ಮೀನುಗಾರರ ಬೇಡಿಕೆಗೂ ಸ್ಪಂದನೆ ಸಿಗಲಿ


Team Udayavani, Mar 14, 2023, 5:01 AM IST

ಮೀನುಗಾರರ ಬೇಡಿಕೆಗೂ ಸ್ಪಂದನೆ ಸಿಗಲಿ

ದಯಾನಂದ ಕೆ. ಸುವರ್ಣ,
ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ
ರಾಜ್ಯದ ಆರ್ಥಿಕತೆಗೆ ತನ್ನದೇ ಕೊಡುಗೆ ನೀಡುವ ಮೂಲಕ ಕರಾವಳಿಯ ಆರ್ಥಿಕತೆಯನ್ನು ಸದೃಢವಾಗಿಸುವಲ್ಲಿ ಮೀನುಗಾರಿಕೆ ಪ್ರಮುಖ ಪಾತ್ರವಹಿಸುತ್ತಿದೆ. ಕಡಲ ಮೀನುಗಾರಿಕೆ ಮತ್ತು ಉಪ ಕಸುಬು ಗಳನ್ನು ಅವಲಂಬಿಸಿ ಸಾವಿರಾರು ಕುಟುಂಬಗಳು ಇವೆ. 2021-22ರಲ್ಲಿ 5.89 ಲಕ್ಷ ಮೆಟ್ರಿಕ್‌ ಟನ್‌ ಕಡಲ ಮೀನು ಉತ್ಪಾದನೆಯಾಗಿದೆ. ಕಡಲ ಮೀನುಗಾರಿಕೆಯಲ್ಲಿ 4,744 ಯಾಂತ್ರೀ ಕೃತ ದೋಣಿಗಳು, 10,084 ಮೋಟಾರು ದೋಣಿಗಳು ಹಾಗೂ 7,714 ಸಾಂಪ್ರದಾಯಿಕ ದೋಣಿಗಳಿವೆ. ಯಾಂತ್ರೀಕೃತ ದೋಣಿಗಳು ರಾಜ್ಯದ ಒಟ್ಟು ಕಡಲ ಮೀನು ಉತ್ಪಾದನೆಯ ಶೇ.85ಕ್ಕೂ ಅಧಿಕ ಪಾಲು ಹೊಂದಿವೆ. 1962.19 ಕೋಟಿ ಮೌಲ್ಯದ 1,20,427 ಮೆಟ್ರಿಕ್‌ ಟನ್‌ ಸಾಗರೋತ್ಪನ್ನಗಳನ್ನು 2021-22ರಲ್ಲಿ ಹೊರ ದೇಶ ಹಾಗೂ ರಾಜ್ಯಗಳಿಗೆ ರಫ್ತು ಮಾಡಲಾಗಿದೆ.

ಮೀನುಗಾರರ ಬಹುಪಾಲು ಬದುಕು ಕಡಲ ಮಧ್ಯೆ ದೋಣಿ ಯಲ್ಲೇ ಇರುತ್ತದೆ. ಮೀನುಗಾರರ ಅದೆಷ್ಟೋ ಬೇಡಿಕೆಗಳು ಈಡೇರದೆ ಉಳಿದುಕೊಂಡಿವೆ. ಈ ಬಾರಿಯ ಚುನಾವಣೆಯಲ್ಲಾದರೂ ರಾಜಕೀಯ ಪಕ್ಷಗಳ ಪ್ರಣಾಳಿಕೆ ಯಲ್ಲಿ ಮೀನುಗಾರರ ಪ್ರಮುಖ ಬೇಡಿಕೆಗಳು ಇರಲಿ ಮತ್ತು ಅದಕ್ಕೆ ಪರಿಹಾರವೂ ಸಿಗುವಂತಾಗಲಿ.

ಮಲ್ಪೆ ಸಹಿತ ಕೆಲವು ಬಂದರುಗಳಲ್ಲಿ ಹೂಳೆತ್ತುವ ಕಾರ್ಯ ಆಮೆಗತಿಯಲ್ಲಿ ಸಾಗುತ್ತಿದೆ. ಮೇ ಅಂತ್ಯಕ್ಕೆ ಮೀನುಗಾರಿಕೆಯ ಋತು ಮುಗಿದು ಬೋಟುಗಳನ್ನು ಲಂಗರು ಹಾಕಲಾಗುತ್ತದೆ. ಅಷ್ಟರೊಳಗೆ ಹೂಳೆತ್ತುವ ಕಾರ್ಯ ಆಗಬೇಕು.

ಪ್ರತೀ ವರ್ಷವೂ ಮೇ ಅಂತ್ಯದೊಳಗೆ ಹೂಳೆತ್ತಬೇಕು. ಬೋಟುಗಳಿಗೆ ದಿನಕ್ಕೆ ನಿಗದಿ ಮಾಡಿರುವ ಡೀಸೆಲ್‌ ಮಿತಿಯನ್ನು 300 ಲೀಟರ್‌ನಿಂದ 500 ಲೀಟರ್‌ಗೆ ಹೆಚ್ಚಿಸಬೇಕು ಮತ್ತು ಅದನ್ನು ಯಾವ ತಿಂಗಳಿನಲ್ಲಿ ಬೇಕಾದರೂ ಪಡೆಯಲು ಅವಕಾಶ ನೀಡಬೇಕು.

ನಾಡದೋಣಿ ಮೀನುಗಾರರಿಗೆ ನಿರ್ದಿಷ್ಟ ಪ್ರಮಾಣದ ಸೀಮೆಎಣ್ಣೆಯನ್ನು ಆಯಾ ತಿಂಗಳು ಸಿಗುವಂತೆ ಮಾಡಬೇಕು. ಪೆಟ್ರೋಲ್‌ ಎಂಜಿನ್‌ ಬರುವ ತನಕವೂ ಇದನ್ನು ಮುಂದುವರಿಸಬೇಕು.

ಮೀನುಗಾರ ಮಹಿಳೆಯರಿಗೆ 50,000 ರೂ. ವರೆಗೆ ಬಡ್ಡಿರಹಿತ ಸಾಲ ಪುನರ್‌ ಆರಂಭಿಸಬೇಕು ಮತ್ತು ಈ ಹಿಂದೆ ಆಗಿರುವ ಮೀನುಗಾರರ ಸಾಲಮನ್ನಾ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಆಗಬೇಕು.

ಎಲ್ಲ ಬಂದರುಗಳ ನಿರ್ವಹಣೆಗೆ ನಿರ್ದಿಷ್ಟ ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕು ಮತ್ತು ಮೀನುಗಾರಿಕೆಗೆ ನೀಡುವ ಒಟ್ಟಾರೆ ಅನುದಾನದ ಪ್ರಮಾಣವನ್ನು ಹೆಚ್ಚಿಸಬೇಕು.

ಭದ್ರತೆಯ ವಿಷಯವಾಗಿ ಎಲ್ಲ ಬಂದರುಗಳಲ್ಲೂ ಸಿಸಿ ಕೆಮರಾ ಅಳವಡಿಸಬೇಕು. ಮೀನುಗಾರರ ರಕ್ಷಣೆಗೆ ಸೀ ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಬೇಕು.

ಸಮುದ್ರದ ಮಧ್ಯದಲ್ಲಿ ಮೀನುಗಾರರ ಮೇಲೆ ಹೊರ ರಾಜ್ಯದವರಿಂದ ಆಗುವ ಹಲ್ಲೆಯನ್ನು ತಡೆಯಲು ಕ್ರಮ ಆಗಬೇಕು. ಮೀನುಗಾರರಿಗೆ ಸರಕಾರದಿಂದ ನೀಡುವ ವಸತಿ ಯೋಜನೆಯ ಅನುದಾನ ಹೆಚ್ಚಳ ಮಾಡಬೇಕು.
ಕಡಲಿನಲ್ಲಿ ಸುರಕ್ಷತೆಗೆ ಆದ್ಯತೆ ನೀಡಬೇಕು. ಮೀನುಗಾರ ಮಹಿಳೆಯರಿಗೂ ಅಗತ್ಯ ಸೌಲಭ್ಯಗಳನ್ನು ನಿರ್ದಿಷ್ಟ ಕಾಲಮಿತಿಯಲ್ಲಿ ಒದಗಿಸಬೇಕು.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.