವಾರಿಗಳಾಗಿ ಕೆಲಸ ಮಾಡಿ ರಾಜಕೀಯ ತಂತ್ರಗಾರಿಕೆಯಲ್ಲಿ ತಮ್ಮದೇ ಆದ ಪಾತ್ರ ವಹಿಸಿದ್ದಾರೆ.

-ಎಸ್‌.ಲಕ್ಷ್ಮೀ ನಾರಾಯಣ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.