ಕನಕಪುರ: ವಿಧಾನಸಭೆ ರಣಕಣದಲ್ಲಿ ಡಿಕೆಶಿಗೆ ಎದುರಾಳಿ ಯಾರು?


Team Udayavani, Mar 14, 2023, 6:30 AM IST

ಕನಕಪುರ: ವಿಧಾನಸಭೆ ರಣಕಣದಲ್ಲಿ ಡಿಕೆಶಿಗೆ ಎದುರಾಳಿ ಯಾರು?

ಕನಕಪುರ: ವಿಧಾನಸಭಾ ಚುನಾವಣಾ ರಣಕಣ ಹತ್ತಿರವಾಗುತ್ತಿದ್ದರೂ, ತಾಲೂಕಿನಲ್ಲಿ ಜೆಡಿಎಸ್‌ ಬಿಜೆಪಿ ಎರಡು ಪಕ್ಷಗಳಲ್ಲಿ ಅಭ್ಯರ್ಥಿ ಘೋಷಣೆಯಾಗದೇ ಇರುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ಎದುರಾಳಿ ಯಾರು ಎಂಬ ಕುತೂಹಲ ಸಾರ್ವಜನಿಕರಲ್ಲಿ ಮೂಡಿಸಿದೆ.

ಸದ್ಯದಲ್ಲೇ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಮೂರು ಪಕ್ಷಗಳಲ್ಲಿ ಸಂಭಾವ್ಯ ಅಭ್ಯರ್ಥಿ ಮತ್ತು ಘೋಷಿತ ಅಭ್ಯರ್ಥಿಗಳು ಕ್ಷೇತ್ರ ಪರ್ಯಟನೆ ಮಾಡಿ ಚುನಾವಣೆಗೆ ತಯಾರಿ ನಡೆಸಿದ್ದಾರೆ. ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಆದರೆ, ಚುನಾವಣಾ ಹತ್ತಿರವಾಗುತ್ತಿದ್ದರೂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಎದುರಾಳಿ ಅಭ್ಯರ್ಥಿ ಘೋಷಣೆ ಮಾಡದೇ ಜೆಡಿಎಸ್‌ ಮತ್ತು ಬಿಜೆಪಿ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದಾರೆ ಎಂಬ ವ್ಯಾಖ್ಯಾನ ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿವೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಭದ್ರಕೋಟೆಯಾಗಿರುವ ಕನಕಪುರ ತಾಲೂಕಿನಲ್ಲಿ ಈ ಹಿಂದೆ ಸಾತನೂರು ವಿಧಾನಸಭಾ ಕ್ಷೇತ್ರವಾಗಿತ್ತು. 1978ರಿಂದ 1985 ರವರೆಗೂ ಜನತಾ ಪಕ್ಷದಿಂದ ಶಿವಲಿಂಗೇಗೌಡರು, ದೇವೇಗೌಡರು, ಕೆ.ಜಿ.ಶ್ರೀನಿವಾಸ್‌ ಮೂರ್ತಿ ಶಾಸಕರಾಗಿ ಆಯ್ಕೆಯಾಗಿದ್ದರು. 1989ರಲ್ಲಿ ಜನತಾ ಪಕ್ಷದ ಯು.ಕೆ.ಸ್ವಾಮಿ ವಿರುದ್ಧ ಕಾಂಗ್ರೆಸ್‌ ಪಕ್ಷದಿಂದ ಡಿ.ಕೆ.ಶಿವಕುಮಾರ್‌ ಗೆದ್ದು ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದ ಡಿಕೆಶಿ ಓಟ ನಿಲ್ಲಲ್ಲೇ ಇಲ್ಲ. 2008ರಲ್ಲಿ ಸಾತನೂರು ವಿಧಾನಸಭಾ ಕ್ಷೇತ್ರ ಕನಕಪುರ ಕ್ಷೇತ್ರದೊಂದಿಗೆ ವೀಲಿನವಾದ ನಂತರವೂ ಕನಕಪುರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ 7 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಪಿಜಿಆರ್‌ ಸಿಂಧ್ಯಾ ಅವರ ಓಟಕ್ಕೆ ಬ್ರೇಕ್‌ ಹಾಕಿದ್ದ ಡಿಕೆಶಿ, ಸತತವಾಗಿ ಏಳು 7 ಬಾರಿ ಶಾಸಕರಾಗಿ ಆಯ್ಕೆಯಾಗಿ ಕನಕಪುರ ಕ್ಷೇತ್ರವನ್ನು ತನ್ನ ಭದ್ರಕೋಟೆಯನ್ನಾಗಿ ಮಾಡಿಕೊಂಡಿದ್ದಾರೆ.

ಪ್ರಬಲ ಎದುರಾಳಿಗಳೇ ಇಲ್ಲ: ಸಾತನೂರು ವಿಧಾನಸಭಾ ಕ್ಷೇತ್ರ 2008ರಲ್ಲಿ ವಿಲೀನವಾದ ನಂತರ ಡಿ.ಕೆ.ಶಿವಕುಮಾರ್‌ ವಿರುದ್ಧ ಜೆಡಿಎಸ್‌ನಿಂದ ಸ್ಪರ್ಧೆಗಿಳಿದ ಧೂಂತೂರು ವಿಶ್ವನಾಥ್‌ ಕೇವಲ 7 ಸಾವಿರ ಮತಗಳ ಅಂತರದಲ್ಲಿ ಸೋಲೊಪ್ಪಿಕೊಂಡರು. 2013ರಲ್ಲಿ ಡಿಕೆಶಿ ವಿರುದ್ಧ ಪಿಜಿಆರ್‌ ಸಿಂಧ್ಯಾ ಸೋತಿದ್ದರು. ಕಳೆದ ನಾಲ್ಕು ದಶಕಗಳಿಂದಲೂ ತಾಲೂಕಿನಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ಗೆ ನೇರ ಸ್ಪರ್ಧೆ ನಡೆದಿದೆ. ಡಿಕೆಶಿಗೆ ಜೆಡಿಎಸ್‌ನಿಂದ ಪ್ರಬಲ ಸ್ಪರ್ಧಿಯಾಗಿದ್ದ ಧೂಂತೂರು ವಿಶ್ವನಾಥ್‌, ಪಕ್ಷದ ಆಂತರಿಕ ವಿಚಾರಗಳಿಗೆ ವರಿಷ್ಠರ ವಿರುದ್ಧ ಮುನಿಸಿಕೊಂಡ ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದರು. ಈ ಅವಕಾಶವನ್ನು ಬಳಸಿಕೊಂಡ ಡಿ.ಕೆ. ಶಿವಕುಮಾರ್‌ ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದ ಧೂಂತೂರು ವಿಶ್ವನಾಥ್‌ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಂಡು ಕ್ಷೇತ್ರದಲ್ಲಿ ತನ್ನ ವಿರುದ್ಧ ಸ್ಪರ್ಧಿಸಲು ಪ್ರಬಲ ಎದುರಾಳಿಗಳೇ ಇಲ್ಲದಂತೆ ಮಾಡಿಕೊಂಡಿದ್ದಾರೆ.

ಡಿಕೆಶಿ ವಿರುದ್ಧ ಪ್ರಬಲ ಸ್ಪರ್ಧೆ ಅಸಾಧ್ಯ: ಜೆಡಿಎಸ್‌ನಿಂದ ಹಲವು ಆಕಾಂಕ್ಷಿಗಳಿದ್ದಾರೆ. ತಾಲೂಕು ಅಧ್ಯಕ್ಷ ಬಿ.ನಾಗರಾಜು, ನಲ್ಲಹಳ್ಳಿ ಶಿವಕುಮಾರ್‌ ಸೇರಿ ಹಲವು ಆಕಾಂಕ್ಷಿಗಳಿದ್ದಾರೆ. ನಲ್ಲಹಳ್ಳಿ ಶಿವಕುಮಾರ್‌ ಅವರ ತಂದೆ ಶಿವಣ್ಣೆಗೌಡರು, ದೇವೇಗೌಡರ ಒಡನಾಟದಲ್ಲಿದ್ದರು. ದೇವೇಗೌಡರ ಗೆಲುವಿಗೂ ಶ್ರಮಿಸಿದ್ದಾರೆ. ಪಕ್ಷಕ್ಕಾಗಿ ಹಲವಾರು ವರ್ಷ ದುಡಿದಿದ್ದಾರೆ. ಅವರ ನಂತರ ಅವರ ಮಗ ನಲ್ಲಹಳ್ಳಿ ಶಿವಕುಮಾರ್‌ ಪಕ್ಷಕ್ಕಾಗಿ ದುಡಿದಿದ್ದಾರೆ. ಜೆಡಿಎಸ್‌ನಲ್ಲಿರುವ ಕೆಲವು ಆಕಾಂಕ್ಷಿಗಳು ಡಿ.ಕೆ. ಶಿವಕುಮಾರ್‌ ಅವರೊಂದಿಗೆ ವಿಶ್ವಾಸದಿಂದ ಇದ್ದಾರೆ. ಅವರಿಗೆ ಟಿಕೆಟ್‌ ಕೊಟ್ಟರೆ ಡಿ.ಕೆ. ಶಿವಕುಮಾರ್‌ ವಿರುದ್ಧ ಪ್ರಬಲ ಸ್ಪರ್ಧೆ ಅಸಾಧ್ಯ. ಹಾಗಾಗಿ ನಲಹಳ್ಳಿ ಶಿವಕುಮಾರ್‌ ಅವರಿಗೆ ಟಿಕೆಟ್‌ ಕೊಡಬೇಕು, ಇಲ್ಲದಿದ್ದರೆ ಅನಿತಾ ಕುಮಾರಸ್ವಾಮಿ ಅವರನ್ನು ತಾಲೂಕಿನಲ್ಲಿ ಕಣಕ್ಕಿಳಿಸಬೇಕು ಎಂಬುದು ಜೆಡಿಎಸ್‌ ಕೆಲವು ಮುಖಂಡರ ಒತ್ತಾಯವಾಗಿದೆ.

ಸಂಘಟನೆಯಲ್ಲಿ ಬಿಜೆಪಿ ಹಿಂದೆ ಬಿದ್ದಿಲ್ಲ
ತಾಲೂಕಿನಲ್ಲಿ ಬಿಜೆಪಿಯಲ್ಲಿ ಬಣಗಳು ಇದ್ದರೂ, ಪಕ್ಷ ಸಂಘಟನೆಯಲ್ಲಿ ಹಿಂದೆ ಬಿದ್ದಿಲ್ಲ. ಬೂತ್‌ ಅಭಿಯಾನ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮಗಳ ಮೂಲಕ ಸಕ್ರಿಯವಾಗಿ ಪಕ್ಷ ಸಂಘಟನೆ ಮಾಡಿ ತಾಲೂಕಿನಲ್ಲಿ ಬಿಜೆಪಿ ಪಕ್ಷವನ್ನು ಬಲ ಪಡಿಸಿದ್ದಾರೆ. ಬಿಜೆಪಿಯಿಂದ ಕಳೆದ ಬಾರಿ ನಂದಿನಿ ಗೌಡ ಸ್ಪರ್ಧಿಸಿದ್ದರು. ಈ ಬಾರಿ ಬಿಜೆಪಿಯಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಕಳೆದ ಬಾರಿ ಸ್ಪರ್ಧಿಸಿದ್ದ ನಂದಿನಿ ಗೌಡ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಹೊನ್ನಿಗನಹಳ್ಳಿ ಜಗನ್ನಾಥ್‌, ಸೀಗೆಕೋಟೆ ರವಿಕುಮಾರ್‌ ಸಹ ಆಕಾಂಕ್ಷಿಗಳಾಗಿದ್ದಾರೆ. ನಮಗೆ ಟಿಕೆಟ್‌ ಕೊಡಬೇಕೆಂದು ತಮ್ಮ ನಾಯಕರ ಮೂಲಕ ಒತ್ತಡ ತರುತ್ತಿದ್ದಾರೆ. ಮೂರು ಪಕ್ಷಗಳ ಮಧ್ಯ ನಾವ್ಯಾರಿಗೂ ಕಮ್ಮಿ ಇಲ್ಲ ಎನ್ನುವಂತೆ ಬಿಎಸ್‌ಪಿ ಸಹ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಸಿದ್ಧತೆ ನಡೆಸಿದೆ. ಇದರ ಜೊತೆಗೆ ಧಮ್ಮ ದೀವಿಗೆ ಚಾರಿಟಬಲ್‌ ಟ್ರಸ್ಟ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಪಕ್ಷೇತರರಾಗಿ ಕಣಕ್ಕೆ ಇಳಿಯಲು ಸಿದ್ಧತೆ ನಡೆಸಿದ್ದಾರೆ.

-ಬಿ.ಟಿ.ಉಮೇಶ್‌, ಬಾಣಗಹಳ್ಳಿ

ಟಾಪ್ ನ್ಯೂಸ್

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.