Karnataka Election ಅಕ್ರಮ: 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ
Team Udayavani, Apr 24, 2023, 6:55 AM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 40.60 ಲಕ್ಷ ರೂ. ಅಕ್ರಮ ಹಣವನ್ನು ಜಪ್ತಿ ಮಾಡಲಾಗಿದೆ. ಜತೆಗೆ 45.93 ಲಕ್ಷ ರೂ. ಮೌಲ್ಯದ ಉಡುಗೊರೆ, 28.15 ಲಕ್ಷ ರೂ ಮೌಲ್ಯದ ಮದ್ಯ, 30 ಸಾವಿರ ರೂಗಳ ಮಾದಕ ವಸ್ತು, 1.14 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಪತ್ತೆ ಹಚ್ಚಲಾಗಿದೆ. ಈವರೆಗೆ ನಗದು, ಉಡುಗೊರೆ, ಚಿನ್ನ, ಬೆಳ್ಳಿ ಸೇರಿ ಒಟ್ಟು 392 ಕೋ. ರೂ.ಯನ್ನು ವಶಕ್ಕೆ ಪಡೆಯಲಾಗಿದೆ.
ಚುನಾವಣ ವೇಳಾಪಟ್ಟಿ ಪ್ರಕಟವಾದ ಮಾ.29ರಿಂದ ಈವರೆಗೆ ವಿಚಕ್ಷಣ ದಳ 82.46 ಕೋ. ರೂ., ಜಾರಿ ತಂಡಗಳು 20.14 ಕೋ. ರೂ. ಮೌಲ್ಯದ ಉಡುಗೊರೆ, 56.95 ಕೋ. ರೂ. ಮೌಲ್ಯದ ಮದ್ಯ, 16.55 ಕೋ. ರೂ. ಮೌಲ್ಯದ ಮಾದಕ ವಸ್ತುಗಳು, 254 ಕೋ.ರೂ. ಮೌಲ್ಯದ ಚಿನ್ನ, ಬೆಳ್ಳಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ 1,930 ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಎಂದು ಚುನಾವಣಾಧಿಕಾರಿಗಳ ಕಚೇರಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?