ಕಾಂಗ್ರೆಸ್ ಪರ ಮತ ಪ್ರಚಾರ ಮಾಡಿದ ಎಚ್.ಡಿ.ಕೆ ಪರಮಾಪ್ತ ಭೋಜೇಗೌಡ: ವಿಡಿಯೋ ವೈರಲ್
Team Udayavani, May 1, 2023, 12:57 PM IST
ಚಿಕ್ಕಮಗಳೂರು: ಕಾಂಗ್ರೆಸ್ ಪರ ಎಚ್.ಡಿ. ಕುಮಾರಸ್ವಾಮಿ ಪರಮಾಪ್ತ ಜೆಡಿಎಸ್ ಎಂ.ಎಲ್.ಸಿ ಆಗಿರುವ ಎಸ್.ಎಲ್. ಭೋಜೇಗೌಡ ಅವರು ಬಹಿರಂಗ ಪ್ರಚಾರ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಜೆಡಿಎಸ್ ಎಂ.ಎಲ್.ಸಿ. ಎಸ್.ಎಲ್. ಭೋಜೇಗೌಡ ಕಾಂಗ್ರೆಸ್ ಪರ ಬಹಿರಂಗ ಪ್ರಚಾರದಲ್ಲಿ ಭಾಗಿಯಾಗಿದ್ದು, ಸಿಟಿ ರವಿ ವಿರುದ್ದ ಹರಿಹಾಯ್ದಿದ್ದಾರೆ.
ಗ್ರಾಮದ ದೇವರಕಟ್ಟೆ ಮುಂದೆ ಕೂತು ಮತ ಪ್ರಚಾರ ಮಾಡಿರುವ ಅವರು, “ಶಾಸಕ ಸಿ.ಟಿ. ರವಿ ಸೋಲಿಸಲು ನೀವೆಲ್ಲ ಕಾಂಗ್ರೆಸ್ ಗೆ ಮತ ಹಾಕಿ. ಸಿದ್ದರಾಮಯ್ಯನವರನ್ನು ಸಿದ್ರಾಮುಲ್ಲಾಖಾನ್ ಎನ್ನುತ್ತಾರೆ. ದೇವೇಗೌಡರನ್ನು ಮುಂದಿನ ಜನ್ಮದಲ್ಲಿ ಸಾಬರಾಗಿ ಹುಟ್ಟಿ ಅಂತಾರೆ ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ಬಗ್ಗೆ ಮಾತನಾಡುತ್ತಾ ಇಷ್ಟುದ್ದ ಬೆಳೆದವನನ್ನ ನೀವು ಕಟ್ ಮಾಡಬೇಕು ಎಂದು ನೆರೆದಿದ್ದ ಕೈ ಕಾರ್ಯಕರ್ತರಿಗೆ ಹೇಳಿದರು.
ನೀವು ಹಾಲುಮತದ ಕುಟುಂಬದಲ್ಲಿ ಹುಟ್ಟಿದರೆ ಸಿದ್ದರಾಮಯ್ಯನಿಗೆ ಅವಮಾನ ಮಾಡಿದವನಿಗೆ ಬುದ್ಧಿ ಕಲಿಸಿ. ಹಾಲುಮತದ ಕುಟುಂಬದಲ್ಲಿ ನೀವೆಲ್ಲ ಹುಟ್ಟಿದ್ರೆ ಸಿದ್ದರಾಮಯ್ಯನವರ ಗೌರವ ಉಳಿಸಿ. ಇಲ್ಲದಿದ್ರೆ ನೀವು ಆ ಕುಟುಂಬದಲ್ಲಿ ಹುಟ್ಟೇ ಇಲ್ಲ ಎಂದರು.
ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಸಮೀಪದ ಚಿಕ್ಕಗೌಜ ಗ್ರಾಮದ ಗ್ರಾಮಸ್ಥರ ಜೊತೆಗೆ ಭೋಜೇಗೌಡ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ