ಮತ ಜಾತ್ರೆಗೆ ಕಾಶಿ ಯಾತ್ರೆ!


Team Udayavani, Mar 16, 2023, 5:15 AM IST

ಮತ ಜಾತ್ರೆಗೆ ಕಾಶಿ ಯಾತ್ರೆ!

ದಾವಣಗೆರೆ: ತಮ್ಮಾ ಹ್ಯಾಗಿದಿಯಪ್ಪಾ, ಆರಾಮಿದಿಯಾ, ನಾವೆಲ್ಲಾರೂ ಕೂಡಿ ಕಾಶಿ ನೋಡಾಕ ಹೊಂಟೇವಿ. ನಿಮ್ಮ ಅವ್ವ-ಅಪ್ಪಗೂ ಕಳ್ಸಿ ಕೊಡು. ನಿಮಗೆಲ್ಲಾ ಜೋಪಾನ ಮಾಡಾಕ ಅವ್ರು ಎಷ್ಟೆಲ್ಲಾ ಕಷ್ಟಾ ಪಟ್ಟಾರು, ಅವ್ರಿಗೆ ನೀನು ಕಾಶಿ ದರ್ಶನಾ ಮಾಡ್ಸು. ತಂದೆ-ತಾಯಿಗೆ ಕಾಶಿ ದರ್ಶನಾ ಮಾಡ್ಸಿದ್ರ ಮಕ್ಕಳಿಗೂ ಪುಣ್ಯ ಸಿಗ್ತದ, ಒಳ್ಳೆದಾಗ್ತದ..’ಇದು ಇತ್ತೀಚೆಗೆ ಸಂಬಂಧಿಕರು, ವಿವಿಧ ಸಮುದಾಯ ಹಾಗೂ ಸಂಘಟನೆಯವರಿಂದ ಪರಿಚಯಸ್ಥ ಯುವಜನತೆಗೆ ಬರುತ್ತಿರುವ ಕರೆಗಳ ಸಂಭಾಷಣೆ. ಪೋಷಕರಿಗೆ ಕಾಶಿಗೆ ಕಳುಹಿಸಿ ಕೊಡುವಂತೆ ಯುವಜನರಿಗೆ ಕೋರುವ ಇಂಥ ದೂರವಾಣಿ ಕರೆಗಳು ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಸಹಿತ ಹೀಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿಯೂ ಕೇಳಿ ಬರುತ್ತಿದೆ. ಇದರ ಪರಿಣಾಮ ಈ ವರ್ಷದ ಬೇಸಗೆಯಲ್ಲಿ ಕಾಶಿ ಯಾತ್ರೆಗೆ ಹೋಗುವವರ ಸಂಖ್ಯೆ ಗಣನೀಯವಾಗಿ ಏರುತ್ತಿದೆ.

ವಿವಿಧ ಸಂಘಟನೆಗಳ ಸದಸ್ಯರು ಪರಿಚಯಸ್ಥ ಯುವಜನತೆಯನ್ನು ಸಂಪರ್ಕಿಸಿ ಇಲ್ಲವೇ ದೂರವಾಣಿ ಕರೆ ಮಾಡಿ ಪೋಷಕರನ್ನು ಕಾಶಿಗೆ ಕಳುಹಿಸಿಕೊಡುವಂತೆ ಮನವೊಲಿಸುತ್ತಿದ್ದಾರೆ. ಇದರಲ್ಲಿ ಜಾತಿ ಸಂಘಟನೆಗಳು ಹೆಚ್ಚು ಕ್ರಿಯಾಶೀಲವಾಗಿದ್ದು ಕುಟುಂಬದವರು, ಹತ್ತಿರದ ಹಾಗೂ ದೂರದ ಸಂಬಂಧಿಕರು ಹೀಗೆ ಎಲ್ಲರೂ ಒಟ್ಟಾಗಿ ವಿಶ್ವನಾಥನ ದರ್ಶನ ಮಾಡಿ ಬರಬಹುದು ಎಂದು ಹೇಳುತ್ತಿದ್ದಾರೆ.

ಪೋಷಕರಿಗೆ ಪ್ರವಾಸ!: ಇತ್ತೀಚೆಗೆ ಜನರು ಅಧಿಕ ಸಂಖ್ಯೆಯಲ್ಲಿ ಕಾಶಿ ದರ್ಶನ ಯಾತ್ರೆಗೆ ಹೋಗುತ್ತಿ­ರುವುದನ್ನು ಕಂಡ ಕೆಲವು ರಾಜಕಾರಣಿಗಳು, ತಮ್ಮ ಬೆಂಬಲಿಗ ಯುವ ಕಾರ್ಯಕರ್ತರ ಪೋಷಕರನ್ನು ತಮ್ಮ ವೆಚ್ಚದಲ್ಲಿಯೇ ಕಾಶಿ ಯಾತ್ರೆಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡುತ್ತಿದ್ದಾರೆ. ಚುನಾವಣೆ ಸಮಯದಲ್ಲಿ ತಮ್ಮ ಪರವಾಗಿ ದುಡಿಯುವ ಕಾರ್ಯಕರ್ತರನ್ನು ಸೆಳೆಯುವ ಲೆಕ್ಕಾಚಾರ ರಾಜಕಾರಣಿಗಳದ್ದಾಗಿದೆ. ಅನೇಕ ಮುಖಂಡರು ಕಾರ್ಯಕರ್ತರ ಪೋಷಕರು ಮಾರ್ಚ್‌ ತಿಂಗಳ ಒಳಗಾಗಿಯೇ ಕಾಶಿ ದರ್ಶನ ಮಾಡಿ ಬರುವ ವ್ಯವಸ್ಥೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.