Today’s Chanakya Exit Polls: ಕಾಂಗ್ರೆಸ್ಗೆ ಸ್ಪಷ್ಟ ಬಹುಮತದ ಭವಿಷ್ಯ
Team Udayavani, May 10, 2023, 8:43 PM IST
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ಬುಧವಾರ ನಡೆದಿದ್ದುಎಕ್ಸಿಟ್ ಪೋಲ್ಗಳ ಭವಿಷ್ಯ ಕೂಡ ಹೊರಬಿದ್ದಿದ್ದು, ಟುಡೇಸ್ ಚಾಣಕ್ಯ ಎಕ್ಸಿಟ್ ಪೋಲ್ ಪ್ರಕಾರ ಕಾಂಗ್ರೆಸ್ 120 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತವನ್ನು ಪಡೆಯುತ್ತದೆ ಎಂದು ಭವಿಷ್ಯ ನುಡಿದಿದೆ.ಬಿಜೆಪಿಗೆ 92 ಸ್ಥಾನಗಳು ಮತ್ತು ಜೆಡಿಎಸ್ಗೆ 12 ಕೇವಲ ಸ್ಥಾನಗಳು ಸಿಗಲಿದೆ ಎಂದು ಸಮೀಕ್ಷೆ ಹೇಳಿದೆ.
ಇದನ್ನೂ ಓದಿ : Karnataka Exit Polls; ಅತಂತ್ರ!!!,ಬಹುಮತವೋ? ; ಸಮೀಕ್ಷೆಗಳು ಹೀಗಿವೆ
ರಾಜ್ಯದಲ್ಲಿ ಸಂಜೆ 5 ರವರೆಗೆ ದಾಖಲಾದ ಮತದಾನದ ಶೇಕಡಾವಾರು ಪ್ರಮಾಣ ನಿರೀಕ್ಷೆಗಿಂತ ಕಡಿಮೆಯಾಗಿದೆ. 65.69% ಮತದಾನವಾಗಿದ್ದು, ಪೂರ್ಣ ಪ್ರಮಾಣದ ವಿವರ ಇನ್ನಷ್ಟೇ ಹೊರ ಬೀಳಬೇಕಿದೆ.
2024 ರ ಲೋಕಸಭೆ ಚುನಾವಣೆಗೆ ಮುನ್ನ ನಡೆದ ವಿಧಾನಸಭೆ ಚುನಾವಣೆ ನಿರ್ಣಾಯಕವೆಂದು ಪರಿಗಣಿಸಲಾಗಿದ್ದು, ಆಡಳಿತಾರೂಢ ಬಿಜೆಪಿ ಆಡಳಿತ ವಿರೋಧಿ ಅಲೆಯ ವಿರುದ್ಧ ಹೋರಾಟ ನಡೆಸುತ್ತಿದ್ದು, ಮುಂಬರುವ ಸಾರ್ವತ್ರಿಕ ಚುನಾವಣೆಗಳ ಭವಿಷ್ಯವನ್ನು ಬದಲಾಯಿಸಲು ಕಾಂಗ್ರೆಸ್ ಅದ್ಭುತ ಗೆಲುವಿನ ನಿರೀಕ್ಷೆಯಲ್ಲಿದೆ.
ಟುಡೇಸ್ ಚಾಣಕ್ಯ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ 42 %, ಬಿಜೆಪಿ 39% , ಜೆಡಿಎಸ್ 13% ಮತ್ತು ಇತರರು 6% ರಷ್ಟು ಮತಗಳನ್ನು ಗಳಿಸುವ ನಿರೀಕ್ಷೆಯಿದೆ.
ಇಂಡಿಯಾ ಟುಡೆ-ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ 122-140 ಸ್ಥಾನಗಳನ್ನು ಗೆಲ್ಲಲಿದೆ, ಇದು ಸ್ಪಷ್ಟ ಬಹುಮತ 113 ಸ್ಥಾನಗಳಿಗಿಂತ ಹೆಚ್ಚಾಗಿದೆ. ಬಿಜೆಪಿ 62-80 ಮತ್ತು ಜೆಡಿಎಸ್ 20-25 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.
ಮತ ಹಂಚಿಕೆಯಲ್ಲಿ ಕಾಂಗ್ರೆಸ್ ಶೇ.43, ಬಿಜೆಪಿ ಶೇ.35, ಜೆಡಿಎಸ್ ಶೇ.16 ಮತ್ತು ಇತರರು ಶೇ.8ರಷ್ಟು ಮತಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದು ಸಮೀಕ್ಷೆ ತಿಳಿಸಿದೆ.
ಹಳೆ ಮೈಸೂರು ಪ್ರಾಂತ್ಯದ 64 ಸ್ಥಾನಗಳ ಪೈಕಿ ಕಾಂಗ್ರೆಸ್ 36 ಸ್ಥಾನಗಳನ್ನು ಗೆಲ್ಲಲಿದೆ ಎಂದು ಇಂಡಿಯಾ ಟುಡೇ-ಮೈ ಆಕ್ಸಿಸ್ ಬಿಡುಗಡೆ ಮಾಡಿರುವ ಸಮೀಕ್ಷೆ ಭವಿಷ್ಯ ನುಡಿದಿದೆ. ಜೆಡಿಎಸ್ 18 ಮತ್ತು ಬಿಜೆಪಿ 6 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ