ಲಿಂಗಾಯತ ಜಾತಿ ಉಲ್ಲೇಖ: ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಆಯೋಗಕ್ಕೆ ದೂರು
ಸಿದ್ದು ವಿರುದ್ಧವೂ ರಾಹುಲ್ ಮಾದರಿ ತಂತ್ರ
Team Udayavani, Apr 24, 2023, 7:15 AM IST
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಲಿಂಗಾಯತ ಜಾತಿಯನ್ನು ಉಲ್ಲೇಖಿಸಿ ಮುಖ್ಯಮಂತ್ರಿಗಳ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದ್ದು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಚುನಾವಣ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ.
ಲಿಂಗಾಯತ ಸಮುದಾಯದ ವಕೀಲ ಬಸವರಾಜ ಹಳ್ಳದ್ ಹಾಗೂ ಇತರರು ದೂರು ನೀಡಿದ್ದು, ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರ ಮಾಡಿರುತ್ತಾರೆ ಎಂದು ಜಾತಿಯನ್ನು ಉಲ್ಲೇಖಿಸಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಅವರ ರೀತಿಯಲ್ಲೇ ನಿರ್ದಿಷ್ಟ ಸಮುದಾಯದ ಅವಹೇಳನ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಲ್ಲಿ ಕೋರಲಾಗಿದೆ.
ಸಿದ್ದು ವಿರುದ್ಧವೂ ರಾಹುಲ್ ಮಾದರಿ ರಾಹುಲ್ ಗಾಂಧಿ ಅವರನ್ನು ಕಟ್ಟಿಹಾಕಲು ಅನುಸರಿಸಿದ ತಂತ್ರವನ್ನೇ ಬಿಜೆಪಿ, ಸಿದ್ದರಾಮಯ್ಯ ವಿರುದ್ಧವೂ ಅನುಸರಿಸುವ ಸಾಧ್ಯತೆ ಇದೆ. ಇದಕ್ಕೆ ಪೂರಕವಾಗಿ ರಾಹುಲ್ ಗಾಂಧಿ ಅವರು ಮೋದಿ ಸಮುದಾಯಕ್ಕೆ ಅಪಮಾನ ಮಾಡಿದಂತೆಯೇ ಸಿದ್ದರಾಮಯ್ಯ ಅವರು ಲಿಂಗಾಯತ ಸಮುದಾಯವನ್ನ ಅಪಮಾನಿಸಿದ್ದಾರೆ ಎಂದು ತಳುಕು ಹಾಕುವ ರೀತಿಯಲ್ಲಿ ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಜೆಪಿ ಚುನಾವಣ ಆಯೋಗಕ್ಕೆ ದೂರು ನೀಡಿರುವುದು ಇದಕ್ಕೆ ನಿದರ್ಶನವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?