Kalaburagi: ನಾಮಪತ್ರ ಸಲ್ಲಿಸಲೂ ಸಹೋದರರ ಪೈಪೋಟಿ!
Team Udayavani, Apr 13, 2023, 6:16 PM IST
ಕಲಬುರಗಿ: ಜಿಲ್ಲೆಯ ಅಫಜಲಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಟಿಕೆಟ್ ಗಾಗಿ ಸಹೋದರ ನಡುವೆ ಬಿಗ್ ಫೈಟ್ ಏರ್ಪಡಿದ್ದನ್ನು ನೋಡಿದ್ದೇವೆ. ಆದರೆ ನಾಮಪತ್ರ ಸಲ್ಲಿಸಲು ಪೈಪೋಟಿ ಏರ್ಪಟ್ಟಿದೆ.
ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ ನಾಮಪತ್ರ ಸಲ್ಲಿಕೆಯ ಆರಂಭ ದಿನವಾದ ಏ. 13 ರಂದು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಟಿಕೆಟ್ ವಂಚಿತರಾದ ಮಾಲೀಕಯ್ಯ ಗುತ್ತೇದಾರ ಕಿರಿಯ ಸಹೋದರ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ನಿತೀನ ಗುತ್ತೇದಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಇಬ್ಬರೂ ಸಹೋದರರು ಪೈಪೋಟಿ ಎನ್ನುವಂತೆ ಮೆರವಣಿಗೆ ಮೂಲಕ ಆಗಮಿಸಿ ಐವರು ಕಾಯಕರ್ತರೊಂದಿಗೆ ಚುನಾವಣಾಧಿಕಾರಿಗಳಿಗೆ ತಮ್ಮ ಉಮೇದುಗಾರಿಕೆ ಸಲ್ಲಿಸಿದರು.
ಟಿಕೆಟ್ ಪಡೆಯಲು ವರಿಷ್ಠರು ಮೇಲೆ ಒತ್ತಡ ಹಾಕಲು ಏಕಕಾಲಕ್ಕೆ ನವದೆಹಲಿಗೆ ತೆರಳಿದ್ದ ಸಹೋದರರು, ಟಿಕೆಟ್ ಪ್ರಕಟವಾದ ನಂತರ ಒಂದೇ ವಿಮಾನದಲ್ಲಿ ಕಲಬುರಗಿಗೆ ಬಂದಿಳಿದ ಸಹೋದರರು ಸ್ಪರ್ಧೆ ಖಚಿತ ಎಂದು ನಿತೀನ ಗುತ್ತೇದಾರ ಹೇಳಿದ್ದರೆ ಮಾಲೀಕಯ್ಯ ಗುತ್ತೇದಾರ ಸ್ಪರ್ಧಿದಂತೆ ಮನವೋಲಿಸುತ್ತೇನೆ ಎಂದಿದ್ದರು. ನಾಮಪತ್ರ ಸಲ್ಲಿಕೆ ನಂತರವೂ ಇಬ್ಬರೂ ತಮ್ಮದೇ ಹೇಳಿಕೆ ಪುನರುಚ್ಚರಿಸಿದರು. ಒಟ್ಟಾರೆ ಸಹೋದರರ ಸವಾಲ್ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆಯುತ್ತದೆ ಎಂಬುದು ಕಾದು ನೋಡಬೇಕಷ್ಟೇ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್