ಯಾರಿಗೆ ಮುಳ್ಳಾಗಬಹುದು ಮೀಸಲು ಬೇಡಿಕೆ?


Team Udayavani, Mar 13, 2023, 7:25 AM IST

ಯಾರಿಗೆ ಮುಳ್ಳಾಗಬಹುದು ಮೀಸಲು ಬೇಡಿಕೆ?

ಬೆಂಗಳೂರು: ರಾಜ್ಯದ ಪ್ರಬಲ ಜನಸಮುದಾಯಗಳ ಮೀಸಲು ಬೇಡಿಕೆ ವಿಚಾರ ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ಸಂಕಟ ಎದುರಾಗುವಂತೆ ಮಾಡಿದೆ. ಕುತೂಹಲಕಾರಿ ಸಂಗತಿ ಎಂದರೆ ಈ ವಿಚಾರದಲ್ಲಿ ಪ್ರತಿಪಕ್ಷ ಕಾಂಗ್ರೆಸ್‌ ಈ ಹಿಂದೆ ಬಿಜೆಪಿ ಸಾಗಿದ ಹಳಿಯಲ್ಲೇ ಈ ವಿಚಾರವನ್ನು ಮುನ್ನಡೆಸಿದ್ದರಿಂದ “ಮೀಸಲು ವ್ಯಾಜ್ಯ’ ಈ ಚುನಾವಣೆಯಲ್ಲಿ ಯಾರ ಪರ ಮತವಾಗಿ ಪರಿವರ್ತನೆಯಾಗಬಹುದೆಂಬುದು ಯಕ್ಷ ಪ್ರಶ್ನೆಯಾಗಿ ಪರಿಣಮಿಸಿದೆ.

ಪಂಚಮಸಾಲಿ 2ಎ ಹೋರಾಟ, ಒಕ್ಕಲಿಗರ ಮೀಸಲು ಪ್ರಮಾಣ ಹೆಚ್ಚಳ ಬೇಡಿಕೆ, ನ್ಯಾ. ಸದಾಶಿವ ಆಯೋಗದ ಒಳಮೀಸಲು ಜಾರಿ, ಬಲಿಜ, ಮರಾಠರ 2ಎ ಬೇಡಿಕೆ ಹಾಗೂ ಎಸ್‌ಟಿಗೆ ಸೇರಿಸಬೇಕೆಂಬ ಕುರುಬ ಸಮುದಾಯದ ಹಕ್ಕೊತ್ತಾಯ ಪ್ರಸ್ತುತ ಚುನಾವಣಾ ಕಣದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. ಜತೆಗೆ ಬಲಿಜ ಸಮುದಾಯ ಸೇರಿದಂತೆ ಇನ್ನಿತರ ಸಣ್ಣ ಸಣ್ಣ ಸಮುದಾಯಗಳೂ ಮೀಸಲು ಹೆಚ್ಚಳದ ಬೇಡಿಕೆ ಮುಂದಿಟ್ಟಿರುವುದರಿಂದ ಎಲ್ಲ ರಾಜಕೀಯ ಪಕ್ಷಗಳೂ ಎಚ್ಚರಿಕೆಯಿಂದ ಹೆಜ್ಜೆ ಇಡುವಂತಾಗಿದೆ. ತುಟಿ ಮೀರಿ ಆಡುವ ಮಾತುಗಳು ದುಬಾರಿ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುವುದರಿಂದ ಮುಂಚೂಣಿ ನಾಯಕರು ಈ ವಿಚಾರದಲ್ಲಿ ಎಷ್ಟು ಸಾಧ್ಯವೋ ಅಷ್ಟು ಮೌನಕ್ಕೆ ಜಾರಿದ್ದಾರೆ.

ಉಪಸಮಿತಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಮೀಸಲು ಪ್ರಮಾಣವನ್ನು ಒಟ್ಟಾರೆಯಾಗಿ ಶೇ.7.5ರಷ್ಟು ಹೆಚ್ಚಳ (ಎಸ್‌ಸಿಗೆ ಶೇ.15ರಿಂದ 17, ಎಸ್‌ಟಿಗೆ ಶೇ. 3ರಿಂದ 7) ಮಾಡಿದ್ದು ಮಾತ್ರವಲ್ಲ, ಅದನ್ನು 9ನೇ ಪರಿಚ್ಛೇದಕ್ಕೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸು ಕಳುಹಿಸಲು ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈಗಾಗಲೇ ತೀರ್ಮಾನ ತೆಗೆದುಕೊಂಡಿದ್ದು, ಅದನ್ನು ಬಜೆಟ್‌ ಭಾಷಣದಲ್ಲೂ ಸಿಎಂ ಬಸವರಾಜ ಬೊಮ್ಮಾಯಿ ಉಲ್ಲೇಖಿಸಿದ್ದಾರೆ. ಹೀಗಾಗಿ ವಿಚಾರದಲ್ಲಿ ರಾಜ್ಯ ಸರ್ಕಾರ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಿದೆ ಎಂದೇ ಹೇಳಬಹುದು.

ಆದರೆ ಇದರ ಮುಂದುವರಿದ ಭಾಗವಾಗಿರುವ ಸದಾಶಿವ ಆಯೋಗದ ವರದಿ ಆಧರಿಸಿ ದಲಿತ ಸಮುದಾಯ ಕೇಳುತ್ತಿರುವ ಒಳಮೀಸಲು ಬೇಡಿಕೆ ಇತ್ಯರ್ಥ ಮಾತ್ರ ಇನ್ನೂ ಕಬ್ಬಿಣದ ಕಡಲೆಯಾಗಿಯೇ ಇದೆ. ಈ ವಿಚಾರವನ್ನು ಕಾಂಗ್ರೆಸ್‌ ಬಹು ಎಚ್ಚರಿಕೆಯಿಂದ ಪರಿಗಣಿಸುತ್ತಿದೆ. ಏಕೆಂದರೆ 2008ರಲ್ಲಿ ಪ್ರಾರಂಭವಾದ ಒಳಮೀಸಲು ಬೇಡಿಕೆ 2013 ಹಾಗೂ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮರೆಯಲಾಗದ ಏಟು ನೀಡಿದೆ. 2018ರಲ್ಲಿ ಒಳಮೀಸಲು ಹೋರಾಟವನ್ನು ಪರೋಕ್ಷವಾಗಿ ಮುನ್ನಡೆಸಿದ್ದ ಬಿಜೆಪಿ ತಾನು ಅಧಿಕಾರಕ್ಕೆ ಬಂದರೆ ಮೀಸಲು ಜಾರಿ ಮಾಡುವ ಭರವಸೆಯನ್ನು ನೀಡಿತ್ತು. ಆದರೆ ಅದು ಇನ್ನೂ ಜಾರಿಯಾಗದೇ ಇರುವುದು ಒಳಮೀಸಲು ಆಕಾಂಕ್ಷಿಗಳಾದ ಕೆಲ ದಲಿತ ಸಮುದಾಯಗಳಲ್ಲಿ ಬೇಸರ ಮೂಡಿಸಿದೆ.

ಸರ್ಕಾರ ಸದಾಶಿವ ಆಯೋಗದ ವರದಿ ಜಾರಿಗೆ ಸಂಬಂಧಪಟ್ಟಂತೆ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧು­ಸ್ವಾಮಿ ನೇತೃತ್ವದಲ್ಲಿ ಈಗಾಗಲೇ ಸಂಪುಟ ಉಪಸಮಿತಿ ರಚನೆ ಮಾಡಿದ್ದು, ವರದಿ ನಿರೀಕ್ಷೆ­ಯ­ಲ್ಲಿದೆ. ಆಯೋಗದ ವರದಿಯಲ್ಲಿ ಉಲ್ಲೇಖ­ವಾದ ಅಂಕಿ-ಸಂಖ್ಯೆಗಳು ಹಾಗೂ ಜನಗಣತಿ ವರದಿಯ ಅಂಶಗಳಿಗೂ ಹೊಂದಾಣಿಕೆಯಾಗದೇ ಇರುವುದರಿಂದ ಇನ್ನೊಂದಿಷ್ಟು ಅಧ್ಯಯನದ ಅಗತ್ಯವಿದೆ ಎಂದು ಸಮಿತಿ ಈಗಾಗಲೇ ಸಂಪುಟಕ್ಕೆ ಮಾಹಿತಿ ನೀಡಿದ್ದು, ಈ ತಿಂಗಳಾಂತ್ಯಕ್ಕೆ ವರದಿ ಸಲ್ಲಿಕೆಯಾಗುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತದೆ.

ಕಗ್ಗಂಟಾದ ಪಂಚಮಸಾಲಿ: ರಾಜ್ಯದಲ್ಲಿ ಕಳೆದ ಎರಡು ವರ್ಷದಿಂದ ಪಂಚಮಸಾಲಿ 2ಎ ಮೀಸಲು ಹೋರಾಟ ಬಹುಚರ್ಚೆಯ ವಿಚಾರ. ಈ ಚುನಾವಣೆಯಲ್ಲಿ ಫ‌ಲಿತಾಂಶ ಬದಲಾಯಿಸುವ ಸಾಮರ್ಥ್ಯ ಇರುವ ಹೋರಾಟ ಇದೇ ಎಂದು ರಾಜಕೀಯ ತಜ್ಞರು ವ್ಯಾಖ್ಯಾನಿಸುತ್ತಿದ್ದಾರೆ. ಪರಿಸ್ಥಿತಿ ನಿಭಾಯಿಸುವುದಕ್ಕೆ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಧ್ಯಂತರ ವರದಿಯನ್ನು ಗುರಾಣಿಯಂತೆ ಬಳಸಿಕೊಳ್ಳುತ್ತಿದೆ. ಪಂಚಮಸಾಲಿಗಳಿಗೆ ಹಾಗೂ ಒಕ್ಕಲಿಗರಿಗೆ ಆಯೋಗ ಪ್ರತ್ಯೇಕ ಪ್ರವರ್ಗ (2ಸಿ ಹಾಗೂ 2ಡಿ) ಸೃಷ್ಟಿ ಮಾಡಿದೆಯಾದರೂ ಮೀಸಲು ನಿಗದಿ ಪ್ರಮಾಣದಲ್ಲಿ ಸ್ಪಷ್ಟತೆ ಇಲ್ಲ ಎಂಬುದು ಸಮುದಾಯದ ಆಕ್ಷೇಪವಾಗಿದೆ. ಈ ವಿಚಾರದಲ್ಲಿ ಸ್ಪಷ್ಟತೆ ನೀಡುವ ಹೋರಾಟದ ಮುಂಚೂಣಿಯಲ್ಲಿರುವ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಈಗಾಗಲೇ ಆಗ್ರಹಿಸಿದ್ದಾರೆ. ಆದರೆ ಹೋರಾಟಕ್ಕೆ ರಾಜಕೀಯ ಶಕ್ತಿ ನೀಡಿದ್ದ ಬಿಜೆಪಿ ಶಾಸಕರೇ ಆದ ಬಸನಗೌಡ ಪಾಟೀಲ್‌ ಯತ್ನಾಳ್‌, ಅರವಿಂದ ಬೆಲ್ಲದ್‌, ಸಚಿವ ಮುರುಗೇಶ್‌ ನಿರಾಣಿ, ಸಿ.ಸಿ.ಪಾಟೀಲ್‌ ಮೊದಲಾದವರು ತಟಸ್ಥರಾಗು­ತ್ತಿರುವುದು ಹೋರಾಟದ ಮೊನಚನ್ನು ತುಸು ಕಡಿಮೆ ಮಾಡಿದೆ. ಕಾಂಗ್ರೆಸ್‌ನ ಒಂದು ವರ್ಗ ಪಂಚಮಸಾಲಿ ಮೀಸಲು ಹೋರಾಟವನ್ನು ಬಲವಾಗಿ ವಿರೋಧಿಸುತ್ತಿದೆ. ಹೀಗಾಗಿ ಪಂಚಮಸಾಲಿ ಸಮುದಾಯ ಈಗ ಗೊಂದಲಕ್ಕೆ ಸಿಲುಕಿದೆ. ಅವರ ರಾಜಕೀಯ ನಿಲುವು ಕೂಡಾ ಹೊಯ್ದಾಟಕ್ಕೆ ಒಳಗಾಗಿದೆ ಎಂದು ವ್ಯಾಖ್ಯಾನಿಸಬಹುದು.

ಪ್ರಖರವಲ್ಲ: ಇದರ ಜತೆಗೆ ಇಡಬ್ಲ್ಯುಎಸ್‌ನಲ್ಲಿ ಒಕ್ಕಲಿಗರಿಗೂ ಅವಕಾಶ ಕಲ್ಪಿಸಬೇಕೆಂದು ಮನವಿ ಸಲ್ಲಿಸಿದೆ. ಮೀಸಲು ಪ್ರಮಾಣ ಹೆಚ್ಚಳಕ್ಕೂ ಅದು ಒತ್ತಾಯಿಸಿದೆ. ಹಿಂದುಳಿದ ವರ್ಗಗಳ ಆಯೋಗ ಒಕ್ಕಲಿಗರಿಗೂ ಪ್ರತ್ಯೇಕ ಪ್ರವರ್ಗ ರಚನೆ ಮಾಡಿದೆ. ಆದರೆ ಒಕ್ಕಲಿಗರ ಮೀಸಲು ಹೋರಾಟ ಉಳಿದ ಸಮುದಾಯದಷ್ಟು ಪ್ರಖರವಾಗಿಲ್ಲದೇ ಇರುವುದರಿಂದ ಈ ವಿಚಾರವನ್ನು ತಕ್ಕಮಟ್ಟಿಗೆ ಬಿಜೆಪಿ ನಿಭಾಯಿಸಿದೆ ಎಂದೇ ಹೇಳಬಹುದು. ಈ ಮಧ್ಯೆ ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕೆಂಬ ಬೇಡಿಕೆಯೂ ಪ್ರಬಲವಾಗಿ ಕೇಳಿ ಬರುತ್ತಿದೆ. ಇದಕ್ಕೆ ಹೋರಾಟಗಳು ನಡೆದಿವೆ. ಚುನಾವಣೆಯಲ್ಲಿ ಈ ವಿಷಯವನ್ನು ರಾಜಕೀಯ ಪಕ್ಷಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲು ಸಜ್ಜಾಗಿವೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.