Karnataka Election; ಲಿಂಗಾಯತರು ಭ್ರಷ್ಟರು ಎಂದಿಲ್ಲ: ಹೇಳಿಕೆ ಕುರಿತು ಸಿದ್ದರಾಮಯ್ಯ
ಅವರೇ ಎಲ್ಲ ಭ್ರಷ್ಟಾಚಾರ ಮಾಡಿ ಹಾಳು ಮಾಡಿರುವುದು ರಾಜ್ಯವನ್ನು.... !
Team Udayavani, Apr 22, 2023, 7:36 PM IST
ಮೈಸೂರು : ರಾಜ್ಯದಲ್ಲಿ ಚುನಾವಣ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು ಆರೋಪ ಪ್ರತ್ಯಾರೋಪಗಳು ತೀವ್ರವಾಗಿದೆ. ಈ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದ ತುಣುಕು ಬಿಜೆಪಿಗೆ ಅಸ್ತ್ರವಾಗಿ ವ್ಯಾಪಕವಾಗಿ ವೈರಲ್ ಆಗಿದೆ.
ಬಿಜೆಪಿ ಲಿಂಗಾಯತ ಸಿಎಂ ಮಾಡಿ ಎಂಬ ಅಸ್ತ್ರ ಕಾಂಗ್ರೆಸ್ ಮೇಲೆ ಪ್ರಯೋಗಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ‘ಈಗಾಗಲೇ ಲಿಂಗಾಯತರೇ ಮುಖ್ಯಮಂತ್ರಿ ಇದ್ದಾರಲ್ಲ. ಅವರೇ ಎಲ್ಲ ಭ್ರಷ್ಟಾಚಾರ ಮಾಡಿ ಹಾಳು ಮಾಡಿರುವುದು ರಾಜ್ಯವನ್ನು ” ಎಂದು ಪ್ರತಿಕ್ರಿಯಿಸಿದ್ದರು.
ಈ ಹಿಂದೆ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಯತ್ನಿಸಿದ ಸಿದ್ದರಾಮಯ್ಯ, ಈಗ ಆ ಸಮುದಾಯದವರೆಲ್ಲ ಭ್ರಷ್ಟರು, ರಾಜ್ಯವನ್ನು ಹಾಳುಗೆಡವುವವರು ಎಂಬ ಸಂವೇದನಾರಹಿತ ದ್ವೇಷಪೂರಿತ ಹೇಳಿಕೆ ನೀಡಿರುವುದು ಅಕ್ಷಮ್ಯ.ಜಗದ್ಗುರು ಬಸವಣ್ಣನ ಆದರ್ಶ ಪಾಲಿಸುವ 7 ಕೋಟಿ ಕನ್ನಡಿಗರು, ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ.” ಎಂದು ಬಿಜೆಪಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿತ್ತು.
ಸಿದ್ದರಾಮಯ್ಯ ಸ್ಫಷ್ಟನೆ
ಬಿಜೆಪಿ ಹೇಳಿಕೆಯ ಲಾಭ ಪಡೆಯಲು ಮುಂದಾಗಿರುವುದನ್ನು ಅರಿತ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿ , ”ನಾನು ಬಸವರಾಜ್ ಬೊಮ್ಮಾಯಿ ಅವರು ಭ್ರಷ್ಟ ಎಂದು ಹೇಳಿದ್ದು ಅವರಿಗೆ ಸೀಮಿತವಾಗಿ, ಲಿಂಗಾಯತರು ಭ್ರಷ್ಟರು ಎಂದು ಹೇಳಿಲ್ಲ. ಆ ರೀತಿಯಾಗಿ ವರದಿ ಮಾಡಿರುವುದು ಸರಿಯಿಲ್ಲ. ಲಿಂಗಾಯತರಲ್ಲಿ ಬಹಳಷ್ಟು ಜನ ಪ್ರಾಮಾಣಿಕ ಮುಖ್ಯಮಂತ್ರಿಗಳು ಇದ್ದರು. ವೀರೇಂದ್ರ ಪಾಟೀಲ್, ನಿಜಲಿಂಗಪ್ಪನವರು, ಜೆ.ಎಚ್.ಪಟೇಲ್ ರಂತವರು ಇದ್ದರು. ಈಗ ಮುಖ್ಯಮಂತ್ರಿಯಾಗಿರುವ ಬಸವರಾಜ್ ಬೊಮ್ಮಾಯಿ ಭ್ರಷ್ಟ ಎಂದು ಹೇಳಿದ್ದೇನೆ. ಚುನಾವಣ ಸಂದರ್ಭದಲ್ಲಿ ಬಿಜೆಪಿಯವರು ತಿರುಚಿ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ಬಿಜೆಪಿಯವರು ರಾಜಕೀಯ ದುರುದ್ದೇಶದಿಂದ ಮಾಡುತ್ತಿದ್ದಾರೆ. ನನಗೆ ವೀರಶೈವ-ಲಿಂಗಾಯತರ ಬಗ್ಗೆ ಅಪಾರವಾದ ಗೌರವವಿದೆ. ಈ ಬರಿ ಲಿಂಗಾಯತರಿಗೆ ನಾವು 50 ಕ್ಕಿಂತ ಹೆಚ್ಚು ಟಿಕೆಟ್ ನೀಡಿದ್ದೇವೆ” ಎಂದರು.
”ನಾವು ಜಾತಿ ಮೇಲೆ ಮುಖ್ಯಮಂತ್ರಿ ಮಾಡುವುದಿಲ್ಲ, ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಶಾಸಕರು ತೀರ್ಮಾನ ಮಾಡುತ್ತಾರೆ . ಅದು ನಮ್ಮ ಪಕ್ಷದ ಪದ್ಧತಿ” ಎಂದು ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ