ಕೊಳ್ಳೇಗಾಲ ಎಸ್‌ಸಿ ಮೀಸಲು ಕ್ಷೇತ: ಯಾರು ಹಿತವರು ವರಿಷ್ಠರಿಗೆ ಈ ಮೂವರೊಳಗೆ?


Team Udayavani, Apr 4, 2023, 10:58 AM IST

ಕೊಳ್ಳೇಗಾಲ ಎಸ್‌ಸಿ ಮೀಸಲು ಕ್ಷೇತ: ಯಾರು ಹಿತವರು ವರಿಷ್ಠರಿಗೆ ಈ ಮೂವರೊಳಗೆ?

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಎಸ್‌ಸಿ ಮೀಸಲು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಯಾರಾಗಬಹುದೆಂಬುದು ನಿಗೂಢವಾಗಿದ್ದು, ಪಕ್ಷದ ಕಾರ್ಯಕರ್ತರು ತೀವ್ರ ಕುತೂಹಲದಿಂದ ಕಾಯುತ್ತಿದ್ದಾರೆ. ಜಿಲ್ಲೆಯ ಚಾಮರಾಜನಗರ, ಗುಂಡ್ಲುಪೇಟೆ, ಹನೂರು ಕ್ಷೇತ್ರಗಳಿಗೆ ಕಾಂಗ್ರೆಸ್‌ ಮೊದಲ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಚಾಮರಾಜನಗರ ಹಾಗೂ ಹನೂರಿನಲ್ಲಿ ಹಾಲಿ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಹಾಗೂ ಆರ್‌. ನರೇಂದ್ರ ಅವರಿಗೆ ಟಿಕೆಟ್‌ ನೀಡಲಾಗಿದೆ. ಗುಂಡ್ಲುಪೇಟೆಯಲ್ಲಿ ನಿರೀಕ್ಷೆಯಂತೆ ಮಾಜಿ ಸಚಿವ ದಿ.ಎಚ್‌.ಎಸ್‌. ಮಹದೇವಪ್ರಸಾದ್‌ ಅವರ ಪುತ್ರ ಎಚ್‌.ಎಂ.ಗಣೇಶ್‌ ಪ್ರಸಾದ್‌ ಅವರನ್ನು ಅಭ್ಯರ್ಥಿ ಎಂದು ಘೋಷಿಸಲಾಗಿದೆ.

ಅಭ್ಯರ್ಥಿಗಳೆಂದು ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಮೂರೂ ಮಂದಿ ಈಗಾಗಲೇ ಚುನಾವಣಾ ಪ್ರಚಾರವನ್ನೂ ಆರಂಭಿಸಿದ್ದಾರೆ.

ಆಯ್ಕೆ ಕಗ್ಗಂಟಾಗಿಯೇ ಉಳಿದಿದೆ: ಆದರೆ ಕೊಳ್ಳೇಗಾಲ ಮೀಸಲು ಕ್ಷೇತ್ರದಲ್ಲಿ ಇನ್ನೂ ಅಭ್ಯರ್ಥಿಯ ಆಯ್ಕೆ ಕಗ್ಗಂಟಾಗಿಯೇ ಉಳಿದಿದೆ. ಮೂವರು ಪ್ರಬಲ ಆಕಾಂಕ್ಷಿಗಳಿದ್ದು, ಇವರಲ್ಲಿ ಯಾರನ್ನು ಅಭ್ಯರ್ಥಿಯನ್ನಾಗಿ ಮಾಡುವುದು ಎಂಬುದು ವರಿಷ್ಠರಿಗೂ ಕ್ಲಿಷ್ಟಕರವಾಗಿ ಪರಿಣಮಿಸಿದೆ. ಅಭ್ಯರ್ಥಿಗಳನ್ನು ಘೋಷಿಸದ 100 ಕ್ಷೇತ್ರಗಳಲ್ಲಿ ಕೊಳ್ಳೇಗಾಲ ಸಹ ಒಂದಾಗಿದ್ದು, ಈ ನೂರು ಕ್ಷೇತ್ರಗಳಲ್ಲಿ ಎರಡು ಮೂರು ಮಂದಿ ಪೈಪೋಟಿ ಯಲ್ಲಿದ್ದು, ಏಕ ಹೆಸರನ್ನು ಆಯ್ಕೆ ಮಾಡಲು ವರಿಷ್ಠರು ಕಸರತ್ತು ನಡೆಸಿದ್ದಾರೆ.

ಇಂದು ಆಯ್ಕೆ ಸಮಿತಿ ಸಭೆ: ದೆಹಲಿಯಲ್ಲಿ ಏ.4 ರಂದು ಆಯ್ಕೆ ಸಮಿತಿ ಸಭೆ ನಡೆಯಲಿದ್ದು, ಇದರಲ್ಲಿ ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ, ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಉಸ್ತುವಾರಿ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಪಕ್ಷ ನಾಯಕ ಸಿದ್ದ ರಾಮಯ್ಯ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಅಭ್ಯರ್ಥಿಗಳ ಹಣೆ ಬರಹ ನಿರ್ಧಾರವಾಗಲಿದೆ.

ಮೂರು ಹೆಸರುಗಳು ಚಾಲ್ತಿಯಲ್ಲಿವೆ: ಕೊಳ್ಳೇಗಾಲ ಕ್ಷೇತ್ರ ಕುರಿತಂತೆ ಮೂರು ಹೆಸರುಗಳು ಚಾಲ್ತಿಯಲ್ಲಿವೆ. ಮಾಜಿ ಶಾಸಕರಾದ ಎ.ಆರ್‌. ಕೃಷ್ಣಮೂರ್ತಿ, ಎಸ್‌. ಜಯಣ್ಣ ಹಾಗೂ ಎಸ್‌. ಬಾಲರಾಜು ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡಬೇಕಾಗಿದೆ. ಕೆಲವರು ಆಯ್ಕೆ ಸಮಿತಿ ಮುಂದೆ ಎರಡು ಹೆಸರುಗಳು ಮಾತ್ರ ಹೋಗಿವೆ ಎನ್ನುತ್ತಿದ್ದಾರೆ. ಆದರೆ ಅದು ಖಚಿತವಾಗಿಲ್ಲ. ಆ ಎರಡು ಹೆಸರುಗಳು ಯಾರವು ಎಂಬುದೂ ಸಹ ಗೊತ್ತಾಗಿಲ್ಲ. ಮೂವರು ಆಕಾಂಕ್ಷಿಗಳು ಸಹ ತಮ್ಮನ್ನೇ ಏಕೆ ಆಯ್ಕೆ ಮಾಡಬೇಕೆಂಬ ಬಗ್ಗೆ ಕಾರಣಗಳನ್ನು ನೀಡಿದ್ದಾರೆ.

ಎ.ಆರ್‌. ಕೃಷ್ಣಮೂರ್ತಿ ಅವರು, ಕಳೆದ ಬಾರಿ ಇದೇ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿ 52 ಸಾವಿರ ಮತಗಳನ್ನು ಪಡೆದಿದ್ದೇನೆ. ಕಾಂಗ್ರೆಸ್‌ ಶಾಸಕ ರಾಗಿ ಆಯ್ಕೆಯಾಗಿದ್ದವರೂ ಇಷ್ಟು ಮತಗಳನ್ನು ಪಡೆದಿರಲಿಲ್ಲ. ಒಂದು ಮತದ ಅಂತರದಿಂದ ಸೋತ ಬಳಿಕ 19 ವರ್ಷಗಳಿಂದ ಸತತ ಸೋಲುಗಳಿಂದ ನೊಂದಿದ್ದೇನೆ. ಈ ಬಾರಿ ಇನ್ನೊಂದು ಅವಕಾಶ ನನಗೆ ನೀಡಬೇಕು ಎಂದು ಕೇಳಿ ಕೊಂಡಿದ್ದಾರೆ.

ಎಸ್‌. ಜಯಣ್ಣ ಅವರು, 2013ರ ಚುನಾವಣೆಯಲ್ಲಿ ಗೆದ್ದು ಶಾಸಕನಾಗಿ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಕಳೆದ ಚುನಾವಣೆಯಲ್ಲಿ ಅನಾರೋಗ್ಯದ ಕಾರಣ ಟಿಕೆಟ್‌ ದೊರಕಲಿಲ್ಲ. ಈ ಬಾರಿ ನನಗೆ ಅವಕಾಶ ನೀಡಬೇಕು ಎಂದು ಕೋರಿದ್ದಾರೆ.

2013ರಿಂದಲೂ ಪಕ್ಷ ಸಂಘಟನೆಯಲ್ಲಿ ಪ್ರಮುಖವಾಗಿ ತೊಡಗಿಸಿಕೊಂಡಿದ್ದೇನೆ. ಭಾರತ್‌ ಜೋಡೋ ಯಾತ್ರೆಯ ಮೂರು ಕ್ಷೇತ್ರಗಳ ಉಸ್ತು ವಾರಿ ಸೇರಿದಂತೆ ಪಕ್ಷದ ಅನೇಕ ಕಾರ್ಯಕ್ರಮಗಳ ಸಂಘಟನೆಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಉಳಿದ ಇಬ್ಬರು ಆಕಾಂಕ್ಷಿಗಳಿಗೂ ಅವಕಾಶ ನೀಡಲಾಗಿದೆ. ನನಗೂ ಒಂದು ಅವಕಾಶ ನೀಡಬೇಕು ಎಂಬುದು ಎಸ್‌. ಬಾಲರಾಜು ಅವರ ವಾದ. ಬಾಜಿ ಕಟ್ಟಿ ನೋಡು ಬಾರಾ..! : ಚುನಾವಣೆಯಲ್ಲಿ ಯಾರು ಗೆಲ್ಲಬಹುದೆಂಬ ಬಗ್ಗೆ ಬಾಜಿ, ಪಣ ಕಟ್ಟುವುದು ಮಾಮೂಲಿ. ವಿಶೇಷವೆಂದರೆ, ಕೊಳ್ಳೇಗಾಲ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯಾರಾಗಬಹುದೆಂಬ ಬಗ್ಗೆ ಮೂವರು ಆಕಾಂಕ್ಷಿಗಳ ಬೆಂಬಲಿಗರು ಬಾಜಿ ಕಟ್ಟಿ ನೋಡು ಬಾರಾ ಎನ್ನುತ್ತಿದ್ದಾರೆ! ನಮ್ಮ ನಾಯಕರಿಗೇ ಟಿಕೆಟ್‌ ಗ್ಯಾರಂಟಿ ಎಂದು ಎ.ಆರ್‌. ಕೆ, ಜಯಣ್ಣ ಹಾಗೂ ಬಾಲರಾಜ್‌ ಬೆಂಬಲಿಗರು ಒಬ್ಬರಿಗೊಬ್ಬರು ಲಕ್ಷ ರೂ.ಗಳವರೆಗೂ ಬಾಜಿ ಕಟ್ಟಲು ಸಿದ್ಧರಾಗಿದ್ದಾರೆ!

ಇನ್ನೆರಡು ದಿನಗಳಲ್ಲಿ ಘೋಷಣೆ ನಿರೀಕ್ಷೆ : ಆಯ್ಕೆ ಸಮಿತಿ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದು ಕುತೂಹಲಕಾರಿಯಾಗಿದೆ. ಮೂವರಲ್ಲಿ ಒಬ್ಬರಿಗೆ ಟಿಕೆಟ್‌ ನೀಡಿ, ಇನ್ನಿಬ್ಬರಲ್ಲಿ ಒಬ್ಬರಿಗೆ ಲೋಕಸಭಾ ಕ್ಷೇತ್ರದ ಟಿಕೆಟ್‌, ಇನ್ನೊಬ್ಬರಿಗೆ ಎಂಎಲ್‌ ಸಿ ಸ್ಥಾನ ನೀಡುವ ಆಶ್ವಾಸನೆ ನೀಡಬಹುದು ಎಂದು ಹೇಳಲಾಗುತ್ತಿದೆ. ಒಟ್ಟಾರೆಯಾಗಿ ಇನ್ನೆರಡು ದಿನಗಳಲ್ಲಿ ಕೊಳ್ಳೇಗಾಲದ ಕಾಂಗ್ರೆಸ್‌ ಅಭ್ಯರ್ಥಿಯ ಹೆಸರು ಘೋಷಣೆಯಾಗುವ ನಿರೀಕ್ಷೆಯಿದೆ.

ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqew

Gundlupete: ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತ ದೇಹ ಪತ್ತೆ

1-wqewqe

Gundlupete; ಓವರ್ ಟೇಕ್ ಭರದಲ್ಲಿ ಅಪಘಾತ: ಬೈಕ್ ಸವಾರ ಮೃತ್ಯು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.