ದಕ್ಷಿಣ ಕನ್ನಡ : ಹಾಲಿಗಳಿಗೆ ಟಿಕೆಟ್‌ ಖೋತಾ ತೀರಾ ವಿರಳ


Team Udayavani, Apr 9, 2023, 6:10 AM IST

ದಕ್ಷಿಣ ಕನ್ನಡ : ಹಾಲಿಗಳಿಗೆ ಟಿಕೆಟ್‌ ಖೋತಾ ತೀರಾ ವಿರಳ

ಮಂಗಳೂರು : ಈಗಾಗಲೇ ಕೇಳಿಬರುತ್ತಿರುವಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಲಿ ಶಾಸಕರು- ಸಚಿವರು ಸೇರಿದಂತೆ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಬದಲಾವಣೆ ಕೈಗೊಂಡರೆ ಅಪರೂಪದ ವಿದ್ಯಮಾನ ಆಗಲಿದೆ.

ಎಲ್ಲಾ ಪಕ್ಷಗಳೂ ಅಭ್ಯರ್ಥಿಗಳ ಪೈಪೋಟಿಯ ಬಿಸಿ, ಕಾರ್ಯಕರ್ತರ ಒತ್ತಡ ಎದುರಿಸುತ್ತಿದೆ. ಕರಾವಳಿ ಭಾಗದಲ್ಲೂ ಕಾಂಗ್ರೆಸ್‌ ಹಾಗೂ ಬಿಜೆಪಿ ಶತಾಯಗತಾಯ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲು ತಂತ್ರ ಪ್ರತಿತಂತ್ರ ರೂಪಿಸುತ್ತಿವೆ. ಈ ಮಧ್ಯೆ ಜಿಲ್ಲೆಯ ಕೆಲವೆಡೆ ಬಿಜೆಪಿಯ ಹಾಲಿ ಶಾಸಕರು ಹಾಗೂ ಸಚಿವರು ಕಾರ್ಯಕರ್ತರು ಹಾಗೂ ಮತದಾರರ ಆಕ್ರೋಶವನ್ನು ಎದುರಿಸುತ್ತಿದ್ದಾರೆ. ಹಾಗಾಗಿ ಅವರ ಬದಲಾವಣೆಗೆ ಹೈಕಮಾಂಡ್‌ ಮನಸ್ಸು ಮಾಡಿರುವುದು ಸ್ಪಷ್ಟವಾಗಿದೆ.

ಇದುವರೆಗೆ ಬಿಜೆಪಿಯಲ್ಲಿ ಕಾರ್ಯಕರ್ತರ ಆಕ್ರೋಶಕ್ಕೆ ಮಣಿದು ಹೀಗೆ ಶಾಸಕರು-ಸಚಿವರನ್ನು ಬದಲಿಸಿದ ಉದಾಹರಣೆ ಜಿಲ್ಲೆಯಲ್ಲಿ ಇಲ್ಲ. ಹೆಚ್ಚಿನ ಸಂದರ್ಭದಲ್ಲಿ ಮತದಾರರ /ಕಾಯಕರ್ತರ ಬೇಸರವನ್ನು ಅಭ್ಯರ್ಥಿಗಳೇ ಚುನಾವಣೆಯಲ್ಲಿ ಎದುರಿಸುತ್ತಿದ್ದರು. ಪರಿಣಾಮವಾಗಿ ಸೋತದ್ದಿದೆ. 2013 ರಲ್ಲಿ ಬಿಜೆಪಿ ಸರಕಾರದ ಮೇಲಿದ್ದ ವಿರೋಧಿ ಅಲೆಯ ಪರಿಣಾಮವನ್ನು ಅಭ್ಯರ್ಥಿಗಳು ಎದುರಿಸಿದ್ದರು. ಆಗ ಸುಳ್ಯವೊಂದು ಬಿಟ್ಟು ಮತ್ತೆಲ್ಲಾ ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಂಡಿತ್ತು.

ಕಾಂಗ್ರೆಸ್‌ನಲ್ಲೂ ಅಷ್ಟೇ. ಒತ್ತಡಕ್ಕೊಳಗಾಗಿ ಹೈಕಮಾಂಡ್‌ ಹಾಲಿ ಶಾಸಕರು/ಸಚಿವರಿಗೆ ಟಿಕೆಟ್‌ ನೀಡದಿರುವ ಪದ್ಧತಿ ತೀರಾ ಕಡಿಮೆ. ಆಕ್ರೋಶ ಎದುರಾದಾಗಲೆಲ್ಲಾ ಸ್ಪರ್ಧಿಸಿ ಮತದಾರರ ಸಿಟ್ಟನ್ನು ಅನುಭವಿಸಿದ್ದಾರೆ. 2013ರಲ್ಲಿ ಬಿಜೆಪಿಗೆ ಆದಂತಹ ರೀತಿಯದ್ದೇ ಸನ್ನಿವೇಶವನ್ನು 2018ರಲ್ಲಿ ಕಾಂಗ್ರೆಸ್‌ ಎದುರಿಸಿತ್ತು. ಆಡಳಿತ ವಿರೋಧಿ ಅಲೆ ಹಾಗೂ ವಿವಿಧ ಕಾರಣಗಳಿಗೆ ಜನಾಕ್ರೋಶ ಇತ್ತು. ಮತದಾರರ ಕೋಮುಗಲಭೆ, ಹತ್ಯೆಗಳಿಂದ ಎಲ್ಲೆಡೆ ಆಗಿನ ಶಾಸಕರ ವಿರುದ್ಧ ಜನಾಕ್ರೋಶ ಇತ್ತು, ಹಾಗಿದ್ದರೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಬದಲಿಸಿರಲಿಲ್ಲ. ಆಗ ಕಾಂಗ್ರೆಸ್‌ 6 ಕ್ಷೇತ್ರಗಳನ್ನೂ ಕಳೆದುಕೊಳ್ಳಬೇಕಾಯಿತು.

ಸದ್ಯದ ಪ್ರಕಾರ ದ.ಕ ಜಿಲ್ಲೆಯ ಮೂರು ಕಡೆಗಳಲ್ಲಿ ಬಿಜೆಪಿಯಿಂದ ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಾರ್ಯಕರ್ತರ ಆಕ್ರೋಶ ಎದುರಿಸುತ್ತಿರುವವರಲ್ಲಿ ಒಬ್ಬರು ಸಚಿವರಾದರೆ ಇನ್ನೋರ್ವರು ಶಾಸಕರು. ಬೇರಡೆ ಬಹಿರಂಗವಾಗಿ ಅಸಮಾಧಾನವಿಲ್ಲದಿದ್ದರೂ ಬಣ ರಾಜಕೀಯ, ಆಂತರಿಕ ಪೈಪೋಟಿ ಹೆಚ್ಚಿದೆ.

ಗುಜರಾತ್‌ ಮಾದರಿ
ಈ ಬಾರಿ ಚುನಾವಣ ವರ್ಷದ ಆರಂಭದಲ್ಲೇ ಕರ್ನಾಟಕದಲ್ಲೂ ಗುಜರಾತ್‌ ಮಾದರಿಯಲ್ಲೇ ಹಾಲಿ ಶಾಸಕರನೇಕರಿಗೆ ಟಿಕೆಟ್‌ ನಿರಾಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತಾದರೂ ಖಚಿತಗೊಂಡಿರಲಿಲ್ಲ. ಆದರೀಗ ಹೈಕಮಾಂಡ್‌ ಈ ನಿಟ್ಟಿನಲ್ಲಿ ಬಿಗಿ ನಿಲುವು ತಳೆದಂತಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.